AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1.5 ಕೋಟಿ ರೂ. ಬೆಲೆಯ ಕಾರು ಗಿಫ್ಟ್​ ಪಡೆದ ‘ಕಿಲಾಡಿ’ ನಿರ್ದೇಶಕ; ಆದರೆ ಚಿತ್ರವೇ ಇನ್ನೂ ರಿಲೀಸ್​ ಆಗಿಲ್ಲ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಕಿಲಾಡಿ’ ಕೂಡ ಪ್ರಮುಖ ಸ್ಥಾನ ಪಡೆದುಕೊಂಡಿದೆ. ರಿಲೀಸ್​ಗೂ ಮುನ್ನವೇ ಈ ಸಿನಿಮಾ ಲಾಭ ಕಂಡಿದೆ.

1.5 ಕೋಟಿ ರೂ. ಬೆಲೆಯ ಕಾರು ಗಿಫ್ಟ್​ ಪಡೆದ ‘ಕಿಲಾಡಿ’ ನಿರ್ದೇಶಕ; ಆದರೆ ಚಿತ್ರವೇ ಇನ್ನೂ ರಿಲೀಸ್​ ಆಗಿಲ್ಲ
ನಿರ್ದೇಶಕ ರಮೇಶ್​ ವರ್ಮಾ
TV9 Web
| Edited By: |

Updated on: Jan 30, 2022 | 3:38 PM

Share

ಚಿತ್ರರಂಗದಲ್ಲಿ ಸ್ಟಾರ್​ ನಟ-ನಟಿಯರಿಗೆ ಮಾತ್ರವಲ್ಲದೇ ನಿರ್ದೇಶಕರಿಗೂ ಒಳ್ಳೆಯ ಸಂಭಾವನೆ ಸಿಗುತ್ತದೆ. ನಿರ್ದೇಶಕರು ಮಾಡಿದ ಕೆಲಸ ನಿರ್ಮಾಪಕರಿಗೆ ಇಷ್ಟವಾದರೆ ಖುಷಿಯಿಂದ ಸಂಭಾವನೆ ನೀಡುತ್ತಾರೆ. ಈ ರೀತಿ ಆಗಿದ್ದಕ್ಕೆ ಹಲವು ಉದಾಹರಣೆಗಳಿವೆ. ಟಾಲಿವುಡ್​ನ ‘ಕಿಲಾಡಿ’ (Khiladi Movie) ಸಿನಿಮಾ ನಿರ್ದೇಶಕ ರಮೇಶ್​ ವರ್ಮಾ ಅವರಿಗೂ ಅಂಥ ಲುಕ್​ ಖುದುರಿದೆ. ಅವರು ಮಾಡಿದ ಕೆಲಸವನ್ನು ನಿರ್ಮಾಪಕ ಕೊನೆರು ಸತ್ಯನಾರಾಯಣ ಮೆಚ್ಚಿಕೊಂಡಿದ್ದಾರೆ. ಹಾಗಾಗಿ ನಿರ್ದೇಶಕ ರಮೇಶ್​ ವರ್ಮಾಗೆ ಅವರು ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಸದ್ಯಕ್ಕಂತೂ ಟಾಲಿವುಡ್​ (Tollywood News) ಅಂಗಳದಲ್ಲಿ ಎಲ್ಲರ ಬಾಯಲ್ಲೂ ಇದೇ ಸುದ್ದಿ. ವಿಶೇಷ ಏನೆಂದರೆ, ‘ಕಿಲಾಡಿ’ ಸಿನಿಮಾ ಇನ್ನೂ ಬಿಡುಗಡೆಯೇ ಆಗಿಲ್ಲ! ಅಷ್ಟರಲ್ಲಾಗಲೇ ನಿರ್ಮಾಪಕರು ಹ್ಯಾಪಿ ಮೂಡ್​ನಲ್ಲಿ ಇದ್ದಾರೆ. ಈ ಚಿತ್ರಕ್ಕೆ ರವಿ ತೇಜ (Ravi Teja) ಹೀರೋ. ಅವರ ಜೊತೆ ಡಿಂಪಲ್​ ಹಯಾತಿ, ಮೀನಾಕ್ಷಿ ಚೌದರಿ ಅವರು ಹೀರೋಯಿನ್​ ಆಗಿ ನಟಿಸಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾದಿಂದ ನಿರ್ದೇಶಕರಿಗೆ ಭಾರಿ ಪ್ರಶಂಸೆ ಸಿಗುತ್ತಿದೆ.

ಫೆ.11ರಂದು ಕಿಲಾಡಿ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ವಿತರಣೆ ಹಕ್ಕುಗಳು ಭಾರಿ ಮೊತ್ತಕ್ಕೆ ಸೇಲ್​ ಆಗಿವೆ. ಒಟಿಟಿ, ಕಿರುತೆರೆ ಪ್ರಸಾರದ ಹಕ್ಕುಗಳ ವಿಚಾರದಲ್ಲಿಯೂ ದೊಡ್ಡ ಆಫರ್​ ಬಂದಿದೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾದ ರಿಲೀಸ್​ಗೂ ಮುನ್ನವೇ ನಿರ್ಮಾಪಕರು ಲಾಭದಲ್ಲಿದ್ದಾರೆ. ಇದಕ್ಕೆ ಕಾರಣವಾದ ನಿರ್ದೇಶಕರಿಗೆ ಅವರು ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಯನ್ನು ನೀಡಿದ್ದಾರೆ. 1.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​ ಕಾರನ್ನು ನಿರ್ದೇಶಕ ರಮೇಶ್​ ವರ್ಮಾಗೆ ನಿರ್ಮಾಪಕರು ಕೊಟ್ಟಿದ್ದಾರೆ.

ನಿರ್ದೇಶಕರು ಕಾರನ್ನು ಉಡುಗೊರೆಯಾಗಿ ಪಡೆಯುತ್ತಿರುವ ಫೋಟೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ‘ಪುಷ್ಪ’ ಸಿನಿಮಾಗೆ ಸೂಪರ್​ ಹಿಟ್​ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್​ ಅವರೇ ‘ಕಿಲಾಡಿ’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ಹೈಪ್​ ಸೃಷ್ಟಿ ಆಗಿದೆ.

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಕಿಲಾಡಿ’ ಕೂಡ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳು ಧೂಳೆಬ್ಬಿಸುತ್ತಿವೆ. ಈ ಚಿತ್ರದ ‘ಫುಲ್​ ಕಿಕ್​..’ ಹಾಡು ಗಣರಾಜ್ಯೋತ್ಸವದ ಪ್ರಯುಕ್ತ ಬಿಡುಗಡೆ ಆಯಿತು. ಮೂರೇ ದಿನದಲ್ಲಿ 44 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಈ ಹಾಡಿನ ಹೆಚ್ಚುಗಾರಿಕೆ. ಇದರಿಂದ ‘ಕಿಲಾಡಿ’ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ಪ್ರತಿದಿನ ಒಂದೊಂದು ಕ್ಯಾರೆಕ್ಟರ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಲು ಚಿತ್ರತಂಡ ಪ್ಲ್ಯಾನ್​ ಹಾಕಿಕೊಂಡಿದೆ.

ಇದನ್ನೂ ಓದಿ:

ಟಾಲಿವುಡ್​ ಅಂಗಳದಲ್ಲಿ ಕಿಚ್ಚ ಸುದೀಪ್​; ಫೆಬ್ರವರಿ 4ರಂದು ರಿಲೀಸ್​ ಆಗುತ್ತಿದೆ ಸಿನಿಮಾ

ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು ಹೇಗೆ? ‘ಪುಷ್ಪ’ ಚಿತ್ರದ ಟ್ರೇಡ್​ ಸೀಕ್ರೆಟ್​ ಇಲ್ಲಿದೆ..

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ