AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?

 ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ.

Rashmika Mandanna: ‘ಪುಷ್ಪ’ ಚಿತ್ರ ತಂಡದ ನಡೆಯಿಂದ ಚಿಂತೆಗೆ ಒಳಗಾದ ರಶ್ಮಿಕಾ ಮಂದಣ್ಣ?
ರಶ್ಮಿಕಾ
TV9 Web
| Edited By: |

Updated on: Dec 13, 2021 | 4:41 PM

Share

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರು ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆರಂಭದಲ್ಲಿ ಅವರ ಪಾತ್ರ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಇತ್ತೀಚೆಗೆ ರಶ್ಮಿಕಾ ಪಾತ್ರದ ಬಗ್ಗೆ ಯಾರೂ ಅಷ್ಟಾಗಿ ಮಾತನಾಡುತ್ತಿಲ್ಲ. ಎಲ್ಲರ ಗಮನ ಈಗ ಸಮಂತಾ ಅವರ ಮೇಲೆ ಕೇಂದ್ರೀಕೃತವಾಗಿದೆ. ಇದೇ ಅವಕಾಶವನ್ನು ಚಿತ್ರತಂಡದವರು ಕೂಡ ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಮಂತಾ ಐಟಂ ಡಾನ್ಸ್​ಗೆ ಚಿತ್ರತಂಡದವರು ಹೆಚ್ಚು ಒತ್ತು ನೀಡುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿರುವ ‘ಊ ಅಂಟವಾ ಮಾವ.. ಊಊ ಅಂಟವಾ..’ ಹಾಡಿನ ಲಿರಿಕಲ್​ ವಿಡಿಯೋ ಹಿಟ್​ ಆಗಿದೆ. ಈವರೆಗೆ ಈ ಹಾಡು ಎರಡು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ಈ ಮೂಲಕ ತನ್ನ ನಾಗಾಲೋಟವನ್ನು ಇನ್ನೂ ಮುಂದುವರಿಸಿದೆ. ಸದ್ಯ, ಎಲ್ಲ ಕಡೆಗಳಲ್ಲೂ ಸಮಂತಾ ಅವರು ಡ್ಯಾನ್ಸ್​ ಮಾಡಿರುವ ಹಾಡಿನ ಬಗ್ಗೆ ಚರ್ಚೆ ಆಗುತ್ತಿದೆ. ಸದ್ಯ, ಈ ಹಾಡಿನ ವಿಡಿಯೋ ಸಾಂಗ್​ ಪ್ರೋಮೋ ಕೂಡ ರಿಲೀಸ್​ ಆಗಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಜನತಾ ಗ್ಯಾರೇಜ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸಮಂತಾ ಇದೇ ರೀತಿಯ ತೊಂದರೆ ಅನುಭವಿಸಿದ್ದರು. ಅವರು ಆ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಐಟಂ ಸಾಂಗ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಇಲ್ಲಿ ಸಮಂತಾಗಿಂತ ಕಾಜಲ್​ ಹೈಲೈಟ್​ ಆಗಿದ್ದರು. ಈಗ ರಶ್ಮಿಕಾಗೂ ಅದೇ ರೀತಿ ಆಗುತ್ತಿದೆ ಎನ್ನುವ ಮಾತು ಟಾಲಿವುಡ್​ ಅಂಗಳದಲ್ಲಿ ಕೇಳಿ ಬಂದಿದೆ.  ಚಿತ್ರತಂಡದವರು ಸಮಂತಾ ಅವರನ್ನು ಹೈಲೈಟ್​ ಮಾಡುತ್ತಿರುವ ಬಗ್ಗೆ ರಶ್ಮಿಕಾ ಚಿಂತೆಗೆ ಒಳಗಾಗಿದ್ದಾರೆ  ಎನ್ನುವ ಮಾತೂ ಕೇಳಿ ಬರುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸದ್ಯ, ಈ ವಿಚಾರ ಸಾಕಷ್ಟು ಹೈಲೈಟ್​ ಆಗುತ್ತಿದೆ.

ಸಮಂತಾ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. ಅದೇ ರೀತಿ ಅವರು ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ‘ಪುಷ್ಪ’ ಸಿನಿಮಾದ ಈ ಹಾಡಿನಲ್ಲಿ ನರ್ತಿಸಲು ಸಮಂತಾ ಅವರು ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಹರಡಿದೆ. ಆ ಬಗ್ಗೆ ಚಿತ್ರತಂಡದವರಾಗಲಿ, ಸಮಂತಾ ಆಗಲಿ ಈವರೆಗೆ ಎಲ್ಲಿಯೂ ಬಾಯಿ ಬಿಟ್ಟಿಲ್ಲ.

ಇದನ್ನೂ ಓದಿ:  ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್​ ಗೆಟಪ್​

Follow Us
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!