AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಪುಷ್ಪ 2’ ಶೂಟಿಂಗ್​ ಮಾಡಲು ಕಾಡಿಗೆ ಕಾಲಿಡುತ್ತಿಲ್ಲ ಸುಕುಮಾರ್​; ಹಾಗಾದ್ರೆ ಬೇರೆ ಪ್ಲ್ಯಾನ್​ ಏನು?

Pushpa 2 | Sukumar: ಕಾಡಿನಲ್ಲಿ ಶೂಟಿಂಗ್​ ಮಾಡುವುದು ಎಂದರೆ ಸುಲಭದ ಮಾತಲ್ಲ. ಅದಕ್ಕಾಗಿ ನಿರ್ದೇಶಕ ಸುಕುಮಾ​ರ್​ ಅವರು ಆ ರಿಸ್ಕ್​ ತೆಗೆದುಕೊಳ್ಳುತ್ತಿಲ್ಲ.

Allu Arjun: ‘ಪುಷ್ಪ 2’ ಶೂಟಿಂಗ್​ ಮಾಡಲು ಕಾಡಿಗೆ ಕಾಲಿಡುತ್ತಿಲ್ಲ ಸುಕುಮಾರ್​; ಹಾಗಾದ್ರೆ ಬೇರೆ ಪ್ಲ್ಯಾನ್​ ಏನು?
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Mar 05, 2023 | 2:49 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ‘ಪುಷ್ಪ 2’ ಸಿನಿಮಾ ಮೇಲೆ ಸಂಪೂರ್ಣ ಗಮನ ಹರಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ನಿರ್ದೇಶಕ ಸುಕುಮಾರ್​ (Sukumar) ಅವರು ದೊಡ್ಡ ಕ್ಯಾನ್ವಾಸ್​ನಲ್ಲಿ ಈ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಅದಕ್ಕಾಗಿ ಬಹುಕೋಟಿ ರೂಪಾಯಿ ಬಜೆಟ್​ ಮೀಸಲಿಡಲಾಗಿದೆ. ‘ಪುಷ್ಪ’ ಸಿನಿಮಾದ ಕಥೆ ಅರಣ್ಯ ಪ್ರದೇಶದ ಹಿನ್ನೆಲೆಯಲ್ಲಿ ಸಾಗಿತ್ತು. ಈಗ ಇದರ ಸೀಕ್ವೆಲ್​ನಲ್ಲೂ ಕಾಡಿನ ಪರಿಸರ ಇರಲಿದೆ. ಆದರೆ ನಿಜವಾದ ಕಾಡಿಗೆ ಕಾಲಿಡಲು ಚಿತ್ರತಂಡ ಸಿದ್ಧವಿಲ್ಲ. ಅದರ ಬದಲು ‘ಪುಷ್ಪ 2’ (Pushpa 2) ಬಳಗದವರು ಬೇರೆ ಮಾರ್ಗ ಅನುಸರಿಸುತ್ತಿದ್ದಾರೆ. ಅರಣ್ಯದ ಹಿನ್ನೆಲೆಯಲ್ಲಿ ಬರುವ ಎಲ್ಲ ದೃಶ್ಯಗಳನ್ನು ಗ್ರಾಫಿಕ್ಸ್​ ಮೂಲಕ ಸೃಷ್ಟಿಸಲಾಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

ಕಾಡಿನಲ್ಲಿ ಶೂಟಿಂಗ್​ ಮಾಡುವುದು ಎಂದರೆ ಸುಲಭದ ಮಾತಲ್ಲ. ಅದಕ್ಕಾಗಿ ನಿರ್ದೇಶಕ ಸುಕುಮಾ​ರ್​ ಅವರು ಆ ರಿಸ್ಕ್​ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ. ಅದರ ಬದಲು 10ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ ಅದರಲ್ಲಿ ಶೂಟಿಂಗ್​ ಮಾಡಲಾಗುತ್ತಿದೆ. ಅತ್ಯಾಧುನಿಕ ಗ್ರಾಫಿಕ್ಸ್​ ಬಳಸಿ ಕಾಡಿನ ದೃಶ್ಯಗಳನ್ನು ಅದ್ದೂರಿಯಾಗಿ ತೋರಿಸಲು ನಿರ್ದೇಶಕರು ತೀರ್ಮಾನಿಸಿದ್ದಾರೆ. ಇದರಿಂದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅನುಕೂಲ ಆಗಲಿದೆ.

ಇದನ್ನೂ ಓದಿ: ಸದ್ದಿಲ್ಲದೆ ಘೋಷಣೆ ಆಯ್ತು ಅಲ್ಲು ಅರ್ಜುನ್ ಹೊಸ ಸಿನಿಮಾ; ಪ್ಯಾನ್ ಇಂಡಿಯಾ ಚಿತ್ರಕ್ಕೆ ಹಣ ಹೂಡಿದ ಹಿಂದಿ ನಿರ್ಮಾಪಕ

ಇದನ್ನೂ ಓದಿ
Image
‘ಸೈಮಾ’ ಅವಾರ್ಡ್ಸ್​ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ
Image
Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​

‘ಪುಷ್ಪ 2’ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಸಕಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ‘ಕೆಜಿಎಫ್​ 2’ ಚಿತ್ರಕ್ಕಿಂತಲೂ ದೊಡ್ಡ ಹಿಟ್​ ಆಗಬೇಕು ಎಂಬ ಗುರಿ ಇಟ್ಟುಕೊಂಡು ‘ಪುಷ್ಪ 2’ ತಂಡದವರು ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಸ್ಕ್ರಿಪ್ಟ್​ನಲ್ಲಿಯೂ ಸಾಕಷ್ಟು ಬದಲಾವಣೆ ಮಾಡಿಕೊಳ್ಳಲಾಗಿದೆ.

ಅಲ್ಲು ಅರ್ಜುನ್​ ಹುಟ್ಟುಹಬ್ಬಕ್ಕೆ ಟೀಸರ್​?

ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್​ 8ರಂದು ‘ಪುಷ್ಪ 2’ ಚಿತ್ರದ ಟೀಸರ್​ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಗಾಸಿಪ್​ ಬಲವಾಗಿ ಹಬ್ಬಿದೆ. ಏಪ್ರಿಲ್​ 8ರಂದು ಅಲ್ಲು ಅರ್ಜುನ್​ ಜನ್ಮದಿನ. ಆ ವಿಶೇಷ ದಿನದಂದು ಖಂಡಿತವಾಗಿಯೂ ನಿರ್ದೇಶಕ ಸುಕುಮಾರ್​ ಅವರು ಅಭಿಮಾನಿಗಳಿಗೆ ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ. ಹಾಗಾಗಿ ಆ ದಿನಾಂಕದ ಮೇಲೆ ಕಣ್ಣಿಡಲಾಗಿದೆ.

ಇದನ್ನೂ ಓದಿ: ‘Allu Arjun: ‘ಪುಷ್ಪ 2’ ಚಿತ್ರದ ಎಲ್ಲ ಹಕ್ಕುಗಳಿಗೆ 1050 ಕೋಟಿ ರೂ. ಕೇಳ್ತಿದ್ದಾರಾ ಅಲ್ಲು ಅರ್ಜುನ್​?

ದೊಡ್ಡ ಕ್ಯಾನ್ವಾಸ್​ನಲ್ಲಿ ‘ಪುಷ್ಪ 2’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಜೊತೆಗೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ