AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?

 ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?
ರಶ್ಮಿಕಾ
TV9 Web
| Edited By: |

Updated on: Dec 13, 2021 | 4:41 PM

Share

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರು ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆರಂಭದಲ್ಲಿ ಅವರ ಪಾತ್ರ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಇತ್ತೀಚೆಗೆ ರಶ್ಮಿಕಾ ಪಾತ್ರದ ಬಗ್ಗೆ ಯಾರೂ ಅಷ್ಟಾಗಿ ಮಾತನಾಡುತ್ತಿಲ್ಲ. ಎಲ್ಲರ ಗಮನ ಈಗ ಸಮಂತಾ ಅವರ ಮೇಲೆ ಕೇಂದ್ರೀಕೃತವಾಗಿದೆ. ಇದೇ ಅವಕಾಶವನ್ನು ಚಿತ್ರತಂಡದವರು ಕೂಡ ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಮಂತಾ ಐಟಂ ಡಾನ್ಸ್​ಗೆ ಚಿತ್ರತಂಡದವರು ಹೆಚ್ಚು ಒತ್ತು ನೀಡುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ಈ ಮೂಲಕ ತನ್ನ ನಾಗಾಲೋಟವನ್ನು ಇನ್ನೂ ಮುಂದುವರಿಸಿದೆ. ಸದ್ಯ, ಎಲ್ಲ ಕಡೆಗಳಲ್ಲೂ ಸಮಂತಾ ಅವರು ಡ್ಯಾನ್ಸ್​ ಮಾಡಿರುವ ಹಾಡಿನ ಬಗ್ಗೆ ಚರ್ಚೆ ಆಗುತ್ತಿದೆ. ಸದ್ಯ, ಈ ಹಾಡಿನ ವಿಡಿಯೋ ಸಾಂಗ್​ ಪ್ರೋಮೋ ಕೂಡ ರಿಲೀಸ್​ ಆಗಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಜನತಾ ಗ್ಯಾರೇಜ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಮಂತಾ ಇದೇ ರೀತಿಯ ತೊಂದರೆ ಅನುಭವಿಸಿದ್ದರು. ಅವರು ಆ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಐಟಂ ಸಾಂಗ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಇಲ್ಲಿ ಸಮಂತಾಗಿಂತ ಕಾಜಲ್​ ಹೈಲೈಟ್​ ಆಗಿದ್ದರು. ಈಗ ರಶ್ಮಿಕಾಗೂ ಅದೇ ರೀತಿ ಆಗುತ್ತಿದೆ ಎನ್ನುವ ಮಾತು ಟಾಲಿವುಡ್​ ಅಂಗಳದಲ್ಲಿ ಕೇಳಿ ಬಂದಿದೆ.  ಚಿತ್ರತಂಡದವರು ಸಮಂತಾ ಅವರನ್ನು ಹೈಲೈಟ್​ ಮಾಡುತ್ತಿರುವ ಬಗ್ಗೆ ರಶ್ಮಿಕಾ ಚಿಂತೆಗೆ ಒಳಗಾಗಿದ್ದಾರೆ  ಎನ್ನುವ ಮಾತೂ ಕೇಳಿ ಬರುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸದ್ಯ, ಈ ವಿಚಾರ ಸಾಕಷ್ಟು ಹೈಲೈಟ್​ ಆಗುತ್ತಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದನ್ನೂ ಓದಿ:  ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್​ ಗೆಟಪ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?