AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ಮತ್ತೆ ಹೀರೋಯಿನ್​ ಆಗಲಿದ್ದಾರೆ ರಶ್ಮಿಕಾ

ಈ ಸಿನಿಮಾ ಸಾಕಷ್ಟು ಎಂಟರ್​ಟೇನ್​ಮೆಂಟ್​ನಿಂದ ಕೂಡಿರಲಿದೆಯಂತೆ. ಈ ಚಿತ್ರದ ಭಾಗವಾಗೋಕೆ ರಶ್ಮಿಕಾಗೆ ಆಫರ್​ ನೀಡಲಾಗಿದೆ. ಒಂದು ಹಂತದ ಮಾತುಕತೆ ಕೂಡ ನಡೆದಿದೆ ಎನ್ನುಲಾಗುತ್ತಿದೆ.

ಟಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ಮತ್ತೆ ಹೀರೋಯಿನ್​ ಆಗಲಿದ್ದಾರೆ ರಶ್ಮಿಕಾ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Jun 20, 2021 | 9:36 PM

Share

ನಟಿ ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ಅವರ ಕಾಲ್​ಶೀಟ್​ ಪಡೆಯೋಕೆ ನಿರ್ಮಾಪಕರು ಸಾಲಿನಲ್ಲಿ ನಿಂತಿದ್ದಾರೆ. ಆದರೆ, ರಶ್ಮಿಕಾ ಕಥೆ, ಪಾತ್ರಗಳನ್ನು ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ತೆಲುಗು ಸ್ಟಾರ್​ ನಿರ್ದೇಶಕನ ಸಿನಿಮಾಗೆ ರಶ್ಮಿಕಾ ಮತ್ತೆ ನಾಯಕಿ ಆಗುತ್ತಿದ್ದಾರೆ.

ಕೃಷ್ಣ ಚೈತನ್ಯ ನಿರ್ದೇಶನದ ‘ಪವರ್ ಪೇಟಾ’ ಸಿನಿಮಾದಲ್ಲಿ ನಿತಿನ್ ನಟಿಸಬೇಕಿತ್ತು. ಈ ಸಿನಿಮಾ ಎರಡು ಪಾರ್ಟ್​​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗಿತ್ತು. ಆದರೆ, ಬಜೆಟ್​ ಹಾಗೂ ಕೊರೊನಾದಿಂದ ಎದುರಾದ ಸಮಸ್ಯೆಯಿಂದ ನಿತಿನ್​ ಈ ಸಿನಿಮಾದಿಂದ ಹಿಂದೆ ಸರಿದಿದ್ದಾರೆ. ಈಗ ಅವರು ವಕ್ಕಂತಂ ವಂಶಿ​ ವಂಶಿ ಜತೆ ಕೈ ಜೋಡಿಸುತ್ತಿದ್ದಾರೆ.

ಈ ಸಿನಿಮಾ ಸಾಕಷ್ಟು ಎಂಟರ್​ಟೇನ್​ಮೆಂಟ್​ನಿಂದ ಕೂಡಿರಲಿದೆಯಂತೆ. ಈ ಚಿತ್ರದ ಭಾಗವಾಗೋಕೆ ರಶ್ಮಿಕಾಗೆ ಆಫರ್​ ನೀಡಲಾಗಿದೆ. ಒಂದು ಹಂತದ ಮಾತುಕತೆ ಕೂಡ ನಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆಯಂತೆ.

ನಿತೀನ್​-ರಶ್ಮಿಕಾ ಈ ಮೊದಲು ‘ಭೀಷ್ಮ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಪಡೆದುಕೊಂಡಿತ್ತು. ರಾಸಾಯನಿಕ ಮುಕ್ತ ಕೃಷಿ ವಿಚಾರವನ್ನು ಇಟ್ಟುಕೊಂಡು ಸಿನಿಮಾದ ಕಥೆ ಹೆಣೆಯಲಾಗಿತ್ತು.

ಕನ್ನಡ ಚಿತ್ರರಂಗದಿಂದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ನಂತರ ಕಾಲಿಟ್ಟಿದ್ದು ಟಾಲಿವುಡ್​ಗೆ. ರಶ್ಮಿಕಾಗೆ ಅಲ್ಲಿ ಅಪಾರ ಖ್ಯಾತಿ ಸಿಕ್ಕಿತ್ತು. ಕಾಲಿವುಡ್​ಗೂ ಎಂಟ್ರಿಕೊಟ್ಟಿದ್ದ ರಶ್ಮಿಕಾ ನಂತರ ಬಾಲಿವುಡ್​ ಆಫರ್​ ಗಿಟ್ಟಿಸಿಕೊಂಡರು. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ‘ಗುಡ್​ ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ಗೆ ಮಗಳಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮುಖಕ್ಕೆ ಮುತ್ತಿಟ್ಟ ಔರಾ; ರಾತ್ರೋರಾತ್ರಿ ವೈರಲ್​ ಆಯ್ತು ಫೋಟೋ

ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?