AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ರೇವ್​ ಪಾರ್ಟಿ ಮೇಲೆ ಪೊಲೀಸ್​ ದಾಳಿ; ಚಿರಂಜೀವಿ ಕುಟುಂಬದ ಮನೆ ಮಗಳು ನಿಹಾರಿಕಾ ಕೊನಿಡೆಲಾ ವಶಕ್ಕೆ​

Rave Party | Niharika Konidela: ಐಷಾರಾಮಿ ಹೋಟೆಲ್​ನಲ್ಲಿ ರೇವ್​ ಪಾರ್ಟಿ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ನಿಹಾರಿಕಾ ಕೊನಿಡೆಲಾ ಸೇರಿದಂತೆ ಅನೇಕರನ್ನು ವಶಕ್ಕೆ ಪಡೆಯಲಾಗಿದೆ.

Niharika Konidela: ರೇವ್​ ಪಾರ್ಟಿ ಮೇಲೆ ಪೊಲೀಸ್​ ದಾಳಿ; ಚಿರಂಜೀವಿ ಕುಟುಂಬದ ಮನೆ ಮಗಳು ನಿಹಾರಿಕಾ ಕೊನಿಡೆಲಾ ವಶಕ್ಕೆ​
ನಿಹಾರಿಕಾ ಕೊನಿಡೆಲಾ
TV9 Web
| Edited By: |

Updated on:Apr 03, 2022 | 4:34 PM

Share

ಸೆಲೆಬ್ರಿಟಿಗಳ ವಲಯದಲ್ಲಿ ಮತ್ತೆ ಮಾದಕ ವಸ್ತುಗಳ ಕುರಿತಾದ ವಿಚಾರ ಸದ್ದು ಮಾಡಲು ಆರಂಭಿಸಿದೆ. ಹೈದರಾಬಾದ್​ನಲ್ಲಿ ರೇವ್​ ಪಾರ್ಟಿ (Rave Party) ನಡೆಯುತ್ತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ನಗರದ ಬಂಜಾರ ಹಿಲ್ಸ್​ನಲ್ಲಿ ಇರುವ ಖಾಸಗಿ ಹೋಟೆಲ್​ನಲ್ಲಿ ರೇವ್​ ಪಾರ್ಟಿ ನಡೆಯುತ್ತಿತ್ತು. ಅದರಲ್ಲಿ ಅನೇಕ ಪ್ರಭಾವಿ ವ್ಯಕ್ತಿಗಳ ಮಕ್ಕಳು, ಸೆಲೆಬ್ರಿಟಿ ಕುಟುಂಬದ ಕುಡಿಗಳು ಇದ್ದರು ಎಂಬ ಮಾಹಿತಿ ಸಿಕ್ಕಿದೆ. ಹೋಟೆಲ್​ನಲ್ಲಿ ಇದ್ದ ನಟಿ ನಿಹಾರಿಕಾ ಕೊನಿಡೆಲಾ  (Niharika Konidela) ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೆಲುಗು ನಟ ನಾಗಬಾಬು ಅವರ ಪುತ್ರಿ ನಿಹಾರಿಕಾ ಅವರು ಆ ಹೋಟೆಲ್​ನಲ್ಲಿ ಏನು ಮಾಡುತ್ತಿದ್ದರು ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ‘ಮೆಗಾ ಸ್ಟಾರ್​​’​ ಚಿರಂಜೀವಿ  (Megastar Chiranjeevi) ಕುಟುಂಬದ ಮನೆ ಮಗಳು ಎಂಬ ಕಾರಣಕ್ಕೆ ನಿಹಾರಿಕಾ ಅವರ ಬಂಧನದ ವಿಷಯ ಹೆಚ್ಚು ವೈರಲ್​ ಆಗಿದೆ. ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಂಜಾರಾ ಹಿಲ್ಸ್​ ಠಾಣೆಯ ಪೊಲೀಸರು ಬಳಿಕ ಅವರನ್ನು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ನಿಹಾರಿಕಾ ಅವರು ಪೊಲೀಸ್​ ಠಾಣೆಯಿಂದ ಹೊರಬರುತ್ತಿರುವ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್​ನ 5 ಸ್ಟಾರ್​ ಹೋಟೆಲ್​ನಲ್ಲಿ ಶನಿವಾರ (ಏ.2) ಮಧ್ಯರಾತ್ರಿ ರೇವ್​ ಪಾರ್ಟಿ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಂದಾಜು 150 ಜನರನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ನಿಹಾರಿಕಾ ಕೊನಿಡೆಲಾ, ಬಿಗ್​ ಬಾಸ್​ ತೆಲುಗು ವಿನ್ನರ್​ ರಾಹುಲ್ ಕೂಡ ಇದ್ದರು. ಇನ್ನೂ ಅನೇಕ ಸೆಲೆಬ್ರಿಟಿಗಳ ಮಕ್ಕಳ ಹೆಸರು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಆ ಬಗ್ಗೆ ಇನ್ನಷ್ಟು ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಭಾನುವಾರ ಮಧ್ಯಾಹ್ನ 12 ಗಂಟೆವರೆಗೂ ನಿಹಾರಿಕಾ ಕೊನಿಡೆಲಾ ಅವರು ಬಂಜಾರ ಹಿಲ್ಸ್​ ಪೊಲೀಸ್​ ಠಾಣೆಯಲ್ಲಿ ಇದ್ದರು. ಬಳಿಕ ಅವರನ್ನು ಬಿಟ್ಟು ಕಳಿಸಲಾಯಿತು. ಪೊಲೀಸ್​ ಠಾಣೆಯಿಂದ ಹೊರಬರುವ ವೇಳೆ ಅವರ ಪ್ರತಿಕ್ರಿಯೆ ಪಡೆಯಲು ಮಾಧ್ಯಮದವರು ಪ್ರಯತ್ನಿಸಿದರು. ಆದರೆ ವಿಹಾರಿಕಾ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ರೇವ್​ ಪಾರ್ಟಿಯಲ್ಲಿ ಅವರು ತೊಡಗಿಕೊಂಡಿದ್ದರಾ? ಹೋಟೆಲ್​ನಲ್ಲಿ ಅವರು ಏನು ಮಾಡುತ್ತಿದ್ದರು? ಈ ಎಲ್ಲ ಪ್ರಶ್ನೆಗಳ ಕುರಿತಂತೆ ತನಿಖೆ ನಡೆಯುತ್ತಿದೆ.​

ಮಧ್ಯರಾತ್ರಿ ಬಳಿಕ ಹೋಟೆಲ್​ ತೆರೆಯಲು ಅನುಮತಿ ನೀಡಿರಲಿಲ್ಲ. ದಾಳಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಪತ್ತೆ ಆಗಿವೆ. ಆ ಕಾರಣಕ್ಕಾಗಿ ನಿಹಾರಿಕಾ, ರಾಹುಲ್​ ಮುಂತಾದವರನ್ನು ವಶಕ್ಕೆ ಪಡೆಯಲಾಯಿತು. ಸದ್ಯ ತನಿಖೆ ಜಾರಿಯಲ್ಲಿದೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ಕುರಿತಂತೆ ನಿಹಾರಿಕಾ ತಂದೆ ನಾಗ ಬಾಬು ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಪುತ್ರಿಯ ಪರವಾಗಿ ಅವರು ಮಾತನಾಡಿದ್ದಾರೆ.

‘ಅನುಮತಿ ಇಲ್ಲದ ವೇಳೆಯಲ್ಲಿ ಪಬ್​ ತೆರೆದಿದ್ದಕ್ಕಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಿಹಾರಿಕಾ ಏನೂ ತಪ್ಪು ಮಾಡಿಲ್ಲ ಎಂದು ನಮಗೆ ಪೊಲೀಸರು ಹೇಳಿದ್ದಾರೆ. ಆ ಸ್ಥಳದಲ್ಲಿ ಇದ್ದರು ಎಂಬ ಕಾರಣಕ್ಕೆ ನಿಹಾರಿಕಾರನ್ನು ವಶಕ್ಕೆ ಪಡೆಯಲಾಯಿತು. ಬೇರೆ ಯಾವುದೇ ರೀತಿಯ ಗಾಳಿ ಸುದ್ದಿ ಹರಡಬಾರದು ಎನ್ನುವ ಉದ್ದೇಶದಿಂದ ಈ ಸ್ಪಷ್ಟನೆ ನೀಡುತ್ತಿದ್ದೇನೆ’ ಎಂದು ನಾಗ ಬಾಬು ಹೇಳಿದ್ದಾರೆ.

ಇದನ್ನೂ ಓದಿ:

ಮೆಗಾ ನಟಿ ನಿಹಾರಿಕಾ ಮದುವೆ: ಅದ್ದೂರಿ ವಿವಾಹ, ದುಬಾರಿ ಉಡುಗೊರೆಗಳು..

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..

Published On - 4:02 pm, Sun, 3 April 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್