‘ಕೆರೆಬೇಟೆ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಮಾಡಿದ ಉಪೇಂದ್ರ

‘ಮಲೆನಾಡ ಗೊಂಬೆ..' ಎಂಬ ಸಾಹಿತ್ಯದೊಂದಿಗೆ ‘ಕೆರೆಬೇಟೆ' ಚಿತ್ರದ ಮೊದಲ ಹಾಡು ಮೂಡಿ ಬಂದಿದೆ. ಈ ಹಾಡನ್ನು ಉಪೇಂದ್ರ ಅವರು ಇಷ್ಟಪಟ್ಟು ರಿಲೀಸ್ ಮಾಡಿದ್ದಾರೆ. ಹಾಡಿನ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಹೆಸರಿಗೆ ತಕ್ಕಂತೆ ಮಲೆನಾಡು ಭಾಗದಲ್ಲೇ ಸಿನಿಮಾ ಹಾಡಿನ ಚಿತ್ರೀಕರಣ ಮಾಡಲಾಗಿದೆ.

‘ಕೆರೆಬೇಟೆ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಮಾಡಿದ ಉಪೇಂದ್ರ
ಕೆರೆಬೇಟೆ ತಂಡ
Follow us
|

Updated on: Feb 03, 2024 | 2:35 PM

ಶೀರ್ಷಿಕೆ ಕಾರಣದಿಂದಲೇ ‘ಕೆರೆಬೇಟೆ’ ಸಿನಿಮಾ (Kerebete Movie) ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳ ಬೆಂಬಲ ಕೂಡ ಸಿಗುತ್ತಿದೆ. ಇದು ತಂಡದ ಬಲ ಹೆಚ್ಚಿಸಿದೆ. ಇತ್ತೀಚೆಗೆ ಸಿನಿಮಾದಿಂದ ಟೀಸರ್ ರಿಲೀಸ್ ಮಾಡಲಾಗಿತ್ತು. ಈಗ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಇದನ್ನು ಅನಾವರಣ ಮಾಡಿದ್ದು ನಟ ಉಪೇಂದ್ರ. ಅವರು ತಂಡಕ್ಕೆ ಶುಭ ಹಾರೈಸಿದ್ದಾರೆ.

‘ಮಲೆನಾಡ ಗೊಂಬೆ..’ ಎಂಬ ಸಾಹಿತ್ಯದೊಂದಿಗೆ ‘ಕೆರೆಬೇಟೆ’ ಚಿತ್ರದ ಮೊದಲ ಹಾಡು ಮೂಡಿ ಬಂದಿದೆ. ಈ ಹಾಡನ್ನು ಉಪೇಂದ್ರ ಅವರು ಇಷ್ಟಪಟ್ಟು ರಿಲೀಸ್ ಮಾಡಿದ್ದಾರೆ. ಹಾಡಿನ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಹೆಸರಿಗೆ ತಕ್ಕಂತೆ ಮಲೆನಾಡು ಭಾಗದಲ್ಲೇ ಸಿನಿಮಾ ಹಾಡಿನ ಚಿತ್ರೀಕರಣ ಮಾಡಲಾಗಿದೆ.

‘ಕೆರೆಬೇಟೆ’ ಚಿತ್ರಕ್ಕೆ ರಾಜ್ ಗುರು ನಿರ್ದೇಶನ ಮಾಡಿದ್ದಾರೆ. ನಾಯಕ ಗೌರಿಶಂಕರ್ ಹಾಗೂ ನಟಿ ಬಿಂದು ಶಿವರಾಮ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಚಿತ್ರದಲ್ಲಿ ಬರೋ ರೋಮ್ಯಾಂಟಿಕ್ ಹಾಡು ಇದು. ಈ ಹಾಡಿಗೆ ಸಾಹಿತ್ಯ ಬರೆದಿದ್ದು ಪ್ರಮೋದ್ ಮರವಂತೆ. ‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ…’ ಹಾಡನ್ನು ಇವರೇ ಬರೆದಿದ್ದರು. ಅವರ ಸಾಹಿತ್ಯದಲ್ಲಿ ಈಗ ‘ಮಲೆನಾಡ ಗೊಂಬೆ..’ ಹಾಡು ಮೂಡಿಬಂದಿದೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈ ಹಾಡಿಗೆ ಐಶ್ವರ್ಯ ರಂಗರಾಜನ್ ಹಾಗೂ ಸಾಯಿ ವಿಘ್ನೇಶ್ ಧ್ವನಿ ಆಗಿದ್ದಾರೆ.

ಈ ಹಾಡನ್ನು ತಂಡ ಸಾಕಷ್ಟು ಕಷ್ಟಪಟ್ಟು ಶೂಟ್ ಮಾಡಿದೆಯಂತೆ. ಅತಿಯಾದ ಮಳೆಯಿಂದ ಅನೇಕ ಬಾರಿ ಶೂಟಿಂಗ್ ನಿಲ್ಲಿಸಲಾಗಿತ್ತು. ಜನರ ಸುಳಿವೇ ಇಲ್ಲದ ಜಾಗದಲ್ಲಿ ಹಾಡಿನ ಶೂಟಿಂಗ್ ಮಾಡಲಾಗಿತ್ತು. ನಾಲ್ಕು ದಿನಗಳ ಕಾಲ ಈ ಹಾಡಿನ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ: ವಿಶೇಷವಾಗಿ ಬಿಡುಗಡೆ ಆಯ್ತು ‘ಕೆರೆಬೇಟೆ’ ಟೀಸರ್​; ಸಾಥ್​ ನೀಡಿದ ಡಾಲಿ, ದಿನಕರ್​ ತೂಗುದೀಪ

‘ಕೆರೆಬೇಟೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮಾರ್ಚ್ 15ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಮಲೆನಾಡಿನಲ್ಲಿರುವ ಮೀನು ಬೇಟೆಯ ಸಂಸ್ಕೃತಿ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ಬಗ್ಗೆ ಜನರಲ್ಲಿ ನಿರೀಕ್ಷೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​