AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾದಲ್ಲಿ ಪ್ರೇಕ್ಷಕರು ಊಹಿಸಿದಂತೆ ಇರಲ್ಲ ರಶ್ಮಿಕಾ ಮಂದಣ್ಣ ಪಾತ್ರ

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಚಿತ್ರದಲ್ಲಿ ಬೇರೆಯದೇ ಟ್ವಿಸ್ಟ್​ ಎದುರಾಗಲಿದೆ. ರಶ್ಮಿಕಾ ಮಂದಣ್ಣ ಅವರು ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರವು ಅಭಿಮಾನಿಗಳಿಗೆ ಸರ್ಪ್ರೈಸ್​ ನೀಡಲಿದೆ ಎಂದು ಹೇಳಲಾಗುತ್ತಿದೆ. ಆ ಪಾತ್ರಕ್ಕೆ ಗ್ರೇ ಶೇಡ್​ ಇರಲಿದೆ. ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ಈ ಚಿತ್ರದ ಮೇಲೆ ರಶ್ಮಿಕಾ ಮಂದಣ್ಣ ಫ್ಯಾನ್ಸ್​ ಭಾರಿ ನಿರೀಕ್ಷೆ ಹೊಂದಿದ್ದಾರೆ.

‘ಪುಷ್ಪ 2’ ಸಿನಿಮಾದಲ್ಲಿ ಪ್ರೇಕ್ಷಕರು ಊಹಿಸಿದಂತೆ ಇರಲ್ಲ ರಶ್ಮಿಕಾ ಮಂದಣ್ಣ ಪಾತ್ರ
ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Apr 15, 2024 | 10:47 PM

Share

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಬಂದಿದ್ದು ‘ಪುಷ್ಪ’ ಸಿನಿಮಾದಿಂದ. ಆ ಸಿನಿಮಾದಲ್ಲಿ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡಿ ಜನಮನ ಗೆದ್ದರು. ಈಗ ‘ಪುಷ್ಪ 2’ (Pushpa 2) ಸಿನಿಮಾದಲ್ಲೂ ಆ ಪಾತ್ರ ಮುಂದುವರಿಯಲಿದೆ. ವಿಶೇಷ ಏನೆಂದರೆ, ಈ ಬಗೆ ಪ್ರೇಕ್ಷಕರಿಗೆ ಹಲವು ಟ್ವಿಸ್ಟ್​ಗಳು ಕಾದಿರಲಿವೆ. ಪ್ರೇಕ್ಷಕರು ಊಹಿಸಿದ್ದಕ್ಕಿಂತಲೂ ಡಿಫರೆಂಟ್​ ಆಗಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಮೂಡಿಬರಲಿದೆ ಎನ್ನಲಾಗಿದೆ. ಆ ರೀತಿಯಲ್ಲಿ ನಿರ್ದೇಶಕ ಸುಕುಮಾರ್​ ಅವರು ಪ್ಲ್ಯಾನ್​ ಮಾಡಿದ್ದಾರೆ. ಅಲ್ಲು ಅರ್ಜುನ್​ (Allu Arjun) ಅಭಿಮಾನಿಗಳು ‘ಪುಷ್ಪ 2’ ಸಿನಿಮಾ ಮೇಲೆ ಇಟ್ಟಿರುವ ನಿರೀಕ್ಷೆ ಬಹಳ ದೊಡ್ಡದು.

ಮೊದಲ ಪಾರ್ಟ್​ನಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರಕ್ಕೆ ತಕ್ಕಮಟ್ಟಿಗಿನ ಸ್ಕೋಪ್​ ಸಿಕ್ಕಿತ್ತು. ‘ಪುಷ್ಪ 2’ ಸಿನಿಮಾದಲ್ಲಿ ಶ್ರೀವಲ್ಲಿ ಪಾತ್ರಕ್ಕೆ ಗ್ರೇ ಶೇಡ್​ ಇರಲಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನದ ಕಳ್ಳ ಸಾಗಣೆಯಲ್ಲಿ ಡಾನ್​ ಆಗಿರುವ ಪುಷ್ಪರಾಜ್​ನ ಹೆಂಡತಿಯಾಗಿ ಅಬ್ಬರಿಸಲು ಅವರಿಗೆ ಒಂದಷ್ಟು ಸ್ಕ್ರೀನ್​ ಸ್ಪೇಸ್​ ಸಿಗಲಿದೆ. ಈ ಮೂಲಕ ರಶ್ಮಿಕಾ ಮಂದಣ್ಣ ಅವರ ವೃತ್ತಿಜೀವನದಲ್ಲಿ ‘ಪುಷ್ಪ 2’ ಸಿನಿಮಾ ಬಹಳ ಮುಖ್ಯವಾಗಲಿದೆ.

ಸಾಮಾನ್ಯವಾಗಿ ಮಾಮೂಲಿ ಕಮರ್ಷಿಯಲ್​ ಸಿನಿಮಾಗಳಲ್ಲಿ ನಾಯಕಿಯರ ಪಾತ್ರಕ್ಕೆ ಹೆಚ್ಚು ಸ್ಕೋಪ್​ ಇರುವುದಿಲ್ಲ. ಆದರೆ ‘ಪುಷ್ಪ 2’ ಸಿನಿಮಾದಲ್ಲಿ ಬೇರೆಯದೇ ಟ್ವಿಸ್ಟ್​ ಇರಲಿದೆಯಂತೆ. ರಶ್ಮಿಕಾ ಮಂದಣ್ಣ ಮಾಡುತ್ತಿರುವ ಶ್ರೀವಲ್ಲಿ ಪಾತ್ರವು ಪ್ರೇಕ್ಷಕರಿಗೆ ಸರ್ಪ್ರೈಸ್​ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಕಾರಣಗಳಿಂದ ರಶ್ಮಿಕಾ ಮಂದಣ್ಣ ಅವರ ಫ್ಯಾನ್ಸ್​ ತುಂಬ ಎಗ್ಸೈಟ್​ ಆಗಿದ್ದಾರೆ. ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ತೆರೆಕಾಣಲಿದೆ.

ಇದನ್ನೂ ಓದಿ: 51 ಟೇಕ್​ ತೆಗೆದುಕೊಂಡ ಅಲ್ಲು ಅರ್ಜುನ್​; ‘ಪುಷ್ಪ 2’ ಟೀಸರ್​ ಹಿಂದಿದೆ ಅಚ್ಚರಿ ವಿಷಯ

ಏಪ್ರಿಲ್​ 5ರಂದು ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ ಪ್ರಯುಕ್ತ ಶ್ರೀವಲ್ಲಿ ಪಾತ್ರದ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಸೋಶಿಯಲ್​ ಮೀಡಿಯಾದಲ್ಲಿ ಅದು ವೈರಲ್​ ಆಗಿದೆ. ಅದಕ್ಕೂ ಮುನ್ನ ಶೂಟಿಂಗ್​ ಸೆಟ್​ನಲ್ಲಿದ್ದ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಲೀಕ್​ ಆಗಿತ್ತು. ಅದನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದರು. ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಶ್ರೀವಲ್ಲಿ ಪಾತ್ರದ ಬಗ್ಗೆ ರಶ್ಮಿಕಾ ಅವರ ಅಭಿಮಾನಿಗಳಿಗೆ ಇರುವ ಕ್ರೇಜ್​ ಜಾಸ್ತಿ ಆಗುತ್ತಲೇ ಇದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್​, ಫಹಾದ್ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ.

ಬಿಗ್​ ಬಜೆಟ್​ನಲ್ಲಿ ‘ಪುಷ್ಪ 2’ ಸಿನಿಮಾ ಮೂಡಿಬರುತ್ತಿವೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಮಾದ ಮ್ಯೂಸಿಕ್​ ರೈಟ್ಸ್​ ದಾಖಲೆ ಮೊತ್ತಕ್ಕೆ ಮಾರಾಟ ಆಗಿರುವ ಬಗ್ಗೆ ಸುದ್ದಿ ಕೇಳಿಬಂದಿದೆ. ದೇವಿ ಶ್ರೀ ಪ್ರಸಾದ್​ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?