AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ತೇಜ ಜೊತೆಗಿನ ಕಿಸ್ಸಿಂಗ್​ ದೃಶ್ಯ ವೈರಲ್​; ಮೊದಲ ಬಾರಿಗೆ ಮೌನ ಮುರಿದ ನಟಿ ಮೀನಾಕ್ಷಿ

ಕೆಲವು ನಟಿಯರು ಇಂಥ ದೃಶ್ಯದಲ್ಲಿ ನಟಿಸಲು ಹಿಂದೇಟು ಹಾಕುತ್ತಾರೆ. ಆದರೆ ಮೀನಾಕ್ಷಿ ಚೌಧರಿ ಅವರು ಲಿಪ್​ ಲಾಕ್​ ಕುರಿತು ಯಾವುದೇ ನಿರ್ಬಂಧಗಳನ್ನು ಹಾಕಿಕೊಂಡಿಲ್ಲ.

ರವಿ ತೇಜ ಜೊತೆಗಿನ ಕಿಸ್ಸಿಂಗ್​ ದೃಶ್ಯ ವೈರಲ್​; ಮೊದಲ ಬಾರಿಗೆ ಮೌನ ಮುರಿದ ನಟಿ ಮೀನಾಕ್ಷಿ
ಮೀನಾಕ್ಷಿ ಚೌಧರಿ
TV9 Web
| Edited By: |

Updated on: Feb 09, 2022 | 1:53 PM

Share

ಟಾಲಿವುಡ್​ ನಟ ರವಿ ತೇಜ (Ravi Teja) ಅಭಿನಯದ ‘ಕಿಲಾಡಿ’ (Khiladi Movie) ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಫೆ.11ರಂದು ಈ ಸಿನಿಮಾ ತೆರೆಕಾಣಲಿದೆ. ಇತ್ತೀಚೆಗೆ ರಿಲೀಸ್​ ಆಗಿರುವ ಟ್ರೇಲರ್​ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಅದಕ್ಕೂ ಮುನ್ನ ಈ ಸಿನಿಮಾದ ಒಂದು ಫೋಟೋ ಲೀಕ್​ ಆಗಿತ್ತು. ಹೀರೋಯಿನ್ ಮೀನಾಕ್ಷಿ ಚೌಧರಿ​ ಜೊತೆ ರವಿ ತೇಜ ಲಿಪ್​ ಲಾಕ್​ ಮಾಡಿರುವ ದೃಶ್ಯ ಆ ಫೋಟೋದಲ್ಲಿ ಇತ್ತು. ಟ್ರೇಲರ್​ನಲ್ಲಿ ಕೂಡ ರವಿ ತೇಜ ಮತ್ತು ಮೀನಾಕ್ಷಿ ಚೌಧರಿ (Meenakshi Chaudhary) ತುಂಬ ಇಂಟಿಮೇಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈಗತಾನೇ ಚಿತ್ರರಂಗಕ್ಕೆ ಕಾಲಿಟ್ಟಿರುವ ಮೀನಾಕ್ಷಿ ಚೌಧರಿ ಅವರು ಮುಲಾಜಿಲ್ಲದೇ ಲಿಪ್​ ಲಾಕ್​ ಮಾಡಿದ್ದಾರೆ. ಇಷ್ಟ ದಿನಗಳ ಕಾಲ ಕಿಸ್ಸಿಂಗ್​ ದೃಶ್ಯಳಿಂದ ದೂರು ಉಳಿದುಕೊಂಡಿದ್ದ ರವಿ ತೇಜ ಅವರು ‘ಕಿಲಾಡಿ’ ಸಿನಿಮಾದಲ್ಲಿ ಮಡಿವಂತಿಕೆಯನ್ನು ಬದಿಗಿಟ್ಟು ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್​​ನಲ್ಲಿ ಸಾಹಸ, ಸಂಗೀತ, ಮಾಸ್​ ಡೈಲಾಗ್​ ಎಲ್ಲವೂ ಜೋರಾಗಿದ್ದರೂ ಕೂಡ ಕಿಸ್ಸಿಂಗ್​ ಪುರಾಣವೇ ಹೆಚ್ಚು ಸುದ್ದಿ ಆಗುತ್ತಿದೆ. ಇತ್ತೀಚೆಗೆ ಈ ವಿಚಾರದ ಬಗ್ಗೆ ಮೀನಾಕ್ಷಿ ಚೌಧರಿ ಅವರು ಮಾತನಾಡಿದ್ದಾರೆ. ಲಿಪ್​ ಲಾಕ್​ ಕುರಿತು ಅವರು ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಕೆಲವು ನಟಿಯರು ಇಂಥ ದೃಶ್ಯದಲ್ಲಿ ನಟಿಸಲು ಹಿಂದೇಟು ಹಾಕುತ್ತಾರೆ. ಆದರೆ ಮೀನಾಕ್ಷಿ ಚೌಧರಿ ಅವರು ಲಿಪ್​ ಲಾಕ್​ ಕುರಿತು ಯಾವುದೇ ನಿರ್ಬಂಧಗಳನ್ನು ಹಾಕಿಕೊಂಡಿಲ್ಲ. ‘ಕಿಲಾಡಿ’ ಸಿನಿಮಾದಲ್ಲಿ ರವಿ ತೇಜ ಜೊತೆ ಅವರು ಮುಲಾಜಿಲ್ಲದೇ ಲಿಪ್​ ಲಾಕ್​ ಮಾಡಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಈ ಚಿತ್ರಕ್ಕೆ ರವಿ ತೇಜ ಹೀರೋ ಎಂಬುದು ಗೊತ್ತಾದ ತಕ್ಷಣ ನಾನು ಒಪ್ಪಿಕೊಂಡೆ. ಅವರ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತು. ಸಿನಿಮಾದಲ್ಲಿ ನನ್ನ ಪಾತ್ರ ಎಷ್ಟು ಹೊತ್ತು ಬರುತ್ತದೆ ಎಂಬುದು ಮುಖ್ಯವಲ್ಲ. ಆ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆ ಎಂಬುದೇ ನನಗೆ ಮುಖ್ಯ. ಈ ಸಿನಿಮಾದಲ್ಲಿ ಕಿಸ್ಸಿಂಗ್​ ದೃಶ್ಯ ಇರುತ್ತದೆ ಅಂತ ನಿರ್ದೇಶಕರು ನನಗೆ ಮಾಹಿತಿ ನೀಡಿದ್ದರು. ಕಮರ್ಷಿಯಲ್​ ಸಿನಿಮಾದಲ್ಲಿ ಇಂಥದ್ದೆಲ್ಲ ಇದ್ದೇ ಇರುತ್ತದೆ. ಲಿಪ್​ ಲಾಕ್​ ದೃಶ್ಯಗಳಲ್ಲಿ ನಟಿಸಲು ನನಗೆ ಯಾವುದೇ ಅಭ್ಯಂತರ ಇಲ್ಲ’ ಎಂದು ಮೀನಾಕ್ಷಿ ಚೌಧರಿ ಹೇಳಿದ್ದಾರೆ.

ತೆಲುಗಿನಲ್ಲಿ ತಯಾರಾಗಿರುವ ‘ಕಿಲಾಡಿ’ ಸಿನಿಮಾ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಲಿದೆ. ಚಿತ್ರದ ವಿತರಣೆ ಹಕ್ಕುಗಳು ಭಾರಿ ಮೊತ್ತಕ್ಕೆ ಸೇಲ್​ ಆಗಿವೆ. ಒಟಿಟಿ, ಕಿರುತೆರೆ ಪ್ರಸಾರದ ಹಕ್ಕುಗಳ ವಿಚಾರದಲ್ಲಿಯೂ ದೊಡ್ಡ ಆಫರ್​ ಬಂದಿದೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾದ ರಿಲೀಸ್​ಗೂ ಮುನ್ನವೇ ನಿರ್ಮಾಪಕರು ಲಾಭದಲ್ಲಿದ್ದಾರೆ. ಇದಕ್ಕೆ ಕಾರಣವಾದ ನಿರ್ದೇಶಕರಿಗೆ ಅವರು ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಯನ್ನು ನೀಡಿದ್ದಾರೆ. 1.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​ ಕಾರನ್ನು ನಿರ್ದೇಶಕ ರಮೇಶ್​ ವರ್ಮಾಗೆ ನಿರ್ಮಾಪಕರು ಕೊಟ್ಟಿದ್ದಾರೆ.

ಇದನ್ನೂ ಓದಿ:

‘ನಟ ಸಾರ್ವಭೌಮ’ ಸಿನಿಮಾ ನಟಿಯ ಲಿಪ್​ ಕಿಸ್​ ಪುರಾಣ; ಸಖತ್ ಟ್ರೋಲ್​ ಆಗುತ್ತಿರುವ ಅನುಪಮಾ

ನಾಗ ಚೈತನ್ಯ ಜತೆ ಸಾಯಿ ಪಲ್ಲವಿ ಲಿಪ್​ ಲಾಕ್​ ಮಾಡಿದ್ದು ನಿಜವೇ? ‘ಲವ್​ ಸ್ಟೋರಿ’ ಹಿಂದಿನ ಸತ್ಯ ಬಾಯ್ಬಿಟ್ಟ ನಟಿ

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ