AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಸೋಡೆ ಮೇ ಕೌನ್ ಥಾ’ ಎಂದಿದ್ದ ಹಿರಿಯ ನಟಿ ರೂಪಾಲ್​ ಪಟೇಲ್​ ಆಸ್ಪತ್ರೆಗೆ ದಾಖಲು

‘ಸಾಥ್​​ ನಿಭಾನಾ ಸಾಥಿಯಾ’ ಧಾರಾವಾಹಿಯಲ್ಲಿ ಕೋಕಿಲಾ ಮೋದಿ ಪಾತ್ರಕ್ಕೆ ರೂಪಾಲ್​ ಬಣ್ಣ ಹಚ್ಚಿದ್ದರು. ಈ ಮೂಲಕ ಅವರ ಖ್ಯಾತಿ ಸಾಕಷ್ಟು ಹೆಚ್ಚಿತ್ತು.

‘ರಸೋಡೆ ಮೇ ಕೌನ್ ಥಾ’ ಎಂದಿದ್ದ ಹಿರಿಯ ನಟಿ ರೂಪಾಲ್​ ಪಟೇಲ್​ ಆಸ್ಪತ್ರೆಗೆ ದಾಖಲು
ರೂಪಾಲ್​ ಪಟೇಲ್​
TV9 Web
| Edited By: |

Updated on: Jul 06, 2021 | 4:21 PM

Share

ಹಿಂದಿಯ ‘ಸಾಥ್​​ ನಿಭಾನಾ ಸಾಥಿಯಾ’ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ರೂಪಾಲ್ ಪಟೇಲ್​ಗೆ ಈಗ ಅನಾರೋಗ್ಯ ಕಾಡಿದೆ. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಯಾವ ಸಮಸ್ಯೆ ಕಾಡುತ್ತಿದೆ ಎಂಬ ವಿಚಾರ ಇನ್ನೂ ಬಹಿರಂಗಗೊಂಡಿಲ್ಲ. ಅವರ ಪತಿ ರಾಧಾ ಕೃಷ್ಣ ದತ್​​ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ರೂಪಾಲ್​ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಪರೀಕ್ಷೆ ನಡೆಸುತ್ತಿದ್ದು, ರೂಪಾಲ್ ಆರೋಗ್ಯ ಸಮ ಸ್ಥಿತಿಗೆ ಬಂದಿದೆ. ಅವರು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ‘ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರೂಪಾಲ್​ ಆರೋಗ್ಯ ಸಂಪೂರ್ಣವಾಗಿ ಚೇತರಿಕೆ ಕಾಣಲಿದೆ. ಆ ನಂತರವೇ ಅವರು ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಸಾಥ್​​ ನಿಭಾನಾ ಸಾಥಿಯಾ’ ಧಾರಾವಾಹಿಯಲ್ಲಿ ಕೋಕಿಲಾ ಮೋದಿ ಪಾತ್ರಕ್ಕೆ ರೂಪಾಲ್​ ಬಣ್ಣ ಹಚ್ಚಿದ್ದರು. ಈ ಮೂಲಕ ಅವರ ಖ್ಯಾತಿ ಸಾಕಷ್ಟು ಹೆಚ್ಚಿತ್ತು. ರೂಪಾಲ್​ ಕಳೆದ ವರ್ಷ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಇದಕ್ಕೆ ಕಾರಣ ಮ್ಯುಸೀಶಿಯನ್ ಯಶ್​ರಾಜ್​ ಮುಖಟೆ. ‘ಸಾಥ್​​ ನಿಭಾನಾ ಸಾಥಿಯಾ’ದಲ್ಲಿ ಬರುವ ರಸೋಡೆ ಮೇ ಕೌನ್​ ಥಾ ಎಂಬ ಸಂಭಾಷಣೆಗೆ ರ‍್ಯಾಪ್​ ಮಾಡಿದ್ದರು. ಈ ಮೂಲಕ ಯಶ್​ರಾಜ್​ ಹಾಗೂ ರೂಪಾಲ್​ ಇಬ್ಬರೂ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದರು. ‘ಸಾಥ್​​ ನಿಭಾನಾ ಸಾಥಿಯಾ 2’ನಲ್ಲಿ ಕೋಕಿಲಾ ಆಗಿಯೇ ರೂಪಾಲ್​ ಕಾಣಿಸಿಕೊಂಡಿದ್ದರು. ಆದರೆ, ಒಂದೇ ತಿಂಗಳಲ್ಲಿ ಅವರು ಈ ಧಾರಾವಾಹಿಯಿಂದ ಹೊರ ಬಂದಿದ್ದರು.

ಯೇ ರಿಶ್ತೆ ಹೈ ಪ್ಯಾರ್​ ಕೆ ಧಾರಾವಾಹಿಯಲ್ಲೂ ರೂಪಾಲ್​ ನಟಿಸಿದ್ದಾರೆ. ಇದಲ್ಲದೆ, ‘ಅಂತರ್ನಾದ’, ‘ಸೂರಜ್​ ಕಾ ಸತ್ವಾನ್​ ಘೋದಾ’, ಸಮರ್​ ಚಿತ್ರಗಳಲ್ಲಿ ರೂಪಾಲ್​ ನಟಿಸಿದ್ದಾರೆ. ಅವರ ಆರೋಗ್ಯದಲ್ಲಿ ಏರು ಪೇರು ಕಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ:

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?

2020 year in review | ಸಾಮಾಜಿಕ ಮಾಧ್ಯಮಗಳಲ್ಲಿ ನಗೆಯುಕ್ಕಿಸಿದ ಮೀಮ್​ಗಳು

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?