AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವಿವಾಹ ಆದ ಕಿರುತೆರೆ ನಟಿಗೆ ಕಿರುಕುಳ; ಬೇಸತ್ತು ಮಾಡಿದ್ದೇನು ನೋಡಿ

ಮಲಯಾಳಂ ನಟಿ ರೇಖಾ ರತೀಶ್ ಯೂಟ್ಯೂಬರ್‌ಗಳಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದಾರೆ. ಮಾನಸಿಕ ಹಿಂಸೆಯಿಂದ ನೊಂದಿರುವ ಅವರು, ಕೆಲಸ ಕಳೆದುಕೊಂಡು ಮಗುವನ್ನು ನೋಡಿಕೊಳ್ಳಲು ಕಷ್ಟಪಡುತ್ತಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಕಣ್ಣೀರು ಹಾಕಿ, ಈ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ನಾಲ್ಕು ವಿವಾಹ ಆದ ಕಿರುತೆರೆ ನಟಿಗೆ ಕಿರುಕುಳ; ಬೇಸತ್ತು ಮಾಡಿದ್ದೇನು ನೋಡಿ
ರೇಖಾ ರತೀಶ್
ರಾಜೇಶ್ ದುಗ್ಗುಮನೆ
|

Updated on: Feb 17, 2026 | 7:37 AM

Share

ಮಲಯಾಳಂ ಕಿರುತೆರೆ ನಟಿ ರೇಖಾ ರತೀಶ್ (Rekha Rateesh) ಅವರು ಈಗ ಕಣ್ಣೀರು ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರೋ ಅವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇಷ್ಟೇ ಅಲ್ಲ, ತಮ್ಮ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಳಿ ಅವರು ಕೇಳಿಕೊಂಡಿದ್ದಾರೆ. ಯೂಟ್ಯೂಬರ್​​ಗಳಿಂದ ಕಿರುಕುಳ ಆಗುತ್ತಿದೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ಸದ್ಯ ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ.

‘ಕೇರಳ ಸರ್ಕಾರ ಮತ್ತು ಪಿಣರಾಯ್ ವಿಜಯನ್ ಅವರಲ್ಲಿ ನನ್ನ ಕೋರಿಕೆ. ನಾನು ರೇಖಾ ರತೀಶ್. ವೃತ್ತಿಯಲ್ಲಿ ನಾನು ನಟಿ. ಕಳೆದ 7-8 ತಿಂಗಳಿಂದ ನನಗೆ ಕೆಲಸ ಇಲ್ಲ. ಕಳೆದ 2-3 ತಿಂಗಳಿಂದ ಯೂಟ್ಯೂಬರ್​ಗಳು ನನ್ನ ಬಗ್ಗೆ ತಪ್ಪು ತಪ್ಪಾಗಿ ಥಂಬ್​ನೇಲ್ ಹಾಕಿ ವಿಡಿಯೋ ಮಾಡುತ್ತಿದ್ದಾರೆ. ಸಾಮಾನ್ಯರಂತೆ ಬದುಕಲು ಅವರು ನನಗೆ ಬಿಡುತ್ತಲೇ ಇಲ್ಲ. ನಾನು ನನ್ನ ಮಗುವನ್ನು ನೋಡಿಕೊಳ್ಳಬೇಕು. ಆದರೆ, ನನಗೆ ಸಾಕಷ್ಟು ಮಾನಸಿಕ ಕಿರುಕುಳ ಎದುರಾಗುತ್ತಿದೆ. ಇನ್ನು ಇದನ್ನು ಸಹಿಸಲು ಸಾಧ್ಯವಿಲ್ಲ ’ ಎಂದು ಅವರು ಹೇಳಿದ್ದಾರೆ.

‘ಈ ರೀತಿಯ ಯೂಟ್ಯೂಬರ್​​ಗಳಿಂದ ಇಂಡಸ್ಟ್ರಿಯ ಅನೇಕರು ಜೀವ ಕಳೆದುಕೊಂಡಿದ್ದಾರೆ. ನನಗೆ ಏನಾದರೂ ಆಯಿತು ಎಂದರೆ ಅದಕ್ಕೆ ಕಾರಣ ಯಾರು ಎಂಬುದು ಎಲ್ಲರಿಗೂ ತಿಳಿಯಬೇಕು.ತಪ್ಪು ಕೆಲಸ ಮಾಡುತ್ತಿರುವ ಯೂಟ್ಯೂಬರ್​​ಗಳ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ಸದ್ದಿಲ್ಲದೆ ಮದುವೆ ಆದ ಕಿರುತೆರೆ ನಟಿ ಗೀತಾ ಭಾರತಿ ಭಟ್; ಫೋಟೋ ನೋಡಿ

ರೇಖಾ ಅವರು ಈಗಾಗಲೇ ನಾಲ್ಕು ಬಾರಿ ಮದುವೆ ಆಗಿದ್ದರು. ಯಾವ ಸಂಬಂಧವೂ ಉಳಿದುಕೊಂಡಿಲ್ಲ. 2000ನೇ ಇಸ್ವಿಯಲ್ಲಿ ಯೂಸುಫ್ ಎಂಬುವವರನ್ನು ಮದುವೆ ಆದರು. ಒಂದೇ ವರ್ಷದಲ್ಲಿ ಇವರು ಬೇರೆ ಆದರು 2001-10ವರೆಗೆ ನಿರ್ಮಲ್ ಪ್ರಕಾಶ್ ಜೊತೆ ಜೀವನ ನಡೆಸಿದರು. 2012-17ರವರೆಗೆ ಕಮಲ್ ರಾಯ್ ಹಾಗೂ 2019-20ರ ಅವಧಿಯಲ್ಲಿ ಅಭಿಲಾಶ್ ಜೊತೆ ಅವರು ವಿವಾಹ ಆದರು. ನಟಿಗೆ ಆರ್ಯನ್ ಹೆಸರಿನ ಮಗ ಇದ್ದಾನೆ. 2011ರಲ್ಲಿ ಈತ ಜನಿಸಿದ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ
ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು