AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿಶ್ವಕಪ್ ಗೆದ್ದರೆ ಬೀಚ್​ನಲ್ಲಿ ಬೆತ್ತಲಾಗಿ ಓಡುವೆ: ತೆಲುಗು ನಟಿ

Rekha Boj: ಭಾರತ ವಿಶ್ವಕಪ್ ಗೆದ್ದರೆ ವಿಶಾಖಪಟ್ಟಣ ಬೀಚ್​ನಲ್ಲಿ ಬೆತ್ತಲಾಗಿ ಓಡುವೆ ಎಂದು ತೆಲುಗು ನಟಿಯೊಬ್ಬರು ಘೋಷಿಸಿದ್ದಾರೆ.

ಭಾರತ ವಿಶ್ವಕಪ್ ಗೆದ್ದರೆ ಬೀಚ್​ನಲ್ಲಿ ಬೆತ್ತಲಾಗಿ ಓಡುವೆ: ತೆಲುಗು ನಟಿ
ಮಂಜುನಾಥ ಸಿ.
|

Updated on: Nov 15, 2023 | 6:22 PM

Share

ಭಾರತ ವಿಶ್ವಕಪ್ (Wrold Cup 2023) ಗೆಲ್ಲುವ ಹಾದಿಯಲ್ಲಿದೆ. ಸೆಮಿಫೈನಲ್ ಪಂದ್ಯದಲ್ಲಿ ದೊಡ್ಡ ಗುರಿಯನ್ನೇ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ನೀಡಿದೆ. ಈ ಬಾರಿ ಭಾರತ ವಿಶ್ವಕಪ್ ಗೆಲ್ಲುವುದು ಪಕ್ಕಾ ಎಂದು ಹಲವು ಕ್ರಿಕೆಟ್ ವಿಶ್ಲೇಷಕರು ಈಗಾಗಲೇ ಅಭಿಪ್ರಾಯ ತಿಳಿಸಿದ್ದಾರೆ. ಈ ನಡುವೆ ತೆಲುಗು ನಟಿಯೊಬ್ಬಾಕೆ ಭಾರತ ವಿಶ್ವಕಪ್ ಗೆದ್ದರೆ ತಾವು ಬೆತ್ತಲಾಗಿ ವಿಶಾಖಪಟ್ಟಣದ ಬೀಚ್​ನಲ್ಲಿ ಓಡಾಡುವುದಾಗಿ ಹೇಳಿದ್ದಾರೆ.

ನಂತರ ಮತ್ತೊಂದು ಫೊಸ್ಟ್​ನಲ್ಲಿ ”ಧರ್ಮದ ಕಾರಣಕ್ಕೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಗೆಲ್ಲಲಿ ಎಂದು ಕೋರಿಕೊಳ್ಳುತ್ತಿದ್ದವರು ಸಹ ಈಗ ನನ್ನ ಘೋಷಣೆ ನಂತರ ಭಾರತ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ” ಎಂದಿದ್ದಾರೆ.

ವಿಶ್ವಕಪ್ ಗೆದ್ದರೆ ಬೆತ್ತಲಾಗುತ್ತೇನೆ ಎಂದು ನಟಿಯರು ಹೇಳುವುದು ಇದು ಹೊಸತೇನೂ ಅಲ್ಲ. ಗ್ಲಾಮರಸ್ ಪಾತ್ರಗಳ ಮೂಲಕವೇ ಜನಪ್ರಿಯತೆ ಗಳಿಸಿರುವ ನಟಿ ಪೂನಂ ಪಾಂಡೆ ಮೊದಲ ಬಾರಿ ಹೀಗೊಂದು ಹೇಳಿಕೆ ನೀಡಿದ್ದರು. ಭಾರತ 2013ರ ವಿಶ್ವಕಪ್ ಆಡುವ ಸಮಯದಲ್ಲಿ, ‘ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುವೆ’ ಎಂದು ಹೇಳಿಕೆ ನೀಡಿದ್ದರು. ಪೂನಂರ ಈ ಹೇಳಿಗೆ ತೀವ್ರ ವಿರೋಧ ಆಗ ವ್ಯಕ್ತವಾಗಿತ್ತು.

ಇದನ್ನೂ ಓದಿ:ಬಹುತೇಕ ಬೆತ್ತಲೆಯಾಗಿ ಬಂದು ಒಂದೇ ಕೈಯಲ್ಲಿ ಮಾನ ಮುಚ್ಚಿಕೊಂಡ ನಟಿ ಉರ್ಫಿ ಜಾವೇದ್​

ಈಗ ತೆಲುಗು ನಟಿ ರೇಖಾ ಬೋಜ್ ಅವರು, ಈ ಬಾರಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಟಿಯ ಪೋಸ್ಟ್​ಗೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಹಲವರು ಪೋಸ್ಟ್ ಅನ್ನು ಖಂಡಿಸಿದ್ದಾರೆ. ಇನ್ನು ಕೆಲವರು ಫೈನಲ್ ಪಂದ್ಯವನ್ನು ವೈಜಾಗ್​ ಬೀಚ್​ನಲ್ಲಿಯೇ ನಿಂತು ವೀಕ್ಷಿಸುತ್ತೇವೆ ಎಂದು ಕೀಟಲೆ ಮಾಡಿದ್ದಾರೆ.

ರೇಖಾ ಬೋಜ್, ತೆಲುಗಿನ ನಟಿ. ಮಾಂಗಲ್ಯಂ’, ‘ಸ್ವಾತಿ ಚಿನುಕು’, ‘ರಂಗೀಲಾ’, ‘ಕಾಲಾಯ ತಸ್ಮಾಯ ನಾಮಃ’ ಸೇರಿದಂತೆ ತೆಲುಗಿನ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹೆಚ್ಚಿನ ಅವಕಾಶಗಳು ಸಿಗದೇ ರೋಸಿ ಹೋದಂತಾಗಿರುವ ರೇಖಾ, ಆಗಾಗ್ಗೆ ವಿವಾದಾತ್ಮಕ ಹೇಳಿಕೆಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ