AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ; ನಿರ್ಮಾಪಕ ವೆಂಕಟ್ ಸೇರಿ ಹಲವು ಸೆಲೆಬ್ರಿಟಿಗಳು ಅರೆಸ್ಟ್​

ಮಾದಾಪುರದ ವಿಠ್ಠಲ್​ರಾವ್ ನಗರದ ವೈಷ್ಣವಿ ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿದರು. ಈ ವೇಳೆ ಕೊಕೆನ್, ಎಲ್​ಎಸ್​ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಲರನ್ನೂ ಮಾದಾಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ; ನಿರ್ಮಾಪಕ ವೆಂಕಟ್ ಸೇರಿ ಹಲವು ಸೆಲೆಬ್ರಿಟಿಗಳು ಅರೆಸ್ಟ್​
ರೇವ್ ಪಾರ್ಟಿ ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Aug 31, 2023 | 7:40 AM

Share

ಟಾಲಿವುಡ್ ಚಿತ್ರರಂಗದಲ್ಲಿ ಮತ್ತೆ ಡ್ರಗ್ಸ್ ವಿಚಾರ ಸುದ್ದಿಯಲ್ಲಿದೆ. ಡ್ರಗ್ ಹೊಂದಿದ್ದ ಆರೋಪದ ಮೇಲೆ ಇತ್ತೀಚೆಗೆ ನಿರ್ಮಾಪಕ ಕೆ.ಪಿ. ಚೌಧರಿಯನ್ನು (KP Chowdary) ಬಂಧಿಸಲಾಗಿತ್ತು. ಈಗ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಬೇಟೆ ಆಡಿದ್ದಾರೆ. ಬುಧವಾರ (ಆಗಸ್ಟ್ 30) ಮಧ್ಯರಾತ್ರಿ ಹೈದರಾಬಾದ್​​ನ ಮಾದಾಪುರದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ನಡೆದಿದೆ. ಈ ವೇಳೆ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿ ಆಗಿದೆ.

ಮಾದಾಪುರದ ವಿಠ್ಠಲ್​ರಾವ್ ನಗರದ ವೈಷ್ಣವಿ ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿದರು. ಈ ವೇಳೆ ಕೊಕೆನ್, ಎಲ್​ಎಸ್​ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಲರನ್ನೂ ಮಾದಾಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಈ ಪಾರ್ಟಿಯಲ್ಲಿ ಭಾಗವಹಿಸಿದವರ ಹೆಸರು ಇನ್ನಷ್ಟೇ ಹೊರ ಬೀಳಬೇಕಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಈ ರೇವ್ ಪಾರ್ಟಿಯಲ್ಲಿ ಗಣ್ಯರ ಮಕ್ಕಳು ಭಾಗಿ ಆಗಿರುವ ಶಂಕೆ ಇದೆ. ಇವರಿಗೆ ಡ್ರಗ್ಸ್ ಸರಬರಾಜು ಮಾಡಿದವರು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮತ್ತೆ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರ ಮುನ್ನೆಲೆಗೆ ಬಂದಿರುವುದು ಅನೇಕರ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ

ಚೌಧರಿ ಬಂಧನದ ನಂತರ ಅಲರ್ಟ್ ಆಗಿದ್ದ ಎನ್​ಸಿಬಿ

ಕಳೆದ ಕೆಲ ವರ್ಷಗಳ ಹಿಂದೆ ಟಾಲಿವುಡ್ ಅಂಗಳದಲ್ಲಿ ಡ್ರಗ್ಸ್ ವಿಚಾರ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನೇಕ ಸೆಲೆಬ್ರಿಟಿಗಳ ಹೇಳಿಕೆಯನ್ನು ಪಡೆಯಲಾಗಿತ್ತು. ಆ ಬಳಿಕ ಡ್ರಗ್ಸ್ ಬಳಕೆ ಕಡಿಮೆ ಆಗಿದೆ ಎಂದು ಎಲ್ಲರೂ ಭಾವಿಸಿದರು. ಆದರೆ, ನಿರ್ಮಾಪಕ ಕೆ.ಪಿ. ಚೌಧರಿ ಅರೆಸ್ಟ್ ಆದ ಬಳಿಕ ಎನ್​ಸಿಬಿ ಅಲರ್ಟ್ ಆಗಿದೆ. ಚೌಧರಿಯಿಂದ ಹೆಚ್ಚಿನ ಮಾಹಿತಿ ಪಡೆದು ಆ ನಿಟ್ಟಿನಲ್ಲಿ ವಿಚಾರಣೆ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ