AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಿ51’ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ; ಧನುಶ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯೋ ಖುಷಿ

ಈ ಮೊದಲು ಕಾರ್ತಿ ನಟನೆಯ ‘ಸುಲ್ತಾನ್​’, ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾಗಳಿಗೆ ರಶ್ಮಿಕಾ ಮಂದಣ್ಣ ಅವರು ಹೀರೋಯಿನ್​ ಆಗಿದ್ದರು. ಈಗ ‘ಡಿ 51’ ಮೂಲಕ ಅವರ ಖಾತೆಗೆ ಮತ್ತೊಂದು ತಮಿಳು ಸಿನಿಮಾ ಸೇರ್ಪಡೆ ಆದಂತಾಗಿದೆ. ಈ ಅವಕಾಶ ಪಡೆದಿರುವುದಕ್ಕೆ ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಡಿ51’ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ; ಧನುಶ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯೋ ಖುಷಿ
ಧನುಶ್​, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Aug 14, 2023 | 3:05 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಡೀ ಸೌತ್​ ಇಂಡಿಯಾದಲ್ಲಿ ಅವರದ್ದೇ ಹವಾ. ಅದರಲ್ಲೂ ತೆಲುಗು ಮತ್ತು ತಮಿಳಿನಲ್ಲಿ ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿದೆ. ಎಲ್ಲ ಟಾಪ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಸೇರ್ಪಡೆ ‘ಡಿ51’ ಸಿನಿಮಾ. ಧನುಶ್​ ನಟನೆಯ 51ನೇ ಸಿನಿಮಾವನ್ನು ‘ಡಿ 51’ (D 51 Movie) ಎಂದು ಕರೆಯಲಾಗುತ್ತಿದೆ. ಈ ಚಿತ್ರದಲ್ಲಿನ ನಾಯಕಿ ಪಾತ್ರಕ್ಕೆ ರಶ್ಮಿಕಾ ಆಯ್ಕೆ ಆಗಿದ್ದಾರೆ. ಈ ಖುಷಿಯ ಸಮಾಚಾರವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಈ ಸುದ್ದಿ ಖುಷಿ ನೀಡಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ‘ಡಿ 51’ ಸಿನಿಮಾದಲ್ಲಿ ಧನುಶ್​ (Dhanush)​ ಅವರು ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರಿಗೆ ತೆಲುಗಿನಿಂದ ಆಫರ್​ ಬಂತು. ಬಳಿಕ ಕಾಲಿವುಡ್​ ಕೂಡ ಕೈ ಬೀಸಿ ಕರೆಯಿತು. ಈ ಮೊದಲು ಕಾರ್ತಿ ನಟನೆಯ ‘ಸುಲ್ತಾನ್​’, ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾಗಳಿಗೆ ರಶ್ಮಿಕಾ ಮಂದಣ್ಣ ಅವರು ಹೀರೋಯಿನ್​ ಆಗಿದ್ದರು. ಈಗ ‘ಡಿ 51’ ಮೂಲಕ ಅವರ ಖಾತೆಗೆ ಮತ್ತೊಂದು ತಮಿಳು ಸಿನಿಮಾ ಸೇರ್ಪಡೆ ಆದಂತಾಗಿದೆ.

ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಪೋಸ್ಟ್​:

ಧನುಶ್​ ಅವರು ಈಗ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಬಳಿಕ ಅವರು 50ನೇ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಾರೆ. ಆ ಬಳಿಕ ‘ಡಿ 51’ ಸಿನಿಮಾ ಸೆಟ್ಟೇರಲಿದೆ. ಆ ಸಿನಿಮಾಗೆ ಶೇಖರ್​ ಕಮ್ಮುಲ ಅವರು ನಿರ್ದೇಶನ ಮಾಡಲಿದ್ದಾರೆ. ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಶ್​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

ಇದನ್ನೂ ಓದಿ: ‘ಡಿಸೆಂಬರ್ ನನಗೆ ಲಕ್ಕಿ’; ತಿಂಗಳ ವಿಶೇಷತೆ ಬಗ್ಗೆ ಹೇಳಿಕೊಂಡ ರಶ್ಮಿಕಾ ಮಂದಣ್ಣ

ಬಾಲಿವುಡ್​ನಲ್ಲೂ ರಶ್ಮಿಕಾ ಮಂದಣ್ಣ ಅವರು ಬ್ಯುಸಿ ಆಗಿದ್ದಾರೆ. ರಣಬೀರ್​ ಕಪೂರ್​ ಜೊತೆ ಅವರು ನಟಿಸಿರುವ ‘ಅನಿಮಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಪ್ರಿವ್ಯೂ ವಿಡಿಯೋ ಸಖತ್​ ಗಮನ ಸೆಳೆದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್​ ಆಗಲಿದೆ. ‘ಅನಿಮಲ್​’ ತೆರೆಕಂಡ ಬಳಿಕ ಬಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣ ಅವರ ಚಾರ್ಮ್​ ಇನ್ನಷ್ಟು ಹೆಚ್ಚಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?