AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಮೈದುನನಿಗಾಗಿ ಉಚಿತವಾಗಿ ಕೆಲಸ ಮಾಡಿಕೊಟ್ಟ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಅವರ ಸಹೋದರ ಆನಂದ್ ದೇವರಕೊಂಡ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಉಚಿತವಾಗಿ ಕ್ಲ್ಯಾಪ್ ಮಾಡುವ ಮೂಲಕ ಬೆಂಬಲ ನೀಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಹಣ ಪಡೆಯುವ ಚಿತ್ರದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಆದರೆ ರಶ್ಮಿಕಾ ಅವರು ಆನಂದ್ ಅವರ ಸಿನಿಮಾಕ್ಕೆ ಉಚಿತವಾಗಿ ಕೆಲಸ ಮಾಡಿದ್ದು ವಿಶೇಷ.

ಭಾವಿ ಮೈದುನನಿಗಾಗಿ ಉಚಿತವಾಗಿ ಕೆಲಸ ಮಾಡಿಕೊಟ್ಟ ರಶ್ಮಿಕಾ ಮಂದಣ್ಣ
ರಶ್ಮಿಕಾ ಮತ್ತು ಆನಂದ್
ರಾಜೇಶ್ ದುಗ್ಗುಮನೆ
|

Updated on: May 16, 2025 | 3:00 PM

Share

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ವಿಚಾರ ಈಗ ಗುಟ್ಟಾಗೇನು ಉಳಿದಿಲ್ಲ. ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ಶೀಘ್ರವೇ ಇವರು ಮದುವೆ ಆಗುತ್ತಾರೆ ಎಂದೂ ಹೇಳಲಾಗುತ್ತಿದೆ. ಹೀಗಿರುವಾಗಲೇ ವಿಜಯ್ ಸಹೋದರ ಆನಂದ್​ಗಾಗಿ ರಶ್ಮಿಕಾ ಉಚಿತವಾಗಿ ಒಂದು ಕೆಲಸ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ.  ಅಷ್ಟಕ್ಕೂ ಏನು ಅದು? ಆ ಬಗ್ಗೆ ಇಲ್ಲಿದೆ ವಿವರ.

ಸಾಮಾನ್ಯವಾಗಿ ಎಲ್ಲಾ ಸೆಲೆಬ್ರಿಟಿಗಳು ಯಾವುದೇ ಕೆಲಸವನ್ನು ಉಚಿತವಾಗಿ ಮಾಡಿ ಕೊಡೋದಿಲ್ಲ. ಬೇರೆ ಸಿನಿಮಾ ಪ್ರಮೋಷನ್ ಕೆಲಸಗಳಿಗೆ ಬರಬೇಕು ಎಂದರೆ ಹಣ ಪಡೆಯುತ್ತಾರೆ. ಆದರೆ, ರಶ್ಮಿಕಾ ಅವರು ಆ ರೀತಿ ಮಾಡಿಲ್ಲ. ಆನಂದ್​ಗಾಗಿ ಅವರು ಉಚಿತವಾಗಿ ಕೆಲಸ ಮಾಡಿಕೊಟ್ಟಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
Image
ಸಮಂತಾ ಹಾಗೂ ರಾಜ್ ನಡುವಿನ ವಯಸ್ಸಿನ ಅಂತರ ಇಷ್ಟೊಂದಾ?
Image
VIDEO: ಲೈವ್​ಸ್ಟ್ರೀಮ್ ಮಾಡುವಾಗಲೇ ಗುಂಡಿಕ್ಕಿ ಇನ್​ಫ್ಲುಯೆನ್ಸರ್ ಹತ್ಯೆ
Image
‘ನೀವು ಹೇಗೆ ಎಂದು ಎಲ್ಲರಿಗೂ ಗೊತ್ತು’; ಚೈತ್ರಾಗೆ ನೇರವಾಗಿ ಹೇಳಿದ ಅಭಿಮಾನಿ

‘ಬೇಬಿ’ ಸಿನಿಮಾದಲ್ಲಿ ನಟಿಸಿದ್ದ ಆನಂದ್ ಹಾಗೂ ವೈಷ್ಣವಿ ಚೈತನ್ಯ ಅವರು ಮತ್ತೆ ಲವ್​ಸ್ಟೋರಿ ಕಥೆಯ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಚಿತ್ರಕ್ಕೆ ‘ಪ್ರೊಡಕ್ಷನ್ ನಂಬರ್ 32’ ಎನ್ನುವ ತಾತ್ಕಾಲಿಕ ಟೈಟಲ್ ಇಡಲಾಗಿದೆ. ಈ ಚಿತ್ರ ಮೇ 15ರಂದು ಲಾಂಚ್ ಆಗಿದೆ. ಮುಹೂರ್ತಕ್ಕೆ ಆಗಮಿಸಿದ ರಶ್ಮಿಕಾ ಅವರು ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದಾರೆ.

ಈ ಚಿತ್ರವನ್ನು ಸಿತಾರಾ ಎಂಟರ್​ಟೇನ್​ಮೆಂಟ್ ನಿರ್ಮಾಣ ಮಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳಲಾಗಿದೆ. ತಂಡದವರು ರಶ್ಮಿಕಾಗೆ ಧನ್ಯವಾದ ಹೇಳಿದ್ದಾರೆ. ಆನಂದ್ ಇದ್ದಾನೆ ಎನ್ನುವ ಕಾರಣಕ್ಕೆ ಈ ಚಿತ್ರಕ್ಕೆ ರಶ್ಮಿಕಾ ಕ್ಲ್ಯಾಪ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ:   ವಿಜಯ್ ದೇವರಕೊಂಡಗೆ ಪ್ರೀತಿಯಿಂದ ವಿಜ್ಜು ಎಂದು ಕರೆದು ಬರ್ತ್​ಡೇ ವಿಶ್ ತಿಳಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಹಾಗೂ ಆನಂದ್ ಮಧ್ಯೆಯೂ ಒಳ್ಳೆಯ ಬಾಂಧವ್ಯ ಬೆಳೆದಿದೆ. ವಿಜಯ್​ನ ರಶ್ಮಿಕಾ ಮದುವೆ ಆದರೆ ಆಗ ನಟಿಗೆ ಆನಂದ್ ಭಾಮೈದ ಆಗುತ್ತಾರೆ. ಈ ಕಾರಣಕ್ಕೆ ಆನಂದ್ ಅವರ ಅನೇಕ ಸಿನಿಮಾಗಳ ಪ್ರಚಾರ ಕಾರ್ಯಕ್ರಮದಲ್ಲಿ ರಶ್ಮಿಕಾ ಭಾಗಿ ಆಗಿದ್ದರು. ಆದಿತ್ಯ ಹಸನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜನವರಿ 15ರಂದು ಸಿನಿಮಾ ಘೋಷಣೆ ಆಯಿತು. ಈಗ ಚಿತ್ರ ಸೆಟ್ಟೇರಿದೆ. ಹೇಶಮ್ ಅಬ್ದುಲ್ ವಹಾಬ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್