AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು.

‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on:Mar 29, 2024 | 7:44 AM

Share

ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಎಲ್ಲರೂ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೂಡ ವಿಜಯ್ ದೇವರಕೊಂಡಗೆ ವಿಶ್ ಮಾಡಿದ್ದಾರೆ. ‘ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್’ ಎಂದು ಪ್ರಿತಿಯಿಂದ ಶುಭಕೋರಿದ್ದಾರೆ.

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ಅದೇ ರೀತಿ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಾರೆ.

ಇದನ್ನೂ ಓದಿ: ತೆಲುಗು ನಟ ವಿಜಯ್ ದೇವರಕೊಂಡ ಅವರ ಮನೆ ಹೇಗಿದೆ? ಇಲ್ಲಿವೆ ಕೆಲ ಚಿತ್ರಗಳು

‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ರಶ್ಮಿಕಾ ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ ಡಾರ್ಲಿಂಗ್​​ಗಳಾದ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಪೆಟ್ಲಾಗೆ (ನಿರ್ದೇಶಕ) ವಿಶ್ ಮಾಡುತ್ತೇನೆ. ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಸಾಕಷ್ಟು ಎಗ್ಸೈಟ್ ಆಗಿದ್ದೇನೆ. ಪಾರ್ಟಿ ಬೇಕು’ ಎಂದಿರುವ ಅವರು, ಮೃಣಾಲ್​ಗೆ ‘ಆಲ್ ದಿ ಬೆಸ್ಟ್ ಮೈ ಲವ್’ ಎಂದು ಬರೆದಿದ್ದಾರೆ.

‘ಫ್ಯಾಮಿಲಿ ಸ್ಟಾರ್’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಟ್ರೇಲರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ವಿಜಯ್ ದೇವರಕೊಂಡ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಸಿನಿಮಾದಲ್ಲಿ ಅವರು ಸಮಂತಾ ಜೊತೆ ತೆರೆ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:43 am, Fri, 29 March 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ