AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’ ಹೊಸ ಪೋಸ್ಟರ್‌ನಲ್ಲಿ ಕಾಣಿಸಿಲ್ಲ ರಿಲೀಸ್ ದಿನಾಂಕ: ರಾಮ್ ಚರಣ್ ಫ್ಯಾನ್ಸ್ಗೆ ಚಿಂತೆ

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದೆ. ಆದರೆ ಈಗ ಬಿಡುಗಡೆ ಆದ ಪೋಸ್ಟರ್​ನಲ್ಲಿ ರಿಲೀಸ್ ದಿನಾಂಕ ಕಾಣಿಸುತ್ತಿಲ್ಲ. ಇದರಿಂದ ಅಭಿಮಾನಿಗಳಿಗೆ ಸಜಹವಾಗಿಯೇ ಗೊಂದಲ ಉಂಟಾಗಿದೆ. ಬಿಡುಗಡೆ ದಿನಾಂಕ ಮುಂದೂಡಿಕೆ ಆಗಬಹುದು ಎಂಬ ಅಂತೆ-ಕಂತೆಗಳು ಕೂಡ ಕೇಳಿಬರುತ್ತಿವೆ.

‘ಪೆದ್ದಿ’ ಹೊಸ ಪೋಸ್ಟರ್‌ನಲ್ಲಿ ಕಾಣಿಸಿಲ್ಲ ರಿಲೀಸ್ ದಿನಾಂಕ: ರಾಮ್ ಚರಣ್ ಫ್ಯಾನ್ಸ್ಗೆ ಚಿಂತೆ
Ram Charan
ಮದನ್​ ಕುಮಾರ್​
|

Updated on: Apr 02, 2026 | 3:48 PM

Share

ಟಾಲಿವುಡ್‌ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಪೆದ್ದಿ’ (Peddi) ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಚರ್ಚೆ ನಡೆಯುತ್ತಿದೆ. ಚಿತ್ರದ ಬಿಡುಗಡೆ ವಿಳಂಬವಾಗಲಿದೆ ಎಂಬ ಗಾಳಿಸುದ್ದಿಗಳು ಹಬ್ಬಿವೆ. ಇವುಗಳ ನಡುವೆ ಚಿತ್ರತಂಡ ಹನುಮ ಜಯಂತಿಯ ಅಂಗವಾಗಿ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್​ನಲ್ಲಿ ರಾಮ್ ಚರಣ್ (Ram Charan) ಅವರ ಲುಕ್ ಗಮನ ಸೆಳೆದಿದೆ. ಆದರೆ ರಿಲೀಸ್ ಡೇಟ್ (Peddi Release Date) ಬಗ್ಗೆ ಪ್ರಸ್ತಾಪ ಇಲ್ಲ! ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣ ಆಗಿದೆ.

ಇತ್ತೀಚೆಗೆ ಬಿಡುಗಡೆಯಾದ ‘ಪೆದ್ದಿ ಪೈಲ್ವಾನ್’ ಗ್ಲಿಂಪ್ಸ್‌ನಿಂದ ಸಿದ್ಧಪಡಿಸಲಾದ ಈ ಪೋಸ್ಟರ್‌ನಲ್ಲಿ ರಾಮ್ ಚರಣ್ ಅತ್ಯಂತ ಪವರ್​ಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಬಲಿಷ್ಠ ಮೈಕಟ್ಟು ಮತ್ತು ಗಂಭೀರ ನೋಟವು ಹನುಮಂತನ ಶೌರ್ಯವನ್ನು ನೆನಪಿಸುವಂತಿದೆ. ಈ ಲುಕ್ ಕಂಡ ಅಭಿಮಾನಿಗಳು ‘ಇದು ಪಕ್ಕಾ ಮಾಸ್ ಸಿನಿಮಾ’ ಎಂದು ಜೈಕಾರ ಹಾಕುತ್ತಿದ್ದಾರೆ.

ಸಿನಿಮಾ ಮುಂದೂಡಿಕೆಯಾಗಬಹುದು ಎಂಬ ಆತಂಕ ಅಭಿಮಾನಿಗಳಿಗೆ ಇದೆ. ಆದರೆ ರಾಮ್ ಚರಣ್ ಅವರೇ ಸ್ಪಷ್ಟಪಡಿಸಿರುವಂತೆ, ಸಿನಿಮಾ ನಿಗದಿತ ಸಮಯಕ್ಕೇ ಅಂದರೆ ಏಪ್ರಿಲ್ 30ರಂದು ತೆರೆಗೆ ಬರಲಿದೆ. ಆದರೂ, ಅಧಿಕೃತವಾಗಿ ಚಿತ್ರತಂಡ ಮತ್ತೊಮ್ಮೆ ಈ ದಿನಾಂಕವನ್ನು ಘೋಷಿಸಲಿ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಪೋಸ್ಟರ್​ನಲ್ಲಿ ರಿಲೀಸ್ ಡೇಟ್ ಯಾಕೆ ಕಾಣಿಸುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ.

ಬುಚ್ಚಿ ಬಾಬು ಸಾನಾ ನಿರ್ದೇಶನದ ಈ ಚಿತ್ರವು ಗ್ರಾಮೀಣ ಹಿನ್ನೆಲೆಯ ಸ್ಪೋರ್ಟ್ಸ್ ಡ್ರಾಮಾ ಆಗಿದೆ. ಚಿತ್ರದ ಹೈಲೈಟ್ ಎಂದರೆ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಇಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ ಜಾನ್ವಿ ಕಪೂರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ದಿವ್ಯೇಂದು ಶರ್ಮಾ ಮತ್ತು ಜಗಪತಿ ಬಾಬು ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರಕ್ಕೆ ಜಾನ್ವಿ, ಮೃಣಾಲ್ ಮೆರುಗು: ಶೀಘ್ರವೇ ಸಾಂಗ್ ಶೂಟಿಂಗ್ ಶುರು

‘ವೃದ್ಧಿ ಸಿನಿಮಾಸ್’ ಸಂಸ್ಥೆಯು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ. ಎ.ಆರ್. ರೆಹಮಾನ್ ಅವರು ಸಂಗೀತ ನೀಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ರಿಲೀಸ್ ಡೇಟ್ ಬಗ್ಗೆ ಚಿತ್ರತಂಡದಿಂದ ಅಧಿಕೃತ ಹೇಳಿಕೆ ಹೊರಬರಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?