AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜೊತೆ ಸಿನಿಮಾ ಮಾಡಿ ಕೋಟಿ ಕೋಟಿ ಕೈ ಸುಟ್ಟುಕೊಂಡ ನಿರ್ಮಾಪಕ?

ರಶ್ಮಿಕಾ ಮಂದಣ್ಣ ಅವರ 'ದಿ ಗರ್ಲ್ ಫ್ರೆಂಡ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆ ಹುಸಿ ಮಾಡಿದೆ. 40 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರ ಕೇವಲ 7 ಕೋಟಿ ರೂ. ಕಲೆಕ್ಷನ್ ಮಾಡಿದೆ. ಮೊದಲ ಬಾರಿಗೆ ದೊಡ್ಡ ಹೀರೋ ಇಲ್ಲದೆ ನಟಿಸಿರುವ ರಶ್ಮಿಕಾ ಅವರಿಗೆ ಇದು ದೊಡ್ಡ ಸವಾಲಾಗಿದೆ. ಈ ಚಿತ್ರ ನಿರ್ಮಾಪಕರಿಗೆ ಭಾರೀ ನಷ್ಟ ತರುವ ಭೀತಿ ಮೂಡಿಸಿದೆ.

ರಶ್ಮಿಕಾ ಜೊತೆ ಸಿನಿಮಾ ಮಾಡಿ ಕೋಟಿ ಕೋಟಿ ಕೈ ಸುಟ್ಟುಕೊಂಡ ನಿರ್ಮಾಪಕ?
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Nov 10, 2025 | 12:51 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಓಡುವ ಕುದುರೆ. ಅವರು ಯಾವುದೇ ಸಿನಿಮಾ ಮಾಡಿದರೂ ಅದು ಗೆಲ್ಲುತ್ತದೆ ಎಂಬ ನಂಬಿಕೆ ನಿರ್ಮಾಪಕರದ್ದು. ಆದರೆ, ಇತ್ತೀಚೆಗೆ ರಿಲೀಸ್ ಆದ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಈ ನಂಬಿಕೆಯನ್ನು ಸುಳ್ಳು ಮಾಡಿತೇ ಎಂಬ ಪ್ರಶ್ನೆ ಹುಟ್ಟುಹಾಕುವಂತೆ ಮಾಡಿದೆ. ರಶ್ಮಿಕಾ ಸಿನಿಮಾಗೆ ಕೋಟಿ ಕೋಟಿ ಬಂಡವಾಳ ಹೂಡಿ ನಿರ್ಮಾಪಕರು ಕೈ ಸುಟ್ಟುಕೊಂಡರೇ ಎಂಬ ಪ್ರಶ್ನೆ ಮೂಡಿದೆ.

ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅವರು ‘ದಿ ಗರ್ಲ್​ಫ್ರೆಂಡ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಕಳೆದ ಶುಕ್ರವಾರ (ನವೆಂಬರ್ 7) ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಮೊದಲ ದಿನ ಕಲೆಕ್ಷನ್ ಮಾಡಿದ್ದು ಕೇವಲ 1.30 ಕೋಟಿ ರೂಪಾಯಿ. ಎರಡನೇ ದಿನ 2.5 ಕೋಟಿ ರೂಪಾಯಿ ಹಾಗೂ ಮೂರನೇ ದಿನ 3.1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 7 ಕೋಟಿ ರೂಪಾಯಿ ಸಮೀಪಿಸಿದೆ. ಆದರೆ, ಇದರಿಂದ ನಿರ್ಮಾಪಕರು ಲಾಭ ಕಾಣೋದಿಲ್ಲ.

ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 40 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾದಿಂದ ನಿರ್ಮಾಪಕರು ಲಾಭ ಕಾಣಬೇಕು ಎಂದರೆ ಸಿನಿಮಾ ಭಾರತದಲ್ಲಿ ಕನಿಷ್ಠ 80 ಕೋಟಿ ರೂಪಾಯಿ ಕಲೆಕ್ಷನ್ ದಾಟಬೇಕು. 80 ಕೋಟಿ ರೂಪಾಯಿ ಅಲ್ಲಿ ತೆರಿಗೆ, ಚಿತ್ರಮಂದಿರದವರ ಷೇರನ್ನು ತೆಗೆದರೆ ನಿರ್ಮಾಪಕರಿಗೆ ಹಾಕಿದ ಬಂಡವಾಳ ಬರುತ್ತದೆ.

ರಶ್ಮಿಕಾ ಮಂದಣ್ಣ ಫ್ಯಾನ್ಸ್ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ 20 ಕೋಟಿ ರೂಪಾಯಿ ದಾಟುವುದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ, ವಾರದ ದಿನಗಳಲ್ಲಿ  ಸಿನಿಮಾದ ಕಲೆಕ್ಷನ್ ಪಾತಾಳಕ್ಕೆ ಕುಸಿಯೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ನಾನು ವಿಜಯ್​ನ ಮದುವೆ ಆಗ್ತೀನಿ’; ಕೊನೆಗೂ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಇಷ್ಟು ದಿನ ಸ್ಟಾರ್ ಹೀರೋಗಳ ಜೊತೆ ನಟಿಸಿ ಗೆದ್ದಿದ್ದಾರೆ. ಇದೇ ಮೊದಲ ಬಾರಿಗೆ ತಾವಷ್ಟೇ ಹೈಲೈಟ್ ಆಗುವ ಸಿನಿಮಾ ಮಾಡಿದ್ದಾರೆ. ಈ ಚಿತ್ರದಿಂದ ಗೆಲುವು ಕಾಣಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್