AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

2009ರಲ್ಲಿ ವಿವಾಹವಾಗಿದ್ದ ಜಯಂ ರವಿ ಮತ್ತು ಆರತಿ ದಂಪತಿಯ ಕುಟುಂಬದಲ್ಲಿ ಬಿರುಕು ಮೂಡಿತು. 2024ರಲ್ಲಿ ಆ ವಿಷಯವನ್ನು ಅವರು ಘೋಷಿಸಿದ್ದರು. ಈಗ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ಅವರ ವಿಚ್ಛೇದನ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅದು ಅವರ ವೃತ್ತಿಜೀವನದ ಮೇಲೂ ಪರಿಣಾಮ ಬೀರಿದೆ.

ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ
Ravi Mohan
ಮದನ್​ ಕುಮಾರ್​
|

Updated on: Jun 01, 2026 | 10:49 PM

Share

ಪತ್ನಿ ಆರತಿ ಅವರಿಂದ ವಿಚ್ಛೇದನ ಪಡೆಯುವವರೆಗೂ ಚಿತ್ರರಂಗದಿಂದ ದೂರ ಉಳಿಯುವುದಾಗಿ ಘೋಷಿಸಿದ್ದ ತಮಿಳು ನಟ ಜಯಂ ರವಿ (Jayam Ravi), ಈಗ ಚಿತ್ರಪ್ರೇಮಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾ ಯೂನಿಮ್ಯಾಟಿಕ್ ಯೂನಿವರ್ಸ್ (LCU) ಸೇರುವ ಮೂಲಕ ಜಯಂ ರವಿ ಚಿತ್ರರಂಗಕ್ಕೆ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಲೋಕೇಶ್ ಕನಕರಾಜ್ ಪ್ರಸ್ತುತಪಡಿಸುತ್ತಿರುವ ‘ಬೆಂಜ್’ (Benz) ಚಿತ್ರಕ್ಕೆ ಜಯಂ ರವಿ (ರವಿ ಮೋಹನ್) ಆಯ್ಕೆಯಾಗಿದ್ದಾರೆ.

ಜಯಂ ರವಿ ಅವರು ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗಿರುವುದು ಈ ಮೂಲಕ ಖಚಿತವಾಗಿದೆ. ಸ್ವತಃ ನಿರ್ದೇಶಕ ಲೋಕೇಶ್ ಕನಕರಾಜ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದು, ‘ನಮ್ಮ ಯೂನಿವರ್ಸ್‌ಗೆ ಸುಸ್ವಾಗತ ರವಿ ಸರ್’ ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿದ ಕೂಡಲೇ ಜನರಿಗೆ ರವಿ ಮೋಹನ್ ಅವರ ವೈಯಕ್ತಿಕ ವಿಷಯ ನೆನಪಾಗಿದೆ.

ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಜಯಂ ರವಿ, ತಮ್ಮ ವೈಯಕ್ತಿಕ ಜೀವನದ ಏರುಪೇರುಗಳಿಂದ ಬೇಸತ್ತು ಕಠಿಣ ನಿರ್ಧಾರ ಪ್ರಕಟಿಸಿದ್ದರು. ‘ನನ್ನ ವಿಚ್ಛೇದನ ಪ್ರಕ್ರಿಯೆ ಮುಗಿಯುವವರೆಗೂ ನನ್ನ ಯಾವುದೇ ಸಿನಿಮಾಗಳು ತೆರೆಗೆ ಬರುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನನಗೆ ನಟಿಸಲು ಸಾಧ್ಯವಾಗುತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಎದುರಿಸುತ್ತಿರುವ ಸೈಬರ್ ಬುಲ್ಲಿಂಗ್ ಮತ್ತು ನಿಂದನೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ನನ್ನ ವೈಯಕ್ತಿಕ ಜೀವನ ಸರಿಯಾಗುವವರೆಗೂ ಕ್ಯಾಮೆರಾ ಮುಂದೆ ನಿಲ್ಲಲ್ಲ’ ಎಂದು ಭಾವುಕರಾಗಿದ್ದರು.

ಅಲ್ಲದೇ, ‘ನನ್ನ ನಿರ್ಧಾರದಿಂದ ಯಾರಿಗೂ ತೊಂದರೆಯಾಗಬಾರದು. ನಿರ್ಮಾಪಕರಿಂದ ಪಡೆದ ಹಣವನ್ನು ಹಿಂತಿರುಗಿಸಿಯಾದರೂ ಸಿನಿಮಾದಿಂದ ಬ್ರೇಕ್ ತೆಗೆದುಕೊಳ್ಳುತ್ತೇನೆ’ ಎಂದಿದ್ದರು. ಆದರೆ ಈ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಲೋಕೇಶ್ ಕನಕರಾಜ್ ಅವರಂತಹ ದೊಡ್ಡ ನಿರ್ದೇಶಕನ ಸಿನಿಮಾವನ್ನು ಒಪ್ಪಿಕೊಳ್ಳುವ ಮೂಲಕ ರವಿ ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಈ ನಡುವೆ ಜಯಂ ರವಿ ಅವರೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಗಾಯಕಿ ಕೆನಿಶಾ ಫ್ರಾನ್ಸಿಸ್ ಅವರೊಂದಿಗಿನ ಸಂಬಂಧದ ವದಂತಿಗಳು ಇತ್ತೀಚೆಗೆ ಜೋರಾಗಿದ್ದವು. 2025ರಲ್ಲಿ ಇಬ್ಬರೂ ಒಂದೇ ರೀತಿಯ ಉಡುಪು ಧರಿಸಿ ಮದುವೆಯೊಂದರಲ್ಲಿ ಭಾಗವಹಿಸಿದ್ದರು. ಆದರೆ ಇತ್ತೀಚೆಗಷ್ಟೇ ಕೆನಿಶಾ, ‘ನಾನು ಈ ಕಥೆಯೊಳಗೆ ಪ್ರೀತಿಯಿಂದ ಬಂದೆ, ಆದರೆ ಈಗ ಮೌನವಾಗಿ ಹೊರನಡೆಯುತ್ತಿದ್ದೇನೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಜಯಂ ರವಿ ಜೊತೆಗಿನ ಬ್ರೇಕ್‌ಅಪ್ ಮುನ್ಸೂಚನೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು