AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ; ಬರ್ತ್​ಡೇ ದಿನವೇ ಅಧಿಕೃತವಾಯ್ತು ಸುದ್ದಿ

ರಶ್ಮಿಕಾ ಅವರು ಈ ಮೊದಲಿನಿಂದಲೂ ವಿಜಯ್​ ಅಭಿಮಾನಿಗಳಿಗೆ ಹತ್ತಿರ ಆಗೋಕೆ ಸಾಕಷ್ಟು ಪ್ರಯತ್ನಿಸಿದ್ದರು. ಸಾಕಷ್ಟು ಸಂದರ್ಶನಗಳಲ್ಲಿ ತಾವು ವಿಜಯ್ ಅಭಿಮಾನಿ ಎಂದು ಹೇಳಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರುತ್ತಿದೆ.  

ದಳಪತಿ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ; ಬರ್ತ್​ಡೇ ದಿನವೇ ಅಧಿಕೃತವಾಯ್ತು ಸುದ್ದಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 05, 2022 | 7:06 PM

ರಶ್ಮಿಕಾ ಮಂದಣ್ಣ (Rashmika Mandanna) ಅವರು ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ (Bollywood) ಸಾಕಷ್ಟು ಬೇಡಿಕೆ ಸೃಷ್ಟಿ ಮಾಡಿಕೊಂಡಿದ್ದಾರೆ. ರಶ್ಮಿಕಾ ಕಾಲ್​ಶೀಟ್​ ಪಡೆಯೋಕೆ ಸ್ಟಾರ್ ನಿರ್ಮಾಪಕರು ಕಾದು ಕೂತಿದ್ದಾರೆ. ಈ ಮಧ್ಯೆ ರಶ್ಮಿಕಾ ಹಲವು ಸ್ಕ್ರಿಪ್ಟ್​ಗಳನ್ನು​ ಕೇಳುತ್ತಿದ್ದಾರೆ. ತುಂಬಾನೇ ಲೆಕ್ಕಾಚಾರ ಹಾಕಿ ಸಿನಿಮಾ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಬರ್ತ್​ಡೇ ಪ್ರಯುಕ್ತ ಹೊಸಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ದಳಪತಿ ವಿಜಯ್ (Thalapathy Vijay) ನಟನೆಯ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ ಎನ್ನುವ ವಿಚಾರ ಇತ್ತೀಚೆಗೆ ಹರಿದಾಡಿತ್ತು. ಅದು ನಿಜವಾಗಿದೆ. ರಶ್ಮಿಕಾ ಬರ್ತ್​ಡೇ ದಿನ ಈ ಬಗ್ಗೆ ಘೋಷಣೆ ಆಗಿದೆ.

ವಿಜಯ್​ ಸದ್ಯ ‘ಬೀಸ್ಟ್’ ಸಿನಿಮಾದ ಪ್ರಚಾರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ನೆಲ್ಸನ್​ ದಿಲೀಪ್​ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಸನ್​ ಪಿಕ್ಚರ್ಸ್​ ಬಂಡವಾಳ ಹೂಡಿದೆ. ಈ ಸಿನಿಮಾ ಏಪ್ರಿಲ್​ 13ರಂದು ತೆರೆಗೆ ಬರುತ್ತಿದೆ. ಹೀಗಿರುವಾಗಲೇ ಅವರ 66ನೇ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಬಂದಿದೆ. ಚಿತ್ರಕ್ಕೆ ರಶ್ಮಿಕಾ ನಾಯಕಿ ಆಗಿ ಆಯ್ಕೆ ಆಗಿರುವ ವಿಚಾರ ಅಧಿಕೃತವಾಗಿದೆ.

‘ದಳಪತಿ 66’ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ರಶ್ಮಿಕಾಗೆ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಈ ಕಾರಣಕ್ಕೆ ರಶ್ಮಿಕಾಗೆ ಮಣೆ ಹಾಕಲಾಗಿದೆ.

ರಶ್ಮಿಕಾ ಅವರು ಈ ಮೊದಲಿನಿಂದಲೂ ವಿಜಯ್​ ಅಭಿಮಾನಿಗಳಿಗೆ ಹತ್ತಿರ ಆಗೋಕೆ ಸಾಕಷ್ಟು ಪ್ರಯತ್ನಿಸಿದ್ದರು. ಸಾಕಷ್ಟು ಸಂದರ್ಶನಗಳಲ್ಲಿ ತಾವು ವಿಜಯ್ ಅಭಿಮಾನಿ ಎಂದು ಹೇಳಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರುತ್ತಿದೆ.

ಹಿಂದಿಯ ‘ಮಿಷನ್​ ಮಜ್ನು’ ಹಾಗೂ ‘ಗುಡ್​ ಬೈ’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲೂ ಅವರು ಶೀಘ್ರವೇ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಂಡಿಲ್ಲ. ಇನ್ನು, ದುಲ್ಖರ್ ಸಲ್ಮಾನ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಕಾಶ್ಮೀರಿ ಹುಡುಗಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಹಿಜಾಬ್ ಧರಿಸಿ ಬಂದ ರಶ್ಮಿಕಾ ಮಂದಣ್ಣ; ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕೊಡಗಿನ ಬೆಡಗಿ

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್