AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?

 ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?
ರಶ್ಮಿಕಾ
TV9 Web
| Edited By: |

Updated on: Dec 13, 2021 | 4:41 PM

Share

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರು ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆರಂಭದಲ್ಲಿ ಅವರ ಪಾತ್ರ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಇತ್ತೀಚೆಗೆ ರಶ್ಮಿಕಾ ಪಾತ್ರದ ಬಗ್ಗೆ ಯಾರೂ ಅಷ್ಟಾಗಿ ಮಾತನಾಡುತ್ತಿಲ್ಲ. ಎಲ್ಲರ ಗಮನ ಈಗ ಸಮಂತಾ ಅವರ ಮೇಲೆ ಕೇಂದ್ರೀಕೃತವಾಗಿದೆ. ಇದೇ ಅವಕಾಶವನ್ನು ಚಿತ್ರತಂಡದವರು ಕೂಡ ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಮಂತಾ ಐಟಂ ಡಾನ್ಸ್​ಗೆ ಚಿತ್ರತಂಡದವರು ಹೆಚ್ಚು ಒತ್ತು ನೀಡುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ಈ ಮೂಲಕ ತನ್ನ ನಾಗಾಲೋಟವನ್ನು ಇನ್ನೂ ಮುಂದುವರಿಸಿದೆ. ಸದ್ಯ, ಎಲ್ಲ ಕಡೆಗಳಲ್ಲೂ ಸಮಂತಾ ಅವರು ಡ್ಯಾನ್ಸ್​ ಮಾಡಿರುವ ಹಾಡಿನ ಬಗ್ಗೆ ಚರ್ಚೆ ಆಗುತ್ತಿದೆ. ಸದ್ಯ, ಈ ಹಾಡಿನ ವಿಡಿಯೋ ಸಾಂಗ್​ ಪ್ರೋಮೋ ಕೂಡ ರಿಲೀಸ್​ ಆಗಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಜನತಾ ಗ್ಯಾರೇಜ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಮಂತಾ ಇದೇ ರೀತಿಯ ತೊಂದರೆ ಅನುಭವಿಸಿದ್ದರು. ಅವರು ಆ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಐಟಂ ಸಾಂಗ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಇಲ್ಲಿ ಸಮಂತಾಗಿಂತ ಕಾಜಲ್​ ಹೈಲೈಟ್​ ಆಗಿದ್ದರು. ಈಗ ರಶ್ಮಿಕಾಗೂ ಅದೇ ರೀತಿ ಆಗುತ್ತಿದೆ ಎನ್ನುವ ಮಾತು ಟಾಲಿವುಡ್​ ಅಂಗಳದಲ್ಲಿ ಕೇಳಿ ಬಂದಿದೆ.  ಚಿತ್ರತಂಡದವರು ಸಮಂತಾ ಅವರನ್ನು ಹೈಲೈಟ್​ ಮಾಡುತ್ತಿರುವ ಬಗ್ಗೆ ರಶ್ಮಿಕಾ ಚಿಂತೆಗೆ ಒಳಗಾಗಿದ್ದಾರೆ  ಎನ್ನುವ ಮಾತೂ ಕೇಳಿ ಬರುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸದ್ಯ, ಈ ವಿಚಾರ ಸಾಕಷ್ಟು ಹೈಲೈಟ್​ ಆಗುತ್ತಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದನ್ನೂ ಓದಿ:  ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್​ ಗೆಟಪ್​

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?