AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಟೈಗರ್ ನಾಗೇಶ್ವರ್ ರಾವ್’ ಟೀಸರ್ ರಿಲೀಸ್, ಮಾಸ್ ಅವತಾರದಲ್ಲಿ ದರ್ಶನ ಕೊಟ್ಟ ರವಿತೇಜ

Ravi Teja: ಮಾಸ್ ಮಹಾರಾಜ ರವಿತೇಜ ನಟಿಸಿರುವ 'ಟೈಗರ್ ನಾಗೇಶ್ವರ ರಾವ್' ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಕುಖ್ಯಾತ ಕಳ್ಳನ ಪಾತ್ರದಲ್ಲಿ ರವಿತೇಜ ನಟಿಸಿದ್ದಾರೆ.

’ಟೈಗರ್ ನಾಗೇಶ್ವರ್ ರಾವ್’ ಟೀಸರ್ ರಿಲೀಸ್, ಮಾಸ್ ಅವತಾರದಲ್ಲಿ ದರ್ಶನ ಕೊಟ್ಟ ರವಿತೇಜ
ಟೈಗರ್ ನಾಗೇಶ್ವರ ರಾವ್
ಮಂಜುನಾಥ ಸಿ.
|

Updated on: Aug 19, 2023 | 7:58 PM

Share

ಮಾಸ್ ಮಹಾರಾಜ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟ ರವಿತೇಜ (Ravi Teja) ಹೊಸದೊಂದು ಮಾಸ್ ಆಕ್ಷನ್ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ರವಿತೇಜ ನಟನೆಯ ‘ಟೈಗರ್ ನಾಗೇಶ್ವರ್ ರಾವ್’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ಸಖತ್ ಮಾಸ್ ಅವತಾರದಲ್ಲಿ ರವಿತೇಜ ಕಾಣಿಸಿಕೊಂಡಿದ್ದಾರೆ. ಇದೀಗ ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿದೆ.

ಟೈಗರ್ ಇನ್ವೆಷನ್ ಎಂಬ ಹೆಸರಿನೊಂದಿಗೆ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಮದ್ರಾಸ್ ಸೆಂಟರ್ ಜೈಲಿನಿಂದ ಎಸ್ಕೇಪ್ ಆಗಿರುವ ಸ್ಟುವರ್ಟ್ ಪುರಂ ಕಳ್ಳನಿಗಾಗಿ ಹುಡುಗಾಟ ನಡೆಸುತ್ತಿರುವ ದೃಶ್ಯಗಳ ಮೂಲಕ ಟೀಸರ್ ಪ್ರಾರಂಭವಾಗುತ್ತದೆ. ಗುಪ್ತಚಾರ ಇಲಾಖೆಯ ಅಧಿಕಾರಿಗಳಾಗಿ ಮುರಳಿ ಶರ್ಮಾ ಹಾಗೂ ಅನುಪಮ್ ಖೇರ್ ನಟಿಸಿದ್ದಾರೆ. ಅವರು ನಾಗೇಶ್ವರ್ ರಾವ್ ಎಂಬಾತನಿಗಾಗಿ ಹುಡುಕಾಟ ನಡೆಸುತ್ತಿದ್ದು ಆತ ಕಳ್ಳ ಯಾಕೆ ಆಗುತ್ತಾನೆ ಎನ್ನುವುದನ್ನು ಮುರಳಿ ಶರ್ಮಾ ಪಾತ್ರ ವಿವರಿಸುವ ಸನ್ನಿವೇಶ ಟೀಸರ್​ನಲ್ಲಿದೆ. ಸಖತ್ ಮಾಸ್ ಅವತಾರದಲ್ಲಿ ನಟ ರವಿತೇಜ ಟೀಸರ್​ನಲ್ಲಿ ದರ್ಶನ ಕೊಟ್ಟಿದ್ದಾರೆ. ರವಿತೇಜರ ಈ ಹಿಂದಿನ ಚಿತ್ರಗಳಿಂತ ಈ ಸಿನಿಮಾದಲ್ಲಿ ಮಾಸ್ ಮಹಾರಾಜ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಟೀಸರ್​ನಲ್ಲಿ ಕೆಲವು ಸಖತ್ ಮಾಸ್ ದೃಶ್ಯಗಳಿವೆ, ಟೈಗರ್ ನಾಗೇಶ್ವರ್ ರಾವ್ ವ್ಯಕ್ತಿತ್ವ ಬಣ್ಣಿಸುವ ಪವರ್​ಫುಲ್ ಡೈಲಾಗ್​ಗಳು ಇವೆ. ಈ ಸಿನಿಮಾ ಭರ್ಜರಿ ಆಕ್ಷನ್ ಎಂಟರ್ಟೈನರ್ ಆಗಲಿದೆ ಎಂಬ ಸುಳಿವನ್ನು ಟೀಸರ್ ನೀಡಿದೆ. ಟೀಸರ್​ನಲ್ಲಿ ಹೀರೋಯಿನ್​ಗಳನ್ನು ತೋರಿಸಲಾಗಿಲ್ಲ, ಬದಲಿಗೆ ಇಡೀ ಟೀಸರ್ ರವಿತೇಜ ಅವರಿಗಾಗಿ ಮೀಸಲಿಡಲಾಗಿದೆ. ರವಿತೇಜ ಹೊರತಾಗಿ ಮುರಳಿ ಶರ್ಮಾ ಹಾಗೂ ಅನುಪಮ್ ಖೇರ್ ಮಾತ್ರವೇ ಟೀಸರ್​ನಲ್ಲಿ ಕಾಣುತ್ತಾರೆ.

ಇದನ್ನೂ ಓದಿ:ನಟ ರವಿತೇಜಗೆ ಸಾಥ್ ಕೊಟ್ಟ ಶಿವರಾಜ್​ಕುಮಾರ್; ತೆಲುಗು ಚಿತ್ರಕ್ಕೆ ಶಿವಣ್ಣನ ಧ್ವನಿ

70ರ ದಶಕದಲ್ಲಿ ನಡೆವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಹೈದ್ರಾಬಾದ್ ನ ಸ್ಟುವರ್ಟ್ ಪುರಂ ಹೆಸರಿನ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದೆ. ಈ ಸಿನಿಮಾಕ್ಕಾಗಿ ನಟ ರವಿತೇಜ ತಮ್ಮ ಗೆಟಪ್, ದೇಹ ಭಾಷೆಯನ್ನು ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಮಾಡಿದ್ದಾರೆ.

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಸಿನಿಮಾ ಬಿಡುಗಡೆ ಆಗಲಿದೆ, ಅಂದರೆ ಅಕ್ಟೋಬರ್ 20ರಂದು ವಿಶ್ವಾದ್ಯಂತ ರವಿತೇಜ ನಟನೆಯ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ