AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಸ್ ಏಂಜಲೀಸ್​​ಗೆ ‘ರಾಮಾಯಣ’ ಟೀಸರ್; ಭರ್ಜರಿ ಪ್ರತಿಕ್ರಿಯೆ

Yash: ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾವಣನಾಗಿ ಯಶ್ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಶೋನಲ್ಲಿ ಭಾಗವಹಿಸಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಗ್ರಾಫಿಕ್ಸ್​​ನ ಹಾಡಿ ಹೊಗಳಿದ್ದಾರೆ.

ಲಾಸ್ ಏಂಜಲೀಸ್​​ಗೆ ‘ರಾಮಾಯಣ’ ಟೀಸರ್; ಭರ್ಜರಿ ಪ್ರತಿಕ್ರಿಯೆ
ಯಶ್
ರಾಜೇಶ್ ದುಗ್ಗುಮನೆ
|

Updated on:Mar 31, 2026 | 4:01 PM

Share

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಯಲ್ಲಿ ರಿಲೀಸ್ ಆಗಲಿದೆ. ಮೊದಲ ಪಾರ್ಟ್​ ಈ ವರ್ಷ ತೆರೆಗೆ ಬಂದರೆ, ಎರಡನೇ ಭಾಗ 2027ರ ದೀಪಾವಳಿಗೆ ತೆರೆಗೆ ಬರಲಿದೆ. ಈ ಚಿತ್ರದ ಪ್ರಚಾರವನ್ನು ಇನ್ನೂ ಆರಂಭಿಸಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈಗ ಇದಕ್ಕೆ ಉತ್ತರವಾಗಿ ಸಿನಿಮಾ ತಂಡ ಪ್ರಚಾರ ಆರಂಭಿಸಿದೆ. ‘ರಾಮಾಯಣ’ ತಂಡ ಇತ್ತೀಚೆಗೆ ಲಾಸ್ ಏಂಜಲೀಸ್​​ಗೆ ತೆರಳಿತ್ತು. ಅಲ್ಲಿ ‘ರಾಮಾಯಣ’ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದ್ದು, ಮೆಚ್ಚುಗೆ ಪಡೆದಿದೆ.

ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾವಣನಾಗಿ ಯಶ್ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಶೋನಲ್ಲಿ ಭಾಗವಹಿಸಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾದ ಗ್ರಾಫಿಕ್ಸ್​​ನ ಹಾಡಿ ಹೊಗಳಿದ್ದಾರೆ. ಈ ವಿಮರ್ಶೆಗಳನ್ನು ಕೇಳಿ ರಣಬೀರ್ ಕಪೂರ್ ಕೂಡ ಖುಷಿಪಟ್ಟಿದ್ದಾರೆ.

‘ಅದ್ಭುತ ವಿಶ್ಯುವಲ್ಸ್’ ಎಂದು ಕೆಲವರು ಹೇಳಿದ್ದಾರೆ. ‘ಈ ಸಿನಿಮಾ ನೋಡಲು ಕಾದಿದ್ದೇವೆ’ ಎಂದು ಇನ್ನೂ ಕೆಲವರು ಹೇಳಿದ್ದಾರೆ. ಈ ಟೀಸರ್ ನೋಡಲು ಅಭಿಮಾನಿಗಳು ಕಾದಿದ್ದಾರೆ. ಏಪ್ರಿಲ್ 2ರಂದು ಟೀಸರ್ ಪ್ರೇಕ್ಷಕರ ಎದುರು ಬರಲಿದೆ. ಯಶ್ ಅವರನ್ನು ರಾವಣನಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ

‘ರಾಮಾಯಣ’ ಚಿತ್ರಕ್ಕೆ 2 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ರಿಕವರಿ ಮಾಡಲಿದೆಯೇ ಎಂಬುದು ಸದ್ಯದ ಪ್ರಶ್ನೆ. ಎಲ್ಲಕ್ಕಿಂತ ಮುಖ್ಯವಾಗಿ, ಸಿನಿಮಾ ಸೂಕ್ಷ್ಮ ವಿಷಯಗಳ ಮೇಲಿದೆ. ಹೀಗಾಗಿ, ಕಥೆಯಲ್ಲಿ ಕೊಂಚ ಬದಲಾವಣೆ ಆದರೂ ಸಾಕಷ್ಟು ಟ್ರೋಲ್​​​ಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:16 pm, Tue, 31 March 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!