AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ: ಅತಿಥಿಗಳಿಗೆ ಜಪಾನೀಸ್ ಖಾದ್ಯ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಪ್ರೇಮಕ್ಕೆ ಈಗ ಮದುವೆಯ ಮುದ್ರೆ ಬೀಳುತ್ತಿದೆ. ಎರಡೂ ಕುಟುಂಬಗಳು ಈಗಾಗಲೇ ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್ ತಲುಪಿವೆ. ಮದುವೆಯಲ್ಲಿ ಸುಮಾರು 100 ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಕಲ ಸಿದ್ಧತೆ ನಡೆದಿದೆ.

ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ: ಅತಿಥಿಗಳಿಗೆ ಜಪಾನೀಸ್ ಖಾದ್ಯ
Rashmika Mandanna, Vijay Deverakonda
ಮದನ್​ ಕುಮಾರ್​
|

Updated on: Feb 24, 2026 | 7:13 PM

Share

ಅಭಿಮಾನಿಗಳ ಕಾಯುವಿಕೆ ಕೊನೆಗೂ ಅಂತ್ಯಗೊಂಡಿದೆ. ಹಲವು ವರ್ಷಗಳಿಂದ ತಮ್ಮ ಪ್ರೇಮಕಥೆಯನ್ನು ಗುಟ್ಟಾಗಿ ಇಟ್ಟಿದ್ದ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆಯನ್ನು ಅಧಿಕೃತವಾಗಿ ಘೋಷಿಸಿದರು. ರಶ್ಮಿಕಾ ಮತ್ತು ವಿಜಯ್ (Vijay Deverakonda) ಅವರ ವಿವಾಹವು ರಾಜಸ್ಥಾನದ ಉದಯಪುರದ ಖಾಸಗಿ ಹೋಟೆಲ್‌ನಲ್ಲಿ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಲಿದೆ. ಅವರ ವಿವಾಹ ಸ್ಥಳದಲ್ಲಿ ಮೂರು ಹಂತದ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಪೊಲೀಸರು, ಹೈದರಾಬಾದ್‌ನ ವಿಶೇಷ ತಂಡ ಹಾಗೂ ಅಂತಾರಾಷ್ಟ್ರೀಯ ಭದ್ರತೆಯ ನಡುವೆ ರಶ್ಮಿಕಾ, ವಿಜಯ್ ಮದುವೆ ಸಮಾರಂಭ ನಡೆಯಲಿದೆ. ಮದುವೆಗೆ ಸಂಬಂಧಿಸಿದ ಪ್ರತಿಯೊಂದು ಸಣ್ಣ ವಿಷಯವನ್ನೂ ಕೂಡ ರಹಸ್ಯವಾಗಿಡಲು ಈ ಜೋಡಿ ನಿರ್ಧರಿಸಿದೆ. ಅರಾವಳಿ ಬೆಟ್ಟಗಳ ನಡುವೆ ಇರುವ ಖಾಸಗಿ ಹೋಟೆಲ್​​ನಲ್ಲಿ ಮದುವೆ ನಡೆಯಲಿದೆ. ಇದನ್ನು ವಿರೋಶ್ ವಿವಾಹ ಎಂದು ಕರೆಯಲಾಗುತ್ತಿದೆ.

ವಿವಾಹ ಆಚರಣೆಗಳು ಮಂಗಳವಾರದಿಂದಲೇ (ಫೆಬ್ರವರಿ 24) ಪ್ರಾರಂಭವಾಗಿವೆ. ಮೆಹಂದಿ ಸಮಾರಂಭ ಮಂಗಳವಾರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಸಂಗೀತ್ ಸೆರೆಮನಿ ಫೆಬ್ರವರಿ 25ರಂದು ನಡೆಯಲಿವೆ. ಈ ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರು ಭಾಗವಹಿಸಲಿದ್ದಾರೆ. ಅಲ್ಲದೇ, ಅವರ ಮದುವೆಗೆ ಬರುವ ಅತಿಥಿಗಳಿಗಾಗಿ ಜಪಾನೀಸ್ ಖಾದ್ಯಗಳನ್ನು ತಯಾರಿಸಲಾಗುತ್ತದೆ.

ಇದನ್ನೂ ಓದಿ: ವಿಜಯ್ ಪಾಲಕರು ರಶ್ಮಿಕಾ ಮಂದಣ್ಣಗೆ ಹಾಕಿದ ಷರತ್ತು ಏನು?

ವರದಿಗಳ ಪ್ರಕಾರ, ಸಂಪೂರ್ಣ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ವಿವಾಹದ ಸಮಯದಲ್ಲಿ ಕಟ್ಟುನಿಟ್ಟಾಗಿ ಫೋನ್ ಬಳಕೆ ನಿಷೇಧಿಸಲಾಗಿದೆ. ಮದುವೆಗೆ ಕೇವಲ 100 ಅತಿಥಿಗಳನ್ನು ಮಾತ್ರ ಆಹ್ವಾನಿಸಲಾಗಿದೆ. ಇನ್ನುಳಿದ ಸ್ನೇಹಿತರಿಗಾಗಿ ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್