Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Vijay Devarakonda: ಇದೇ ವಿಚಾರದ ಸಲುವಾಗಿ ಈ ಹಿಂದೆ ರಜನಿಕಾಂತ್​ ಮತ್ತು ಮಹೇಶ್​ ಬಾಬು ಅಭಿಮಾನಿಗಳ ನಡುವೆ ಕ್ಲ್ಯಾಶ್​ ಆಗಿತ್ತು. ಈಗ ನೆಟ್ಟಿಗರು ರಶ್ಮಿಕಾ ಮಂದಣ್ಣ ಅವರಿಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ.

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​
ವಿಜಯ್​ ದೇವರಕೊಂಡ - ರಶ್ಮಿಕಾ ಮಂದಣ್ಣ
Follow us
| Updated By: ರಾಜೇಶ್ ದುಗ್ಗುಮನೆ

Updated on: May 10, 2021 | 5:12 PM

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್​ ದೇವರಕೊಂಡ ನಡುವೆ ಎಂಥ ಆಪ್ತತೆ ಇದೆ ಎಂಬುದನ್ನು ಹೊಸದಾಗಿ ಹೇಳಬೇಕಾದ ಅನಿವಾರ್ಯತೆ ಇಲ್ಲ. ಗೀತಾ ಗೋವಿಂದಂ ಮತ್ತು ಡಿಯರ್​ ಕಾಮ್ರೇಡ್ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ ಬಳಿಕ ಇಬ್ಬರ ನಡುವಿನ ಒಡನಾಟ ಜೋರಾಯಿತು. ಮೇ 9ರಂದು ವಿಜಯ್​ ದೇವರಕೊಂಡ ಬರ್ತ್​ಡೇ. ಆದರೆ ಸರಿಯಾದ ಸಮಯಕ್ಕೆ ವಿಶ್​ ಮಾಡಲು ರಶ್ಮಿಕಾ ಮರೆತರು. ಕೊಂಚ ತಡವಾಗಿ ಟ್ವಿಟರ್ ಮೂಲಕ ಶುಭ ಕೋರಿದ ಅವರು ಒಂದು ತಪ್ಪು ಮಾಡಿದ್ದಾರೆ.

‘ಕ್ಷಮೆ ಇರಲಿ. ನಾನು ತಡ ಮಾಡಿದ್ದೇನೆ. ಹುಟ್ಟುಹಬ್ಬದ ಶುಭಾಶಯಗಳು ಸೂಪರ್​ ಸ್ಟಾರ್​ ವಿಜಯ್​ ದೇವರಕೊಂಡ’ ಎಂದು ರಶ್ಮಿಕಾ ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಸೂಪರ್​ ಸ್ಟಾರ್​ ಎಂಬ ಪದ ಬಳಸಿರುವುದು ಹಲವರ ಕೋಪಕ್ಕೆ ಕಾರಣ ಆಗಿದೆ. ನಿನ್ನೆ ಮೊನ್ನೆ ಯಶಸ್ಸು ಕಂಡಿರುವ ವಿಜಯ್​ ದೇವರಕೊಂಡ ಅವರನ್ನು ಸೂಪರ್​ ಸ್ಟಾರ್​ ಎಂದು ಕರೆದಿರುವುದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿಕ್ಕ ಸಿಕ್ಕವರಿಗೆಲ್ಲ ಸೂಪರ್​ ಸ್ಟಾರ್​ ಎಂಬ ಪಟ್ಟ ನೀಡಲು ಅದೇನು ಸುಲಭಕ್ಕೆ ಸಿಗುವ ಟ್ಯಾಗ್​ ಅಲ್ಲ ಎಂದು ಜನರು ಕಮೆಂಟ್​ ಮಾಡಿದ್ದಾರೆ.

ರಜನಿಕಾಂತ್​ ಅವರಿಗೆ ಸೂಪರ್​ ಸ್ಟಾರ್​ ಎಂದು ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಾರೆ. ಅದಕ್ಕೂ ಮುನ್ನ ಮಹೇಶ್​ ಬಾಬು ತಂದೆ ಕೃಷ್ಣ ಅವರಿಗೂ ಸೂಪರ್​ ಸ್ಟಾರ್​ ಎಂಬ ಬಿರುದು ಇತ್ತು. ಬಳಿಕ ಮಹೇಶ್​ ಬಾಬು ಅವರನ್ನು ಕೂಡ ಅಭಿಮಾನಿಗಳು ಸೂಪರ್​ ಸ್ಟಾರ್​ ಎಂದು ಕರೆಯಲು ಆರಂಭಿಸಿದರು. ಮಹೇಶ್​ ಬಾಬು ಸಿನಿಮಾಗಳು ತಮಿಳಿಗೆ ಡಬ್​ ಆದಾಗ ಅದರಲ್ಲಿ ಮಹೇಶ್​ ಬಾಬು ಅವರನ್ನು ಸೂಪರ್​ ಸ್ಟಾರ್​ ಎಂದು ಕರೆದಿದ್ದಕ್ಕೆ ರಜನಿಕಾಂತ್​ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಉದಾಹರಣೆ ಇದೆ. ಈಗ ವಿಜಯ್​ ದೇವರಕೊಂಡಗೆ ಸೂಪರ್​ಸ್ಟಾರ್​ ಎಂದಿರುವ ರಶ್ಮಿಕಾ ಕೂಡ ನೆಟ್ಟಿಗರ ಟ್ರೋಲ್​ಗೆ ಗುರಿ ಆಗುತ್ತಿದ್ದಾರೆ.

​ಸದ್ಯ ಈ ಬಗ್ಗೆ ರಶ್ಮಿಕಾ ಮಂದಣ್ಣ ಯಾವುದೇ ಪ್ರತಿಕ್ರಿಯೆ ನೀಡುವ ಗೋಜಿಗೆ ಕೈ ಹಾಕಿಲ್ಲ. ಬಹುಭಾಷೆಯ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ತೆಲುಗಿನಲ್ಲಿ ಪುಷ್ಪ, ಹಿಂದಿಯಲ್ಲಿ ಮಿಷನ್​ ಮಜ್ನು, ಗುಡ್​ ಬೈ ಸೇರಿದಂತೆ ಅನೇಕ ಸಿನಿಮಾಗಳು ಅವರ ಕೈಯಲ್ಲಿವೆ. ವಿಜಯ್​ ದೇವರಕೊಂಡ ಕೂಡ ಲೈಗರ್​ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ.

ಇದನ್ನೂ ಓದಿ:

Rashmika Mandanna: ವಿಜಯ್​ ದೇವರಕೊಂಡ ಅಲ್ಲ; ಉಂಗುರ ತೋರಿಸಿ ಬಾಯ್​ಫ್ರೆಂಡ್​ ಯಾರು ಅಂತ ಹೇಳಿದ ರಶ್ಮಿಕಾ

Rashmika Mandanna: ಬಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ನೋ ಎಂದ ರಶ್ಮಿಕಾ; ಸ್ಪಷ್ಟನೆ ನೀಡಿದ ನಟಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ