AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹವಾಗುತ್ತಿದ್ದಾರೆ. ರಶ್ಮಿಕಾ ಈ ವಿಷಯವನ್ನು ಖಚಿತಪಡಿಸಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. 'ಗೀತ ಗೋವಿಂದಂ' ಸಿನಿಮಾ ಮೂಲಕ ಶುರುವಾದ ಅವರ ಪ್ರೀತಿಯ ಪಯಣ ಈಗ ಮದುವೆಯವರೆಗೆ ತಲುಪಿದೆ.

ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Feb 21, 2026 | 7:45 PM

Share

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ (Rashmika Mandanna) ಮಂದಣ್ಣ ಅವರು ಇನ್ನು ಕೆಲವೇ ದಿನಗಳಲ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಫೆಬ್ರವರಿ 26ರಂದು ಇವರ ಮದುವೆ ನಡೆಯುತ್ತಿದೆ. ಈ ವಿವಾಹದ ಬಗ್ಗೆ ಅವರು ಈವರೆಗೆ ಅಧಿಕೃತ ಮಾಹಿತಿ ನೀಡಿರಲಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ. ಅವರಿಗೆ ಕಳುಹಿಸಿದ ಸಂದೇಶಕ್ಕೆ ಪ್ರೀತಿಯಿಂದ ಪ್ರತಿಕ್ರಿಯಿಸಿ, ಮದುವೆ ಒಪ್ಪಿಕೊಂಡಿದ್ದಾರೆ.

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರು ತೆರೆಮೇಲೆ ಒಟ್ಟಿಗೆ ನಟಿಸಿದವರು. ಬಣ್ಣ ಹಚ್ಚುತ್ತಲೇ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಇವರ ಪ್ರೀತಿ ಆರಂಭ ಆಗಿದ್ದು ಯಾವಾಗ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇತ್ತೀಚೆಗೆ ಗುಟ್ಟಾಗಿ ಇವರ ನಿಶ್ಚಿತಾರ್ಥ ನಡೆದಿತ್ತು. ಈಗ ವಿವಾಹ ಆಗುವ ಮೂಲಕ ಅವರು ಸಂಬಂಧಕ್ಕೆ ಹೊಸ ಅರ್ಥ ಸಿಗುತ್ತಿದೆ.

ಬಾಲಿವುಡ್ ಹಂಗಾಮ ತಂಡದವರು ರಶ್ಮಿಕಾ ಮಂದಣ್ಣಗೆ ‘ಅಭಿನಂದನೆಗಳು’ ಎಂಬ ಸಂದೇಶ ಕಳುಹಿಸಿತ್ತಂತೆ. ಸಾಮಾನ್ಯವಾಗಿ ಗಾಸಿಪ್ ಆದರೆ, ಈ ವಿಷಯದಲ್ಲಿ ಸೈಲೆಂಟ್ ಆಗುತ್ತಾರೆ. ಆದರೆ, ರಶ್ಮಿಕಾ ಹಾಗೆ ಮಾಡಿಲ್ಲ. ಅವರು ‘ಧನ್ಯವಾದಗಳು’ ಎಂದು ಉತ್ತರಿಸಿದ್ದಾರೆ. ಇದಕ್ಕೆ ನಗುವ ಎಮೋಜಿ ಕೂಡ ಹಾಕಿದ್ದಾರಂತೆ. ಈ ಮೂಲಕ ವಿವಾಹ ವಿಷಯ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ವಿದೇಶಿ ಸಂಸ್ಥೆಯ ಭದ್ರತೆ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಉದಯಪುರದಲ್ಲಿ ಮದುವೆ ಆಗುತ್ತಿದ್ದಾರೆ. ಇದಕ್ಕೆ ಐಷಾರಾಮಿ ಹೋಟೆಲ್ ಬುಕ್ ಆಗಿದ್ದು, ಸಿದ್ಧತೆ ನಡೆಯುತ್ತಿದೆ. ಇತ್ತೀಚೆಗೆ ದಂಪತಿಯ ಆಮಂತ್ರಣಪತ್ರ ವೈರಲ್ ಆಗಿ ಗಮನ ಸೆಳೆಯಿತು. ವಿವಾಹದ ಬಳಿಕ ಹೈದರಾಬಾದ್​​ನಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ಆಯೋಜನೆ ಮಾಡಲಾಗಿದೆ. ಮಾರ್​ಚ್ 4ರಂದು ಈ ಆರತಕ್ಷತೆ ನಿಗದಿ ಆಗಿದೆ. ಡೆಸ್ಟಿನೇಷನ್ ವೆಡ್ಡಿಂಗ್​ಗೆ ಉದಯಪುರ ಒಳ್ಳೆಯ ಜಾಗ. ಅನೇಕ ಸೆಲೆಬ್ರಿಟಿಗಳು ಇಲ್ಲಿ ವಿವಾಹ ಆಗಿದ್ದಾರೆ. ಈ ಸಾಲಿಗೆ ರಶ್ಮಿಕಾ ಕೂಡ ಸೇರುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದು ‘ಗೀತ ಗೋವಿಂದಂ’ ಧಾರಾವಾಹಿಯಲ್ಲಿ. ಆ ಬಳಿಕ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಇವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ