AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಗೆ ರಿಮೇಕ್​ ಆಗಲಿದೆ ‘ಬೇಬಿ’ ಸಿನಿಮಾ; ನಟಿಸಲು ಮುಂದೆ ಬಂದ ಸ್ಟಾರ್​ ಕಿಡ್​ಗಳು

ಹೊಸ ನಟ-ನಟಿಯರ ಕಾರಣದಿಂದ ‘ಬೇಬಿ’ ಸಿನಿಮಾಗೆ ಒಂದು ಕಳೆ ಬಂದಿತ್ತು. ಅದೇ ರೀತಿ ಈ ಚಿತ್ರದ ಹಿಂದಿ ರಿಮೇಕ್​ನಲ್ಲೂ ಹೊಸ ತಲೆಮಾರಿನ ಕಲಾವಿದರು ನಟಿಸಲು ಆಸಕ್ತಿ ತೋರಿಸುತ್ತಿದ್ದಾರೆ ಎನ್ನಲಾಗಿದೆ. ‘ಬೇಬಿ’ ಚಿತ್ರದ ನಿರ್ಮಾಪಕರೇ ಮಾಧ್ಯಮವೊಂದಕ್ಕೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಹಿಂದಿಗೆ ರಿಮೇಕ್​ ಆಗಲಿದೆ ‘ಬೇಬಿ’ ಸಿನಿಮಾ; ನಟಿಸಲು ಮುಂದೆ ಬಂದ ಸ್ಟಾರ್​ ಕಿಡ್​ಗಳು
ಆನಂದ್​ ದೇವರಕೊಂಡ, ವೈಷ್ಣವಿ ಚೈತನ್ಯ
ಮದನ್​ ಕುಮಾರ್​
|

Updated on:Dec 19, 2023 | 7:06 PM

Share

ಟಾಲಿವುಡ್​ನಲ್ಲಿ ಈ ವರ್ಷ ಬ್ಲಾಕ್​ ಬಸ್ಟರ್​ ಹಿಟ್​ ಆದ ಸಿನಿಮಾಗಳ ಸಾಲಿನಲ್ಲಿ ‘ಬೇಬಿ’ (Baby Movie) ಕೂಡ ಇದೆ. ಈ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಅವರ ಸಹೋದರ ಆನಂದ್​ ದೇವರಕೊಂಡ (Anand Deverakonda) ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅವರಿಗೆ ಜೋಡಿಯಾಗಿ ವೈಷ್ಣವಿ ಚೈತನ್ಯ ನಟಿಸಿದ್ದಾರೆ. ಕಡಿಮೆ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ 96 ಕೋಟಿ ರೂಪಾಯಿ! ಈಗ ‘ಬೇಬಿ’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ (Baby Movie Remake) ಮಾಡಲು ಮಾತುಕತೆ ನಡೆಯುತ್ತಿದೆ. ಆ ಬಗ್ಗೆ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

‘ಬೇಬಿ’ ಸಿನಿಮಾಗೆ ಸಾಯಿ ರಾಜೇಶ್​ ನೀಲಂ ನಿರ್ದೇಶನ ಮಾಡಿದ್ದು, ಶ್ರೀನಿವಾಸ ಕುಮಾರ್​ ನಾಯ್ಡು ಅಲಿಯಾಸ್​ ಎಸ್​ಕೆಎನ್​ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ ಎಂಬ ಮಾಹಿತಿಯನ್ನು ನಿರ್ಮಾಪಕರು ಖಚಿತಪಡಿಸಿರುವುದಾಗಿ ವರದಿ ಆಗಿದೆ. ಹಿಂದಿಯಲ್ಲಿ ದೊಡ್ಡ ನಿರ್ಮಾಪಕರು ರಿಮೇಕ್​ ಹಕ್ಕುಗಳನ್ನು ಖರೀದಿಸಲು ಮುಂದಾಗಿದ್ದಾರೆ. ಈ ಹಿಂದೆ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಆ ನಿರ್ಮಾಪಕರಿಗೆ ಇದೆಯಂತೆ.

ಇದನ್ನೂ ಓದಿ: Baby Movie: ತಮ್ಮನ ‘ಬೇಬಿ’ ಸಿನಿಮಾ ನೋಡಿಕೊಂಡು ಬಂದು ಅಚ್ಚರಿಯ ಹೇಳಿಕೆ ನೀಡಿದ ವಿಜಯ್​ ದೇವರಕೊಂಡ

ಹೊಸ ನಟ-ನಟಿಯರ ಕಾರಣದಿಂದ ‘ಬೇಬಿ’ ಸಿನಿಮಾಗೆ ಒಂದು ಕಳೆ ಬಂದಿತ್ತು. ಅದೇ ರೀತಿ ಹಿಂದಿ ರಿಮೇಕ್​ನಲ್ಲೂ ಹೊಸ ತಲೆಮಾರಿನ ಕಲಾವಿದರು ನಟಿಸಲು ಆಸಕ್ತಿ ತೋರಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ರಿಮೇಕ್​ ಮಾಡಲು ಮುಂದೆ ಬಂದಿರುವ ನಿರ್ಮಾಪಕರು ಯಾರು? ನಟಿಸಲು ಆಸಕ್ತಿ ತೋರಿಸಿರುವ ಸ್ಟಾರ್​ ಕಿಡ್​ ಯಾರು ಎಂಬುದನ್ನು ‘ಬೇಬಿ’ ನಿರ್ಮಾಪಕರು ಸದ್ಯಕ್ಕೆ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ಬೇಬಿ ಸಿನಿಮಾದ ನಿರ್ದೇಶಕನಿಗೆ ದುಬಾರಿ ಕಾರು ಉಡುಗೊರೆ

ಕೇವಲ 15 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಬೇಬಿ’ ಸಿನಿಮಾ ಮೂಡಿಬಂತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಬೆಳೆ ತೆಗೆಯಿತು. ಆನಂದ್ ದೇವರಕೊಂಡ ಅವರು ಈ ಸಿನಿಮಾದ ಗೆಲುವಿನಿಂದ ಸ್ಟಾರ್​ ನಟನಾಗಿ ಹೊರಹೊಮ್ಮಿದರು. ನಟಿ ವೈಷ್ಣವಿ ಚೈತನ್ಯ ಅವರ ಡಿಮ್ಯಾಂಡ್​ ಕೂಡ ಹೆಚ್ಚಾಯಿತು. ಇದರಲ್ಲಿ ಒಂದು ತ್ರಿಕೋನ ಪ್ರೇಮಕಥೆಯನ್ನು ಹೇಳಲಾಯಿತು. ಯುವ ಪ್ರೇಕ್ಷಕರು ಈ ಕಹಾನಿಯನ್ನು ಸಖತ್​ ಇಷ್ಟಪಟ್ಟರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:59 pm, Tue, 19 December 23

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!