AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ಮತ್ತೆ ಹೀರೋಯಿನ್​ ಆಗಲಿದ್ದಾರೆ ರಶ್ಮಿಕಾ

ಈ ಸಿನಿಮಾ ಸಾಕಷ್ಟು ಎಂಟರ್​ಟೇನ್​ಮೆಂಟ್​ನಿಂದ ಕೂಡಿರಲಿದೆಯಂತೆ. ಈ ಚಿತ್ರದ ಭಾಗವಾಗೋಕೆ ರಶ್ಮಿಕಾಗೆ ಆಫರ್​ ನೀಡಲಾಗಿದೆ. ಒಂದು ಹಂತದ ಮಾತುಕತೆ ಕೂಡ ನಡೆದಿದೆ ಎನ್ನುಲಾಗುತ್ತಿದೆ.

ಟಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ಮತ್ತೆ ಹೀರೋಯಿನ್​ ಆಗಲಿದ್ದಾರೆ ರಶ್ಮಿಕಾ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Jun 20, 2021 | 9:36 PM

Share

ನಟಿ ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ನಿರ್ಮಾಪಕರು ಸಾಲಿನಲ್ಲಿ ನಿಂತಿದ್ದಾರೆ. ಆದರೆ, ರಶ್ಮಿಕಾ ಕಥೆ, ಪಾತ್ರಗಳನ್ನು ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ತೆಲುಗು ಸ್ಟಾರ್​ ನಿರ್ದೇಶಕನ ಸಿನಿಮಾಗೆ ರಶ್ಮಿಕಾ ಮತ್ತೆ ನಾಯಕಿ ಆಗುತ್ತಿದ್ದಾರೆ.

ಕೃಷ್ಣ ಚೈತನ್ಯ ನಿರ್ದೇಶನದ ‘ಪವರ್ ಪೇಟಾ’ ಸಿನಿಮಾದಲ್ಲಿ ನಿತಿನ್ ನಟಿಸಬೇಕಿತ್ತು. ಈ ಸಿನಿಮಾ ಎರಡು ಪಾರ್ಟ್​​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗಿತ್ತು. ಆದರೆ, ಬಜೆಟ್​ ಹಾಗೂ ಕೊರೊನಾದಿಂದ ಎದುರಾದ ಸಮಸ್ಯೆಯಿಂದ ನಿತಿನ್​ ಈ ಸಿನಿಮಾದಿಂದ ಹಿಂದೆ ಸರಿದಿದ್ದಾರೆ. ಈಗ ಅವರು ವಕ್ಕಂತಂ ವಂಶಿ​ ವಂಶಿ ಜತೆ ಕೈ ಜೋಡಿಸುತ್ತಿದ್ದಾರೆ.

ಈ ಸಿನಿಮಾ ಸಾಕಷ್ಟು ಎಂಟರ್​ಟೇನ್​ಮೆಂಟ್​ನಿಂದ ಕೂಡಿರಲಿದೆಯಂತೆ. ಈ ಚಿತ್ರದ ಭಾಗವಾಗೋಕೆ ರಶ್ಮಿಕಾಗೆ ಆಫರ್​ ನೀಡಲಾಗಿದೆ. ಒಂದು ಹಂತದ ಮಾತುಕತೆ ಕೂಡ ನಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆಯಂತೆ.

ನಿತೀನ್​-ರಶ್ಮಿಕಾ ಈ ಮೊದಲು ‘ಭೀಷ್ಮ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಪಡೆದುಕೊಂಡಿತ್ತು. ರಾಸಾಯನಿಕ ಮುಕ್ತ ಕೃಷಿ ವಿಚಾರವನ್ನು ಇಟ್ಟುಕೊಂಡು ಸಿನಿಮಾದ ಕಥೆ ಹೆಣೆಯಲಾಗಿತ್ತು.

ಕನ್ನಡ ಚಿತ್ರರಂಗದಿಂದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ನಂತರ ಕಾಲಿಟ್ಟಿದ್ದು ಟಾಲಿವುಡ್​ಗೆ. ರಶ್ಮಿಕಾಗೆ ಅಲ್ಲಿ ಅಪಾರ ಖ್ಯಾತಿ ಸಿಕ್ಕಿತ್ತು. ಕಾಲಿವುಡ್​ಗೂ ಎಂಟ್ರಿಕೊಟ್ಟಿದ್ದ ರಶ್ಮಿಕಾ ನಂತರ ಬಾಲಿವುಡ್​ ಆಫರ್​ ಗಿಟ್ಟಿಸಿಕೊಂಡರು. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ‘ಗುಡ್​ ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ಗೆ ಮಗಳಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮುಖಕ್ಕೆ ಮುತ್ತಿಟ್ಟ ಔರಾ; ರಾತ್ರೋರಾತ್ರಿ ವೈರಲ್​ ಆಯ್ತು ಫೋಟೋ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ