AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಸೋಡೆ ಮೇ ಕೌನ್ ಥಾ’ ಎಂದಿದ್ದ ಹಿರಿಯ ನಟಿ ರೂಪಾಲ್​ ಪಟೇಲ್​ ಆಸ್ಪತ್ರೆಗೆ ದಾಖಲು

‘ಸಾಥ್​​ ನಿಭಾನಾ ಸಾಥಿಯಾ’ ಧಾರಾವಾಹಿಯಲ್ಲಿ ಕೋಕಿಲಾ ಮೋದಿ ಪಾತ್ರಕ್ಕೆ ರೂಪಾಲ್​ ಬಣ್ಣ ಹಚ್ಚಿದ್ದರು. ಈ ಮೂಲಕ ಅವರ ಖ್ಯಾತಿ ಸಾಕಷ್ಟು ಹೆಚ್ಚಿತ್ತು.

‘ರಸೋಡೆ ಮೇ ಕೌನ್ ಥಾ’ ಎಂದಿದ್ದ ಹಿರಿಯ ನಟಿ ರೂಪಾಲ್​ ಪಟೇಲ್​ ಆಸ್ಪತ್ರೆಗೆ ದಾಖಲು
ರೂಪಾಲ್​ ಪಟೇಲ್​
TV9 Web
| Edited By: |

Updated on: Jul 06, 2021 | 4:21 PM

Share

ಹಿಂದಿಯ ‘ಸಾಥ್​​ ನಿಭಾನಾ ಸಾಥಿಯಾ’ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ರೂಪಾಲ್ ಪಟೇಲ್​ಗೆ ಈಗ ಅನಾರೋಗ್ಯ ಕಾಡಿದೆ. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಯಾವ ಸಮಸ್ಯೆ ಕಾಡುತ್ತಿದೆ ಎಂಬ ವಿಚಾರ ಇನ್ನೂ ಬಹಿರಂಗಗೊಂಡಿಲ್ಲ. ಅವರ ಪತಿ ರಾಧಾ ಕೃಷ್ಣ ದತ್​​ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ರೂಪಾಲ್​ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಪರೀಕ್ಷೆ ನಡೆಸುತ್ತಿದ್ದು, ರೂಪಾಲ್ ಆರೋಗ್ಯ ಸಮ ಸ್ಥಿತಿಗೆ ಬಂದಿದೆ. ಅವರು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ‘ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರೂಪಾಲ್​ ಆರೋಗ್ಯ ಸಂಪೂರ್ಣವಾಗಿ ಚೇತರಿಕೆ ಕಾಣಲಿದೆ. ಆ ನಂತರವೇ ಅವರು ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಸಾಥ್​​ ನಿಭಾನಾ ಸಾಥಿಯಾ’ ಧಾರಾವಾಹಿಯಲ್ಲಿ ಕೋಕಿಲಾ ಮೋದಿ ಪಾತ್ರಕ್ಕೆ ರೂಪಾಲ್​ ಬಣ್ಣ ಹಚ್ಚಿದ್ದರು. ಈ ಮೂಲಕ ಅವರ ಖ್ಯಾತಿ ಸಾಕಷ್ಟು ಹೆಚ್ಚಿತ್ತು. ರೂಪಾಲ್​ ಕಳೆದ ವರ್ಷ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಇದಕ್ಕೆ ಕಾರಣ ಮ್ಯುಸೀಶಿಯನ್ ಯಶ್​ರಾಜ್​ ಮುಖಟೆ. ‘ಸಾಥ್​​ ನಿಭಾನಾ ಸಾಥಿಯಾ’ದಲ್ಲಿ ಬರುವ ರಸೋಡೆ ಮೇ ಕೌನ್​ ಥಾ ಎಂಬ ಸಂಭಾಷಣೆಗೆ ರ‍್ಯಾಪ್​ ಮಾಡಿದ್ದರು. ಈ ಮೂಲಕ ಯಶ್​ರಾಜ್​ ಹಾಗೂ ರೂಪಾಲ್​ ಇಬ್ಬರೂ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದರು. ‘ಸಾಥ್​​ ನಿಭಾನಾ ಸಾಥಿಯಾ 2’ನಲ್ಲಿ ಕೋಕಿಲಾ ಆಗಿಯೇ ರೂಪಾಲ್​ ಕಾಣಿಸಿಕೊಂಡಿದ್ದರು. ಆದರೆ, ಒಂದೇ ತಿಂಗಳಲ್ಲಿ ಅವರು ಈ ಧಾರಾವಾಹಿಯಿಂದ ಹೊರ ಬಂದಿದ್ದರು.

ಯೇ ರಿಶ್ತೆ ಹೈ ಪ್ಯಾರ್​ ಕೆ ಧಾರಾವಾಹಿಯಲ್ಲೂ ರೂಪಾಲ್​ ನಟಿಸಿದ್ದಾರೆ. ಇದಲ್ಲದೆ, ‘ಅಂತರ್ನಾದ’, ‘ಸೂರಜ್​ ಕಾ ಸತ್ವಾನ್​ ಘೋದಾ’, ಸಮರ್​ ಚಿತ್ರಗಳಲ್ಲಿ ರೂಪಾಲ್​ ನಟಿಸಿದ್ದಾರೆ. ಅವರ ಆರೋಗ್ಯದಲ್ಲಿ ಏರು ಪೇರು ಕಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ:

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?

2020 year in review | ಸಾಮಾಜಿಕ ಮಾಧ್ಯಮಗಳಲ್ಲಿ ನಗೆಯುಕ್ಕಿಸಿದ ಮೀಮ್​ಗಳು

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು