AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು.

‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on:Mar 29, 2024 | 7:44 AM

Share

ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಎಲ್ಲರೂ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೂಡ ವಿಜಯ್ ದೇವರಕೊಂಡಗೆ ವಿಶ್ ಮಾಡಿದ್ದಾರೆ. ‘ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್’ ಎಂದು ಪ್ರಿತಿಯಿಂದ ಶುಭಕೋರಿದ್ದಾರೆ.

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ಅದೇ ರೀತಿ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಾರೆ.

ಇದನ್ನೂ ಓದಿ: ತೆಲುಗು ನಟ ವಿಜಯ್ ದೇವರಕೊಂಡ ಅವರ ಮನೆ ಹೇಗಿದೆ? ಇಲ್ಲಿವೆ ಕೆಲ ಚಿತ್ರಗಳು

‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ರಶ್ಮಿಕಾ ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ ಡಾರ್ಲಿಂಗ್​​ಗಳಾದ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಪೆಟ್ಲಾಗೆ (ನಿರ್ದೇಶಕ) ವಿಶ್ ಮಾಡುತ್ತೇನೆ. ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಸಾಕಷ್ಟು ಎಗ್ಸೈಟ್ ಆಗಿದ್ದೇನೆ. ಪಾರ್ಟಿ ಬೇಕು’ ಎಂದಿರುವ ಅವರು, ಮೃಣಾಲ್​ಗೆ ‘ಆಲ್ ದಿ ಬೆಸ್ಟ್ ಮೈ ಲವ್’ ಎಂದು ಬರೆದಿದ್ದಾರೆ.

‘ಫ್ಯಾಮಿಲಿ ಸ್ಟಾರ್’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಟ್ರೇಲರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ವಿಜಯ್ ದೇವರಕೊಂಡ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಸಿನಿಮಾದಲ್ಲಿ ಅವರು ಸಮಂತಾ ಜೊತೆ ತೆರೆ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:43 am, Fri, 29 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ