AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದೃಷ್ಟ ಬಂದಿದ್ದಲ್ಲ, ನೀವೇ ಸೃಷ್ಟಿಸಿಕೊಂಡಿದ್ದು’; ರಶ್ಮಿಕಾ ಹೇಟರ್​ಗಳಿಗೆ ಧನುಷ್ ಖಡಕ್ ಮಾತು

ಕುಬೇರ ಸಿನಿಮಾದ ಈವೆಂಟ್ ನಲ್ಲಿ ನಟ ಧನುಷ್ ಅವರು ರಶ್ಮಿಕಾ ಮಂದಣ್ಣ ಅವರನ್ನು ಹೊಗಳಿದ್ದಾರೆ. ಅವರ ಯಶಸ್ಸು ಕೇವಲ ಅದೃಷ್ಟದಿಂದಲ್ಲ, ಅವರ ಪರಿಶ್ರಮದಿಂದ ಎಂದು ಧನುಷ್ ಹೇಳಿದ್ದಾರೆ. ರಶ್ಮಿಕಾ ಅವರ ಚಿತ್ರಗಳು ಭರ್ಜರಿ ಯಶಸ್ಸು ಕಾಣುತ್ತಿರುವುದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಧನುಷ್ ಅವರ ಈ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

‘ಅದೃಷ್ಟ ಬಂದಿದ್ದಲ್ಲ, ನೀವೇ ಸೃಷ್ಟಿಸಿಕೊಂಡಿದ್ದು’; ರಶ್ಮಿಕಾ ಹೇಟರ್​ಗಳಿಗೆ ಧನುಷ್ ಖಡಕ್ ಮಾತು
ಧನುಷ್-ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 29, 2025 | 7:27 AM

Share

ಧನುಷ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಕುಬೇರ’ ಸಿನಿಮಾ ಇಂದು (ಜೂನ್ 20) ರಿಲೀಸ್ ಆಗಿದೆ. ಈ ಸಿನಿಮಾನ ಜನರು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಚಿತ್ರ ಯಾವ ರೀತಿಯಲ್ಲಿದೆ ಎಂಬ ಸ್ಪಷ್ಟ ಚಿತ್ರಣ ಶನಿವಾರದ ವೇಳೆಗೆ ಸಿಗಲಿದೆ. ಹೀಗಿರುವಾಗಲೇ ರಶ್ಮಿಕಾ ಅವರನ್ನು ಧನುಷ್ ಹೊಗಳಿದೆ ವಿಡಿಯೋ ವೈರಲ್ ಆಗಿದೆ. ವೇದಿಕೆ ಮೇಲೆ ಧನುಷ್ ಅವರು ನಟಿಯ ಬಗ್ಗೆ ಮೆಚ್ಚುಗೆ ಸೂಚಿಸಿದರು.

‘ಕುಬೇರ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್​ನಲ್ಲಿ ಮಾತನಾಡಿದ ಧನುಷ್, ‘ರಶ್ಮಿಕಾ ನೀವು 1000 ಕೋಟಿ ರೂಪಾಯಿ, 2000 ಕೋಟಿ ರೂಪಾಯಿ, ನ್ಯಾಷನಲ್ ಕ್ರಶ್ ಇದನ್ನೆಲ್ಲ ಮರೆತುಬಿಡಿ. ನೀವು ತುಂಬಾ ಅದೃಷ್ಟವಂತೆ ಎಂದು ಎಲ್ಲರೂ ಮಾತನಾಡುತ್ತಾರೆ. ಆದರೆ, ನಿಮ್ಮ ಅದೃಷ್ಟವನ್ನು ನೀವೇ ಸೃಷ್ಟಿಸಿಕೊಂಡಿರೋದು’ ಎಂದು ಅವರು ಹೇಳಿದ್ದಾರೆ.

‘ನಿಮಗೆ ಏನೆಲ್ಲ ಟ್ಯಾಗ್ ಸಿಕ್ಕಿದೆಯೋ ಅದನ್ನು ಪಡೆಯಲು ನೀವು ಸಾಕಷ್ಟು ಕಷ್ಟ ಪಟ್ಟು ಕೆಲಸ ಮಾಡಿದ್ದೀರಿ. ನಿಮ್ಮ ಸಿನಿಮಾ 2000 ಕೋಟಿ ರೂಪಾಯಿ ಮಾಡಿದೆ. ನಿಮ್ಮ ಅದೃಷ್ಟವನ್ನು ನೀವೇ ಪಡೆದುಕೊಂಡಿದ್ದೀರಿ. ಕೊಡಗಿನ ಸಣ್ಣ ಹುಡುಗಿಯಾಗಿದ್ದ ನೀವು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದೀರಿ. ಈ ಪ್ರಯಾಣ ನಿಜಕ್ಕೂ ಅದ್ಭುತ. ದೇವರು ನಿಮಗೆ ಒಳ್ಳೆಯದು ಮಾಡಲಿ. ನಿಮ್ಮ ಫ್ಯೂಚರ್ ಪ್ರಾಜೆಕ್ಟ್​ಗೆ ಆಲ್​ ದಿ ಬೆಸ್ಟ್’ ಎಂದರು ಅವರು.

ಇದನ್ನೂ ಓದಿ
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್​ಬೈ; ಹೊಸ ಕಲಾವಿದೆ ಇವರೇ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ರಶ್ಮಿಕಾ ಮಂದಣ್ಣ ಅವರಿಗೆ ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಗೆಲುವು ಸಿಗುತ್ತಿದೆ. ‘ಅನಿಮಲ್’, ‘ಪುಷ್ಪ 2’, ‘ಛಾವಾ’ ರೀತಿಯ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿದೆ. ಇದು ರಶ್ಮಿಕಾ ಮಂದಣ್ಣ ಖ್ಯಾತಿ ಹೆಚ್ಚಿಸಿದೆ. ಈ ರೀತಿಯ ಅಪರೂಪದ ಸಾಧನೆ ಮಾಡಿದ ಖ್ಯಾತಿ ಅವರಿಗೆ ಇದೆ. ಈ ಬಗ್ಗೆ ಅವರ ಅಭಿಮಾನಿಗಳಿಗೆ ಖುಷಿ ಇದೆ. ಆದರೆ, ರಶ್ಮಿಕಾ ಹೇಟರ್​ಗಳು, ‘ಅವರು ಲಕ್ಕಿ. ಹೀಗಾಗಿ ಸುಲಭದಲ್ಲಿ ಅವಕಾಶ ಸಿಕ್ಕಿತು’ ಎಂದೆಲ್ಲ ಹೇಳುತ್ತಿದ್ದಾರೆ. ಇವರಿಗೆ ಧನುಷ್ ಮಾತು ಖಾರ ಎನಿಸಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ನಟನೆಯನ್ನು ಹಾಡಿ ಹೊಗಳಿದ ಪರಭಾಷಾ ನಿರ್ದೇಶಕ

ರಶ್ಮಿಕಾ ಮಂದಣ್ಣ, ಧನುಷ್, ನಾಗಾರ್ಜುನ ಮೊದಲಾದವರು ‘ಕುಬೇರ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಚಿತ್ರಕ್ಕೆ ಪಾಸಿಟಿವ್ ವಿಮರ್ಶೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:53 am, Fri, 20 June 25

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ