AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?

 ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?
ರಶ್ಮಿಕಾ
TV9 Web
| Edited By: |

Updated on: Dec 13, 2021 | 4:41 PM

Share

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರು ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆರಂಭದಲ್ಲಿ ಅವರ ಪಾತ್ರ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಇತ್ತೀಚೆಗೆ ರಶ್ಮಿಕಾ ಪಾತ್ರದ ಬಗ್ಗೆ ಯಾರೂ ಅಷ್ಟಾಗಿ ಮಾತನಾಡುತ್ತಿಲ್ಲ. ಎಲ್ಲರ ಗಮನ ಈಗ ಸಮಂತಾ ಅವರ ಮೇಲೆ ಕೇಂದ್ರೀಕೃತವಾಗಿದೆ. ಇದೇ ಅವಕಾಶವನ್ನು ಚಿತ್ರತಂಡದವರು ಕೂಡ ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಮಂತಾ ಐಟಂ ಡಾನ್ಸ್​ಗೆ ಚಿತ್ರತಂಡದವರು ಹೆಚ್ಚು ಒತ್ತು ನೀಡುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ಈ ಮೂಲಕ ತನ್ನ ನಾಗಾಲೋಟವನ್ನು ಇನ್ನೂ ಮುಂದುವರಿಸಿದೆ. ಸದ್ಯ, ಎಲ್ಲ ಕಡೆಗಳಲ್ಲೂ ಸಮಂತಾ ಅವರು ಡ್ಯಾನ್ಸ್​ ಮಾಡಿರುವ ಹಾಡಿನ ಬಗ್ಗೆ ಚರ್ಚೆ ಆಗುತ್ತಿದೆ. ಸದ್ಯ, ಈ ಹಾಡಿನ ವಿಡಿಯೋ ಸಾಂಗ್​ ಪ್ರೋಮೋ ಕೂಡ ರಿಲೀಸ್​ ಆಗಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಜನತಾ ಗ್ಯಾರೇಜ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಮಂತಾ ಇದೇ ರೀತಿಯ ತೊಂದರೆ ಅನುಭವಿಸಿದ್ದರು. ಅವರು ಆ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಐಟಂ ಸಾಂಗ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಇಲ್ಲಿ ಸಮಂತಾಗಿಂತ ಕಾಜಲ್​ ಹೈಲೈಟ್​ ಆಗಿದ್ದರು. ಈಗ ರಶ್ಮಿಕಾಗೂ ಅದೇ ರೀತಿ ಆಗುತ್ತಿದೆ ಎನ್ನುವ ಮಾತು ಟಾಲಿವುಡ್​ ಅಂಗಳದಲ್ಲಿ ಕೇಳಿ ಬಂದಿದೆ.  ಚಿತ್ರತಂಡದವರು ಸಮಂತಾ ಅವರನ್ನು ಹೈಲೈಟ್​ ಮಾಡುತ್ತಿರುವ ಬಗ್ಗೆ ರಶ್ಮಿಕಾ ಚಿಂತೆಗೆ ಒಳಗಾಗಿದ್ದಾರೆ  ಎನ್ನುವ ಮಾತೂ ಕೇಳಿ ಬರುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸದ್ಯ, ಈ ವಿಚಾರ ಸಾಕಷ್ಟು ಹೈಲೈಟ್​ ಆಗುತ್ತಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದನ್ನೂ ಓದಿ:  ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್​ ಗೆಟಪ್​

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?