AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?

 ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?
ರಶ್ಮಿಕಾ
TV9 Web
| Edited By: |

Updated on: Dec 13, 2021 | 4:41 PM

Share

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರು ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆರಂಭದಲ್ಲಿ ಅವರ ಪಾತ್ರ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಇತ್ತೀಚೆಗೆ ರಶ್ಮಿಕಾ ಪಾತ್ರದ ಬಗ್ಗೆ ಯಾರೂ ಅಷ್ಟಾಗಿ ಮಾತನಾಡುತ್ತಿಲ್ಲ. ಎಲ್ಲರ ಗಮನ ಈಗ ಸಮಂತಾ ಅವರ ಮೇಲೆ ಕೇಂದ್ರೀಕೃತವಾಗಿದೆ. ಇದೇ ಅವಕಾಶವನ್ನು ಚಿತ್ರತಂಡದವರು ಕೂಡ ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಮಂತಾ ಐಟಂ ಡಾನ್ಸ್​ಗೆ ಚಿತ್ರತಂಡದವರು ಹೆಚ್ಚು ಒತ್ತು ನೀಡುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ಈ ಮೂಲಕ ತನ್ನ ನಾಗಾಲೋಟವನ್ನು ಇನ್ನೂ ಮುಂದುವರಿಸಿದೆ. ಸದ್ಯ, ಎಲ್ಲ ಕಡೆಗಳಲ್ಲೂ ಸಮಂತಾ ಅವರು ಡ್ಯಾನ್ಸ್​ ಮಾಡಿರುವ ಹಾಡಿನ ಬಗ್ಗೆ ಚರ್ಚೆ ಆಗುತ್ತಿದೆ. ಸದ್ಯ, ಈ ಹಾಡಿನ ವಿಡಿಯೋ ಸಾಂಗ್​ ಪ್ರೋಮೋ ಕೂಡ ರಿಲೀಸ್​ ಆಗಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಜನತಾ ಗ್ಯಾರೇಜ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಮಂತಾ ಇದೇ ರೀತಿಯ ತೊಂದರೆ ಅನುಭವಿಸಿದ್ದರು. ಅವರು ಆ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಐಟಂ ಸಾಂಗ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಇಲ್ಲಿ ಸಮಂತಾಗಿಂತ ಕಾಜಲ್​ ಹೈಲೈಟ್​ ಆಗಿದ್ದರು. ಈಗ ರಶ್ಮಿಕಾಗೂ ಅದೇ ರೀತಿ ಆಗುತ್ತಿದೆ ಎನ್ನುವ ಮಾತು ಟಾಲಿವುಡ್​ ಅಂಗಳದಲ್ಲಿ ಕೇಳಿ ಬಂದಿದೆ.  ಚಿತ್ರತಂಡದವರು ಸಮಂತಾ ಅವರನ್ನು ಹೈಲೈಟ್​ ಮಾಡುತ್ತಿರುವ ಬಗ್ಗೆ ರಶ್ಮಿಕಾ ಚಿಂತೆಗೆ ಒಳಗಾಗಿದ್ದಾರೆ  ಎನ್ನುವ ಮಾತೂ ಕೇಳಿ ಬರುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸದ್ಯ, ಈ ವಿಚಾರ ಸಾಕಷ್ಟು ಹೈಲೈಟ್​ ಆಗುತ್ತಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದನ್ನೂ ಓದಿ:  ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್​ ಗೆಟಪ್​

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ