AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ವಿಜಯ್​ ದೇವರಕೊಂಡ ಕೂಡ ಅಲ್ಲಿಯೇ ಇದ್ದಾರೆ.

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್
TV9 Web
| Edited By: |

Updated on: Aug 22, 2021 | 11:16 AM

Share

ವಿಜಯ್​ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಬೆಸ್ಟ್ ಫ್ರೆಂಡ್ಸ್​​. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಕೂಡ ಇದೆ. ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಜಿಮ್​ನಲ್ಲಿ ಒಟ್ಟಿಗೆ ವರ್ಕೌಟ್​ ಮಾಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ವಿಜಯ್​ ದೇವರಕೊಂಡ ಕೂಡ ಅಲ್ಲಿಯೇ ಇದ್ದಾರೆ. ಹೀಗಾಗಿ, ಹೈದರಾಬಾದ್​ ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ್ದಾರೆ. ವರ್ಕೌಟ್​ ಮುಗಿದ ನಂತರದಲ್ಲಿ ಇಬ್ಬರೂ ಸೆಲ್ಫಿ ತೆಗೆದುಕೊಂಡಿದ್ದಾರೆ. ಸದ್ಯ, ಈ ಫಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

‘ಗೀತ ಗೋವಿಂದಂ’ ಸಿನಿಮಾ ರಿಲೀಸ್​ಗೂ ಮುನ್ನ ರಶ್ಮಿಕಾ ಹಾಗೂ ವಿಜಯ್​ ನಡುವೆ ಏನೋ ನಡೆಯುತ್ತಿದೆ ಎನ್ನುವ ಮಾತು ಹರಿದಾಡಿತ್ತು. ಆದರೆ, ನಾವು ಬೆಸ್ಟ್​ ಫ್ರೆಂಡ್ಸ್​ ಎನ್ನುವುದನ್ನು ಇಬ್ಬರೂ ಸ್ಪಷ್ಟಪಡಿಸಿದ್ದರು. ಈಗ ಇವರಿಬ್ಬರೂ ಪದೇಪದೇ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಮತ್ತೆ ಈ ಬಗ್ಗೆ ಗಾಸಿಪ್​ ಹರಿದಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ ಕೂಡ ಆಗುತ್ತಿದೆ.

View this post on Instagram

A post shared by Kuldep Sethi (@kuldepsethi)

ಸಿನಿಮಾ ವಿಚಾರಕ್ಕೆ ಬರುವುದಾದರೆ ವಿಜಯ್​, ‘ಲೈಗರ್’​ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಹಿಂದಿಯಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾ ಅಭಿನಯದ ‘ಮಿಷನ್​ ಮಜ್ನು’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಮಿತಾಭ್​ ಮುಖ್ಯಭೂಮಿಕೆಯಲ್ಲಿರುವ ‘ಗುಡ್​ಬೈ’ನಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ತೆಲುಗಿನ ಪುಷ್ಪ ಚಿತ್ರದ ಶೂಟಿಂಗ್​ನಲ್ಲೂ ಅವರು ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್