ನಟಿಯ ಜೊತೆ ರವಿ ತೇಜ ಲಿಪ್​ ಲಾಕ್​; ವೈರಲ್​ ಫೋಟೋದಲ್ಲಿರುವ ಸುಂದರಿ ಯಾರು? ಅರೆರೆ ‘ಕಿಲಾಡಿ’

ತೆಲುಗಿನ ‘ಕಿಲಾಡಿ’ ಸಿನಿಮಾ ಕನ್ನಡಕ್ಕೂ ಡಬ್​ ಆಗಿ ಫೆ.11ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದ ಲಿಪ್​ ಲಾಕ್​ ಫೋಟೋ ಈಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ನಟಿಯ ಜೊತೆ ರವಿ ತೇಜ ಲಿಪ್​ ಲಾಕ್​; ವೈರಲ್​ ಫೋಟೋದಲ್ಲಿರುವ ಸುಂದರಿ ಯಾರು? ಅರೆರೆ ‘ಕಿಲಾಡಿ’
ರವಿ ತೇಜ ಲಿಪ್​ ಲಾಕ್​ ಫೋಟೋ ವೈರಲ್​
Follow us
| Updated By: ಮದನ್​ ಕುಮಾರ್​

Updated on: Feb 07, 2022 | 9:32 AM

ಸಿನಿಮಾಗಳಲ್ಲಿ ನಟ-ನಟಿಯರು ಲಿಪ್​ ಲಾಕ್​ ಮಾಡುವುದು ಈಗ ಸಾಮಾನ್ಯವಾಗಿದೆ. ಆದರೂ ಕೂಡ ಕೆಲವು ಕಲಾವಿದರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡು ಬಂದಿದ್ದಾರೆ. ಟಾಲಿವುಡ್​ ನಟ ರವಿ ತೇಜ (Ravi Teja) ಅವರು ಕೂಡ ಇಷ್ಟು ವರ್ಷಗಳ ಕಾಲ ಕಿಸ್ಸಿಂಗ್​ ದೃಶ್ಯಗಳಿಂದ ದೂರ ಉಳಿದುಕೊಂಡಿದ್ದರು. ಆದರೆ ಈಗ ಅವರು ಆ ನಿಯಮವನ್ನು ಮುರಿದಿದ್ದಾರೆ! ತಮ್ಮ ಜೊತೆ ‘ಕಿಲಾಡಿ’ ಸಿನಿಮಾದಲ್ಲಿ ನಟಿಸಿರುವ ಸುಂದರಿಗೆ ಅವರು ಲಿಪ್​ ಲಾಕ್​ (Lip Lock) ಮಾಡಿದ್ದಾರೆ. ಅವರು ತುಂಬ ಇಂಟಿಮೇಟ್​ ಆಗಿ ಕಿಸ್​ ಮಾಡುತ್ತಿರುವ ಫೋಟೋ ಲೀಕ್​ ಆಗಿದೆ. ರಾತ್ರೋರಾತ್ರಿ ವೈರಲ್​ ಆಗಿರುವ ಈ ಫೋಟೋದ ಹಿಂದೆ ಕೆಲವು ಮರ್ಮ ಕೂಡ ಇದೆ. ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇದ್ದಾರೆ. ಡಿಂಪಲ್​ ಹಯಾತಿ (Dimple Hayathi) ಮತ್ತು ಮೀನಾಕ್ಷಿ ಚೌಧರಿ ಅವರು ರವಿ ತೇಜ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಇಬ್ಬರಲ್ಲಿ ರವಿ ತೇಜ ಲಿಪ್​ ಲಾಕ್​ ಮಾಡಿದ್ದು ಯಾರ ಜೊತೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಆ ವಿಚಾರವನ್ನು ಚಿತ್ರತಂಡ ಬೇಕಂತಲೇ ಮರೆಮಾಚಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ತೆಲುಗಿನಲ್ಲಿ ತಯಾರಾಗಿರುವ ‘ಕಿಲಾಡಿ’ ಸಿನಿಮಾ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಲಿದೆ. ಫೆ.11ರಂದು ಈ ಸಿನಿಮಾವನ್ನು ರಿಲೀಸ್​ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳು ಜನಮೆಚ್ಚುಗೆ ಗಳಿಸಿವೆ. ಭರ್ಜರಿಯಾಗಿ ಪ್ರಚಾರ ಮಾಡುತ್ತಿರುವ ಚಿತ್ರತಂಡಕ್ಕೆ ಈಗ ಈ ಲಿಪ್​ ಲಾಕ್​ ಫೋಟೋ ವರದಾನವಾಗಿದೆ.

ಈ ಫೋಟೋದಲ್ಲಿ ಇರುವ ನಟಿ ಯಾರು ಎಂಬುದು ಬಹಿರಂಗ ಆಗಿಲ್ಲ. ಆ ಪ್ರಶ್ನೆಗೆ ಉತ್ತರ ತಿಳಿಯಬೇಕು ಎಂದರೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ಹೋಗಬೇಕಾಗುವುದು ಅನಿವಾರ್ಯ. ‘ಕಿಲಾಡಿ’ ಎಂದು ಶೀರ್ಷಿಕೆಗೆ ತಕ್ಕಂತೆಯೇ ಚಿತ್ರತಂಡ ಪ್ರಚಾರ ಪಡೆಯುತ್ತಿದೆ. ಅಂದಹಾಗೆ, ಈ ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಬಿಸ್ನೆಸ್​ ಮಾಡಿದೆ. ಅದರಿಂದ ನಿರ್ಮಾಪಕರು ತುಂಬ ಖುಷಿ ಆಗಿದ್ದಾರೆ.

‘ಕಿಲಾಡಿ’ ಚಿತ್ರದ ವಿತರಣೆ ಹಕ್ಕುಗಳು ಭಾರಿ ಮೊತ್ತಕ್ಕೆ ಸೇಲ್​ ಆಗಿವೆ. ಒಟಿಟಿ, ಕಿರುತೆರೆ ಪ್ರಸಾರದ ಹಕ್ಕುಗಳ ವಿಚಾರದಲ್ಲಿಯೂ ದೊಡ್ಡ ಆಫರ್​ ಬಂದಿದೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾದ ರಿಲೀಸ್​ಗೂ ಮುನ್ನವೇ ನಿರ್ಮಾಪಕರು ಲಾಭದಲ್ಲಿದ್ದಾರೆ. ಇದಕ್ಕೆ ಕಾರಣವಾದ ನಿರ್ದೇಶಕರಿಗೆ ಅವರು ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಯನ್ನು ನೀಡಿದ್ದಾರೆ. 1.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​ ಕಾರನ್ನು ನಿರ್ದೇಶಕ ರಮೇಶ್​ ವರ್ಮಾಗೆ ನಿರ್ಮಾಪಕರು ಕೊಟ್ಟಿದ್ದಾರೆ.

ನಿರ್ದೇಶಕರು ಕಾರನ್ನು ಉಡುಗೊರೆಯಾಗಿ ಪಡೆಯುತ್ತಿರುವ ಫೋಟೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ‘ಪುಷ್ಪ’ ಸಿನಿಮಾಗೆ ಸೂಪರ್​ ಹಿಟ್​ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್​ ಅವರೇ ‘ಕಿಲಾಡಿ’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ಹೈಪ್​ ಸೃಷ್ಟಿ ಆಗಿದೆ.

ಇದನ್ನೂ ಓದಿ:

ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ: ತೆಲುಗು ನಟರಾದ ರವಿತೇಜ, ಚಾರ್ಮಿ ಹೆಸರೂ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ

ನಾಗ ಚೈತನ್ಯ ಜತೆ ಸಾಯಿ ಪಲ್ಲವಿ ಲಿಪ್​ ಲಾಕ್​ ಮಾಡಿದ್ದು ನಿಜವೇ? ‘ಲವ್​ ಸ್ಟೋರಿ’ ಹಿಂದಿನ ಸತ್ಯ ಬಾಯ್ಬಿಟ್ಟ ನಟಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ