AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಆರ್​ಸಿಬಿಯ ಕೆಟ್ಟ ನಿರ್ಧಾರ’: ರಶ್ಮಿಕಾ ಸಹಯೋಗಕ್ಕೆ ಫ್ಯಾನ್ಸ್​ ಗರಂ

ನಟಿ ರಶ್ಮಿಕಾ ಮಂದಣ್ಣ ಜೊತೆ ಆರ್​ಸಿಬಿ ಮ್ಯಾನೇಜ್​ಮೆಂಟ್​ ಕೈ ಜೋಡಿಸಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಹೊಸ ಪ್ರೋಮೋದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅದನ್ನು ಕಂಡು ಆರ್​ಸಿಬಿ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಸಾವಿರಾರು ಕಮೆಂಟ್​ಗಳ ಮೂಲಕ ಫ್ಯಾನ್ಸ್​ ತಕರಾರು ತೆಗೆದಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಇದು ಆರ್​ಸಿಬಿಯ ಕೆಟ್ಟ ನಿರ್ಧಾರ’: ರಶ್ಮಿಕಾ ಸಹಯೋಗಕ್ಕೆ ಫ್ಯಾನ್ಸ್​ ಗರಂ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Mar 18, 2024 | 8:14 PM

Share

ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (Royal Challengers Bangalore) ತಂಡ ಕಪ್​ ಗೆದ್ದಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಗೆಲುವಿನ ಸಂಭ್ರಮಾಚರಣೆ ನಡೆಯುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ಆರ್​ಸಿಬಿ ಅಭಿಮಾನಿಗಳು ಗರಂ ಆಗಿದ್ದಾರೆ. ಅದಕ್ಕೆ ಕಾರಣ ಆಗಿರುವುದು ನಟಿ ರಶ್ಮಿಕಾ ಮಂದಣ್ಣ! ಅರೆ, ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೂ ಆರ್​ಸಿಬಿ ತಂಡಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಮೂಡುವುದು ಸಹಜ. ವಿಷಯ ಏನೆಂದರೆ, ಐಪಿಎಲ್​ ಆರಂಭಕ್ಕೂ ಮುನ್ನ ಅನೇಕ ಸೆಲೆಬ್ರಿಟಿಗಳ ಜೊತೆ ಆರ್​ಸಿಬಿ ಸಹಯೋಗ ಮಾಡಿಕೊಂಡಿದೆ. ರಶ್ಮಿಕಾ ಮಂದಣ್ಣ ಜೊತೆ ಆರ್​​ಸಿಬಿ (RCB) ಮ್ಯಾನೇಜ್​ಮೆಂಟ್​ ಕೈ ಜೋಡಿಸಿರುವುದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ. ‘ಇದು ಆರ್​ಸಿಬಿ ತೆಗೆದುಕೊಂಡ ಅತಿ ಕೆಟ್ಟ ನಿರ್ಧಾರ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ.

ಈಗಾಗಲೇ ಶಿವರಾಜ್​ಕುಮಾರ್​, ರಿಷಬ್​ ಶೆಟ್ಟಿ, ಕಿಚ್ಚ ಸುದೀಪ್​ ಮುಂತಾದ ಸೆಲೆಬ್ರಿಟಿಗಳು ಆರ್​ಸಿಬಿ ಅನ್​ಬಾಕ್ಸ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಸ್ಟಾರ್​ ಕಲಾವಿದರು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಟೀಮ್​ ಜೊತೆ ಕೈ ಜೋಡಿಸಿದ್ದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಸ್ಟಾರ್​ಗಳ ಪ್ರೋಮೋಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ರಶ್ಮಿಕಾ ಮಂದಣ್ಣ ಅವರನ್ನು ಅನ್​ಬಾಕ್ಸ್​ ವಿಡಿಯೋದಲ್ಲಿ ನೋಡಿದ ಆರ್​ಸಿಬಿ ಫ್ಯಾನ್ಸ್​ಗೆ ನಿರಾಸೆ ಆಗಿದೆ.

ಆರ್​ಸಿಬಿ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ನಾವು ಈ ಸಹಯೋಗವನ್ನು ನಿರೀಕ್ಷಿಸಿರಲಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ನಿಯತ್ತಾದ ಫ್ರಾಂಚೈಸ್​ಗೆ ನಿಯತ್ತಿಲ್ಲದ ವ್ಯಕ್ತಿಗಳ ಸಹಯೋಗ ಬೇಡ’ ಎಂಬ ಕಮೆಂಟ್​ ಕೂಡ ಬಂದಿದೆ. ‘ಕರ್ನಾಟಕಕ್ಕೆ ರಶ್ಮಿಕಾ ಮಂದಣ್ಣ ಬೇಡ. ಸ್ಮೃತಿ ಮಂಧಾನ ಬೇಕು’ ಎಂದು ಕೂಡ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ‘ಅಷ್ಟು ಸಿಹಿ ಮನುಷ್ಯರ ಮಧ್ಯೆ ಈ ಕಹಿ ಯಾಕೆ’ ಎಂದು ಟ್ರೋಲ್​ ಪೇಜ್​ನವರು ಖಾರವಾಗಿ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಜಪಾನ್​ನಲ್ಲೂ ಸೃಷ್ಟಿಯಾಗಿದೆ ರಶ್ಮಿಕಾ ಮಂದಣ್ಣ ಅಭಿಮಾನಿ ಬಳಗ

ರಶ್ಮಿಕಾ ಮಂದಣ್ಣ ಅವರು ಕನ್ನಡದವರು. ಅವರಿಗೆ ಖ್ಯಾತಿ ಸಿಕ್ಕಿದ್ದು ಕನ್ನಡದ ‘ಕಿರಿಕ್​ ಪಾರ್ಟಿ’ ಸಿನಿಮಾದಿಂದ. ಆ ಚಿತ್ರದಲ್ಲಿ ನಟಿಸಿದ ಬಳಿಕ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಪ್ರೀತಿ ಚಿಗುರಿತ್ತು. ನಂತರ ಅವರಿಬ್ಬರು ಎಂಗೇಜ್​ಮೆಂಟ್​ ಮಾಡಿಕೊಂಡರು. ಆದರೆ ಕೆಲವೇ ದಿನಗಳಲ್ಲಿ ಅವರಿಬ್ಬರ ಸಂಬಂಧ ಮುರಿದುಬಿತ್ತು. ಆ ಘಟನೆ ನಡೆದ ಬಳಿಕ ಕನ್ನಡಿಗರು ರಶ್ಮಿಕಾ ಅವರನ್ನು ಕಂಡರೆ ಕಿಡಿಕಾರಲು ಆರಂಭಿಸಿದರು. ಆ ಸಮಯಕ್ಕೆ ಸರಿಯಾಗಿ ರಶ್ಮಿಕಾ ಅವರಿಗೆ ಪರಭಾಷೆಯಲ್ಲಿ ಅವಕಾಶಗಳು ಹೆಚ್ಚಿದವು. ಕನ್ನಡದಲ್ಲಿ ಅವರು ನಟಿಸುವುದು ಕಡಿಮೆ ಆಯಿತು. ಈಗ ಅವರ ಜೊತೆ ಕೈ ಜೋಡಿಸಿದ ಆರ್​ಸಿಬಿ ಮ್ಯಾನೇಜ್​ಮೆಂಟ್​ ವಿರುದ್ಧ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’