AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ವಿಜಯ್​ ದೇವರಕೊಂಡ ಕೂಡ ಅಲ್ಲಿಯೇ ಇದ್ದಾರೆ.

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್
TV9 Web
| Edited By: |

Updated on: Aug 22, 2021 | 11:16 AM

Share

ವಿಜಯ್​ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಬೆಸ್ಟ್ ಫ್ರೆಂಡ್ಸ್​​. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಕೂಡ ಇದೆ. ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಜಿಮ್​ನಲ್ಲಿ ಒಟ್ಟಿಗೆ ವರ್ಕೌಟ್​ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ವಿಜಯ್​ ದೇವರಕೊಂಡ ಕೂಡ ಅಲ್ಲಿಯೇ ಇದ್ದಾರೆ. ಹೀಗಾಗಿ, ಹೈದರಾಬಾದ್​ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ್ದಾರೆ. ವರ್ಕೌಟ್​ ಮುಗಿದ ನಂತರದಲ್ಲಿ ಇಬ್ಬರೂ ಸೆಲ್ಫಿ ತೆಗೆದುಕೊಂಡಿದ್ದಾರೆ. ಸದ್ಯ, ಈ ಫಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

‘ಗೀತ ಗೋವಿಂದಂ’ ಸಿನಿಮಾ ರಿಲೀಸ್​ಗೂ ಮುನ್ನ ರಶ್ಮಿಕಾ ಹಾಗೂ ವಿಜಯ್​ ನಡುವೆ ಏನೋ ನಡೆಯುತ್ತಿದೆ ಎನ್ನುವ ಮಾತು ಹರಿದಾಡಿತ್ತು. ಆದರೆ, ನಾವು ಬೆಸ್ಟ್​ ಫ್ರೆಂಡ್ಸ್​ ಎನ್ನುವುದನ್ನು ಇಬ್ಬರೂ ಸ್ಪಷ್ಟಪಡಿಸಿದ್ದರು. ಈಗ ಇವರಿಬ್ಬರೂ ಪದೇಪದೇ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಮತ್ತೆ ಈ ಬಗ್ಗೆ ಗಾಸಿಪ್​ ಹರಿದಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ ಕೂಡ ಆಗುತ್ತಿದೆ.

View this post on Instagram

A post shared by Kuldep Sethi (@kuldepsethi)

ಸಿನಿಮಾ ವಿಚಾರಕ್ಕೆ ಬರುವುದಾದರೆ ವಿಜಯ್​, ‘ಲೈಗರ್’​ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಹಿಂದಿಯಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾ ಅಭಿನಯದ ‘ಮಿಷನ್​ ಮಜ್ನು’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಮಿತಾಭ್​ ಮುಖ್ಯಭೂಮಿಕೆಯಲ್ಲಿರುವ ‘ಗುಡ್​ಬೈ’ನಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ತೆಲುಗಿನ ಪುಷ್ಪ ಚಿತ್ರದ ಶೂಟಿಂಗ್​ನಲ್ಲೂ ಅವರು ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!