AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜೊತೆ ಸಿನಿಮಾ ಮಾಡಿ ಕೋಟಿ ಕೋಟಿ ಕೈ ಸುಟ್ಟುಕೊಂಡ ನಿರ್ಮಾಪಕ?

ರಶ್ಮಿಕಾ ಮಂದಣ್ಣ ಅವರ 'ದಿ ಗರ್ಲ್ ಫ್ರೆಂಡ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆ ಹುಸಿ ಮಾಡಿದೆ. 40 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರ ಕೇವಲ 7 ಕೋಟಿ ರೂ. ಕಲೆಕ್ಷನ್ ಮಾಡಿದೆ. ಮೊದಲ ಬಾರಿಗೆ ದೊಡ್ಡ ಹೀರೋ ಇಲ್ಲದೆ ನಟಿಸಿರುವ ರಶ್ಮಿಕಾ ಅವರಿಗೆ ಇದು ದೊಡ್ಡ ಸವಾಲಾಗಿದೆ. ಈ ಚಿತ್ರ ನಿರ್ಮಾಪಕರಿಗೆ ಭಾರೀ ನಷ್ಟ ತರುವ ಭೀತಿ ಮೂಡಿಸಿದೆ.

ರಶ್ಮಿಕಾ ಜೊತೆ ಸಿನಿಮಾ ಮಾಡಿ ಕೋಟಿ ಕೋಟಿ ಕೈ ಸುಟ್ಟುಕೊಂಡ ನಿರ್ಮಾಪಕ?
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Nov 10, 2025 | 12:51 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಓಡುವ ಕುದುರೆ. ಅವರು ಯಾವುದೇ ಸಿನಿಮಾ ಮಾಡಿದರೂ ಅದು ಗೆಲ್ಲುತ್ತದೆ ಎಂಬ ನಂಬಿಕೆ ನಿರ್ಮಾಪಕರದ್ದು. ಆದರೆ, ಇತ್ತೀಚೆಗೆ ರಿಲೀಸ್ ಆದ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಈ ನಂಬಿಕೆಯನ್ನು ಸುಳ್ಳು ಮಾಡಿತೇ ಎಂಬ ಪ್ರಶ್ನೆ ಹುಟ್ಟುಹಾಕುವಂತೆ ಮಾಡಿದೆ. ರಶ್ಮಿಕಾ ಸಿನಿಮಾಗೆ ಕೋಟಿ ಕೋಟಿ ಬಂಡವಾಳ ಹೂಡಿ ನಿರ್ಮಾಪಕರು ಕೈ ಸುಟ್ಟುಕೊಂಡರೇ ಎಂಬ ಪ್ರಶ್ನೆ ಮೂಡಿದೆ.

ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅವರು ‘ದಿ ಗರ್ಲ್​ಫ್ರೆಂಡ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಕಳೆದ ಶುಕ್ರವಾರ (ನವೆಂಬರ್ 7) ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಮೊದಲ ದಿನ ಕಲೆಕ್ಷನ್ ಮಾಡಿದ್ದು ಕೇವಲ 1.30 ಕೋಟಿ ರೂಪಾಯಿ. ಎರಡನೇ ದಿನ 2.5 ಕೋಟಿ ರೂಪಾಯಿ ಹಾಗೂ ಮೂರನೇ ದಿನ 3.1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 7 ಕೋಟಿ ರೂಪಾಯಿ ಸಮೀಪಿಸಿದೆ. ಆದರೆ, ಇದರಿಂದ ನಿರ್ಮಾಪಕರು ಲಾಭ ಕಾಣೋದಿಲ್ಲ.

ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 40 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾದಿಂದ ನಿರ್ಮಾಪಕರು ಲಾಭ ಕಾಣಬೇಕು ಎಂದರೆ ಸಿನಿಮಾ ಭಾರತದಲ್ಲಿ ಕನಿಷ್ಠ 80 ಕೋಟಿ ರೂಪಾಯಿ ಕಲೆಕ್ಷನ್ ದಾಟಬೇಕು. 80 ಕೋಟಿ ರೂಪಾಯಿ ಅಲ್ಲಿ ತೆರಿಗೆ, ಚಿತ್ರಮಂದಿರದವರ ಷೇರನ್ನು ತೆಗೆದರೆ ನಿರ್ಮಾಪಕರಿಗೆ ಹಾಕಿದ ಬಂಡವಾಳ ಬರುತ್ತದೆ.

ರಶ್ಮಿಕಾ ಮಂದಣ್ಣ ಫ್ಯಾನ್ಸ್ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದ ಒಟ್ಟಾರೆ ಕಲೆಕ್ಷನ್ 20 ಕೋಟಿ ರೂಪಾಯಿ ದಾಟುವುದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ, ವಾರದ ದಿನಗಳಲ್ಲಿ  ಸಿನಿಮಾದ ಕಲೆಕ್ಷನ್ ಪಾತಾಳಕ್ಕೆ ಕುಸಿಯೋ ಸಾಧ್ಯತೆ ಇದೆ.

ಇದನ್ನೂ ಓದಿ: ‘ನಾನು ವಿಜಯ್​ನ ಮದುವೆ ಆಗ್ತೀನಿ’; ಕೊನೆಗೂ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಇಷ್ಟು ದಿನ ಸ್ಟಾರ್ ಹೀರೋಗಳ ಜೊತೆ ನಟಿಸಿ ಗೆದ್ದಿದ್ದಾರೆ. ಇದೇ ಮೊದಲ ಬಾರಿಗೆ ತಾವಷ್ಟೇ ಹೈಲೈಟ್ ಆಗುವ ಸಿನಿಮಾ ಮಾಡಿದ್ದಾರೆ. ಈ ಚಿತ್ರದಿಂದ ಗೆಲುವು ಕಾಣಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್