AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ?

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಅದ್ದೂರಿ ರಾಜ ವೈಭವದ ವಿವಾಹ ಉದಯಪುರದಲ್ಲಿ ನೆರವೇರಿದೆ. ಇಬ್ಬರೂ ರಾಜ-ಯುವರಾಣಿಯಂತೆ ಮಿಂಚಿದ್ದು, ಅವರು ಧರಿಸಿದ್ದ ಚಿನ್ನಾಭರಣಗಳು ಎಲ್ಲರ ಗಮನ ಸೆಳೆದಿವೆ. ರಶ್ಮಿಕಾ-ವಿಜಯ್ ಧರಿಸಿದ ಆಭರಣಗಳ ಒಟ್ಟು ಮೌಲ್ಯ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ?
ರಶ್ಮಿಕಾ-ವಿಜಯ್
ರಾಜೇಶ್ ದುಗ್ಗುಮನೆ
|

Updated on: Feb 28, 2026 | 7:38 AM

Share

ನಟಿ ರಶ್ಮಿಕಾ ಮಂದಣ್ಣ (Rashmika) ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ಈ ವಿವಾಹದ ಥೀಮ್ ರಾಜರ ಶೈಲಿಯಲ್ಲಿ ಇತ್ತು. ಈ ಕಾರಣದಿಂದಲೇ ವಿಜಯ್ ದೇವರಕೊಂಡ ಅವರು ರಾಜನ ಲುಕ್​​ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ಅವರು ಥೇಟ್ ಯುವರಾಣಿಯಂತೆ ಗಮನ ಸೆಳೆದಿದ್ದಾರೆ. ಈ ಮಧ್ಯೆ ಇವರು ಧರಿಸಿದ ಚಿನ್ನದ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಚರ್ಚೆ ನಡೆದಿದೆ.

ಸಾಮಾನ್ಯವಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುವಾಗ ಅದ್ದೂರಿಯಾಗಿಯೇ ಮದುವೆ ಆಗುತ್ತಾರೆ. ಇದಕ್ಕೆ ರಶ್ಮಿಕಾ-ವಿಜಯ್ ಕೂಡ ಹೊರತಾಗಿಲ್ಲ. ತಮ್ಮ ಮದುವೆಗೆ ಅವರು ಉದಯಪುರವನ್ನು ಆಯ್ಕೆ ಮಾಡಿಕೊಂಡಾಗಲೇ ಅಭಿಮಾನಿಗಳಿಗೆ ಕುತೂಹಲ ಮೂಡಿತ್ತು. ಈ ಕುತೂಹಲ ದಿನ ಕಳೆದಂತೆ ಹೆಚ್ಚುತ್ತಲೇ ಬಂತು. ಮದುವೆ ಅದ್ದೂರಿಯಾಗಿ ನಡೆದಿದೆ ಎಂಬ ಸೂಚನೆ ಅಭಿಮಾನಿಗಳಿಗೆ ಇತ್ತು. ಆದರೆ, ಎಷ್ಟು ಅದ್ದೂರಿಯಾಗಿ ನಡೆದಿದೆ ಎಂಬ ಕಲ್ಪನೆ ಇರಲಿಲ್ಲ. ಕೊನೆಗೂ ಅದಕ್ಕೆ ಉತ್ತರ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಫೋಟೋ ಹಂಚಿಕೊಳ್ಳುವ ಮೂಲಕ ಮದುವೆಯ ಅದ್ದೂರಿತನ ಹೇಗಿತ್ತು ಎಂಬುದನ್ನು ಅಭಿಮಾನಿಗಳಿಗೂ ತೋರಿಸಿದ್ದರು. ಈ ವೇಳೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಧರಿಸಿದ ಚಿನ್ನದ ಸರ, ಚಿನ್ನದ ಬಳೆಗಳು ಗಮನ ಸೆಳೆದವು. ರಶ್ಮಿಕಾ ಒಬ್ಬರೇ 1.5-2 ಕೆಜಿ ಚಿನ್ನ ಧರಿಸಿದ್ದರು ಎನ್ನಲಾಗಿದೆ. ವಿಜಯ್ ಕೂಡ ಸಾಕಷ್ಟು ಚಿನ್ನ ಧರಿಸಿದ್ದರು.

ಸದ್ಯ ಒಂದು ಕೆಜಿ ಚಿನ್ನ ಒಂದೂವರೆ ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಆದರೆ, ರಶ್ಮಿಕಾ ಹಾಗೂ ವಿಜಯ್ ಧರಿಸಿದ ಆಭರಣಗಳಿಗೆ ಕೇವಲ ಚಿನ್ನದ ಬೆಲೆ ಮಾತ್ರ ಅನ್ವಯ ಆಗೋದಿಲ್ಲ. ಇವನ್ನು ಮಾಡಲು ಸಾಕಷ್ಟು ಶ್ರಮ ಬೇಕು. ಅಲ್ಲದೆ, ಇದರಲ್ಲಿ ಸಾಕಷ್ಟು ಡೈಮಂಡ್​​​ಗಳ ಬಳಕೆ ಮಾಡಲಾಗಿದೆ. ಈ ಎಲ್ಲಾ ಕಾರಣದಿಂದ ಇಬ್ಬರೂ ಧರಿಸಿದ ಆಭರಣಗಳ ಬೆಲೆ 7 ಕೋಟಿ ರೂಪಾಯಿಗೂ ಅಧಿಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಮದುವೆ ಮುಗಿಸಿ ಕೈ-ಕೈ ಹಿಡಿದುಕೊಂಡು ಹೊರಟ ವಿಜಯ್-ರಶ್ಮಿಕಾ: ವಿಡಿಯೋ

ರಶ್ಮಿಕಾ ಧರಿಸಿದ ಆಭರಗಣ ಬೆಲೆ ಸುಮಾರು ಐದು ಕೋಟಿ ರೂಪಾಯಿ ಹಾಗೂ ವಿಜಯ್ ದೇವರಕೊಂಡ ಧರಿಸಿದ ಆಭರಣಗಳ ಬೆಲೆ 2 ಕೋಟಿ ರೂಪಾಯಿ ಎಂದು ಹೇಳಲಾಗುತ್ತಾ ಇದೆ. ಈ ಬಗ್ಗೆ ದಂಪತಿ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?