AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ಮತ್ತೆ ಹೀರೋಯಿನ್​ ಆಗಲಿದ್ದಾರೆ ರಶ್ಮಿಕಾ

ಈ ಸಿನಿಮಾ ಸಾಕಷ್ಟು ಎಂಟರ್​ಟೇನ್​ಮೆಂಟ್​ನಿಂದ ಕೂಡಿರಲಿದೆಯಂತೆ. ಈ ಚಿತ್ರದ ಭಾಗವಾಗೋಕೆ ರಶ್ಮಿಕಾಗೆ ಆಫರ್​ ನೀಡಲಾಗಿದೆ. ಒಂದು ಹಂತದ ಮಾತುಕತೆ ಕೂಡ ನಡೆದಿದೆ ಎನ್ನುಲಾಗುತ್ತಿದೆ.

ಟಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ಮತ್ತೆ ಹೀರೋಯಿನ್​ ಆಗಲಿದ್ದಾರೆ ರಶ್ಮಿಕಾ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Jun 20, 2021 | 9:36 PM

Share

ನಟಿ ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ನಿರ್ಮಾಪಕರು ಸಾಲಿನಲ್ಲಿ ನಿಂತಿದ್ದಾರೆ. ಆದರೆ, ರಶ್ಮಿಕಾ ಕಥೆ, ಪಾತ್ರಗಳನ್ನು ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ತೆಲುಗು ಸ್ಟಾರ್​ ನಿರ್ದೇಶಕನ ಸಿನಿಮಾಗೆ ರಶ್ಮಿಕಾ ಮತ್ತೆ ನಾಯಕಿ ಆಗುತ್ತಿದ್ದಾರೆ.

ಕೃಷ್ಣ ಚೈತನ್ಯ ನಿರ್ದೇಶನದ ‘ಪವರ್ ಪೇಟಾ’ ಸಿನಿಮಾದಲ್ಲಿ ನಿತಿನ್ ನಟಿಸಬೇಕಿತ್ತು. ಈ ಸಿನಿಮಾ ಎರಡು ಪಾರ್ಟ್​​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗಿತ್ತು. ಆದರೆ, ಬಜೆಟ್​ ಹಾಗೂ ಕೊರೊನಾದಿಂದ ಎದುರಾದ ಸಮಸ್ಯೆಯಿಂದ ನಿತಿನ್​ ಈ ಸಿನಿಮಾದಿಂದ ಹಿಂದೆ ಸರಿದಿದ್ದಾರೆ. ಈಗ ಅವರು ವಕ್ಕಂತಂ ವಂಶಿ​ ವಂಶಿ ಜತೆ ಕೈ ಜೋಡಿಸುತ್ತಿದ್ದಾರೆ.

ಈ ಸಿನಿಮಾ ಸಾಕಷ್ಟು ಎಂಟರ್​ಟೇನ್​ಮೆಂಟ್​ನಿಂದ ಕೂಡಿರಲಿದೆಯಂತೆ. ಈ ಚಿತ್ರದ ಭಾಗವಾಗೋಕೆ ರಶ್ಮಿಕಾಗೆ ಆಫರ್​ ನೀಡಲಾಗಿದೆ. ಒಂದು ಹಂತದ ಮಾತುಕತೆ ಕೂಡ ನಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆಯಂತೆ.

ನಿತೀನ್​-ರಶ್ಮಿಕಾ ಈ ಮೊದಲು ‘ಭೀಷ್ಮ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಪಡೆದುಕೊಂಡಿತ್ತು. ರಾಸಾಯನಿಕ ಮುಕ್ತ ಕೃಷಿ ವಿಚಾರವನ್ನು ಇಟ್ಟುಕೊಂಡು ಸಿನಿಮಾದ ಕಥೆ ಹೆಣೆಯಲಾಗಿತ್ತು.

ಕನ್ನಡ ಚಿತ್ರರಂಗದಿಂದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ನಂತರ ಕಾಲಿಟ್ಟಿದ್ದು ಟಾಲಿವುಡ್​ಗೆ. ರಶ್ಮಿಕಾಗೆ ಅಲ್ಲಿ ಅಪಾರ ಖ್ಯಾತಿ ಸಿಕ್ಕಿತ್ತು. ಕಾಲಿವುಡ್​ಗೂ ಎಂಟ್ರಿಕೊಟ್ಟಿದ್ದ ರಶ್ಮಿಕಾ ನಂತರ ಬಾಲಿವುಡ್​ ಆಫರ್​ ಗಿಟ್ಟಿಸಿಕೊಂಡರು. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ‘ಗುಡ್​ ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ಗೆ ಮಗಳಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮುಖಕ್ಕೆ ಮುತ್ತಿಟ್ಟ ಔರಾ; ರಾತ್ರೋರಾತ್ರಿ ವೈರಲ್​ ಆಯ್ತು ಫೋಟೋ

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ