AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಪುಷ್ಪ 2’ ಶೂಟಿಂಗ್​ ಮಾಡಲು ಕಾಡಿಗೆ ಕಾಲಿಡುತ್ತಿಲ್ಲ ಸುಕುಮಾರ್​; ಹಾಗಾದ್ರೆ ಬೇರೆ ಪ್ಲ್ಯಾನ್​ ಏನು?

Pushpa 2 | Sukumar: ಕಾಡಿನಲ್ಲಿ ಶೂಟಿಂಗ್​ ಮಾಡುವುದು ಎಂದರೆ ಸುಲಭದ ಮಾತಲ್ಲ. ಅದಕ್ಕಾಗಿ ನಿರ್ದೇಶಕ ಸುಕುಮಾ​ರ್​ ಅವರು ಆ ರಿಸ್ಕ್​ ತೆಗೆದುಕೊಳ್ಳುತ್ತಿಲ್ಲ.

Allu Arjun: ‘ಪುಷ್ಪ 2’ ಶೂಟಿಂಗ್​ ಮಾಡಲು ಕಾಡಿಗೆ ಕಾಲಿಡುತ್ತಿಲ್ಲ ಸುಕುಮಾರ್​; ಹಾಗಾದ್ರೆ ಬೇರೆ ಪ್ಲ್ಯಾನ್​ ಏನು?
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Mar 05, 2023 | 2:49 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ‘ಪುಷ್ಪ 2’ ಸಿನಿಮಾ ಮೇಲೆ ಸಂಪೂರ್ಣ ಗಮನ ಹರಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ನಿರ್ದೇಶಕ ಸುಕುಮಾರ್​ (Sukumar) ಅವರು ದೊಡ್ಡ ಕ್ಯಾನ್ವಾಸ್​ನಲ್ಲಿ ಈ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಅದಕ್ಕಾಗಿ ಬಹುಕೋಟಿ ರೂಪಾಯಿ ಬಜೆಟ್​ ಮೀಸಲಿಡಲಾಗಿದೆ. ‘ಪುಷ್ಪ’ ಸಿನಿಮಾದ ಕಥೆ ಅರಣ್ಯ ಪ್ರದೇಶದ ಹಿನ್ನೆಲೆಯಲ್ಲಿ ಸಾಗಿತ್ತು. ಈಗ ಇದರ ಸೀಕ್ವೆಲ್​ನಲ್ಲೂ ಕಾಡಿನ ಪರಿಸರ ಇರಲಿದೆ. ಆದರೆ ನಿಜವಾದ ಕಾಡಿಗೆ ಕಾಲಿಡಲು ಚಿತ್ರತಂಡ ಸಿದ್ಧವಿಲ್ಲ. ಅದರ ಬದಲು ‘ಪುಷ್ಪ 2’ (Pushpa 2) ಬಳಗದವರು ಬೇರೆ ಮಾರ್ಗ ಅನುಸರಿಸುತ್ತಿದ್ದಾರೆ. ಅರಣ್ಯದ ಹಿನ್ನೆಲೆಯಲ್ಲಿ ಬರುವ ಎಲ್ಲ ದೃಶ್ಯಗಳನ್ನು ಗ್ರಾಫಿಕ್ಸ್​ ಮೂಲಕ ಸೃಷ್ಟಿಸಲಾಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

ಕಾಡಿನಲ್ಲಿ ಶೂಟಿಂಗ್​ ಮಾಡುವುದು ಎಂದರೆ ಸುಲಭದ ಮಾತಲ್ಲ. ಅದಕ್ಕಾಗಿ ನಿರ್ದೇಶಕ ಸುಕುಮಾ​ರ್​ ಅವರು ಆ ರಿಸ್ಕ್​ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ. ಅದರ ಬದಲು 10ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ ಅದರಲ್ಲಿ ಶೂಟಿಂಗ್​ ಮಾಡಲಾಗುತ್ತಿದೆ. ಅತ್ಯಾಧುನಿಕ ಗ್ರಾಫಿಕ್ಸ್​ ಬಳಸಿ ಕಾಡಿನ ದೃಶ್ಯಗಳನ್ನು ಅದ್ದೂರಿಯಾಗಿ ತೋರಿಸಲು ನಿರ್ದೇಶಕರು ತೀರ್ಮಾನಿಸಿದ್ದಾರೆ. ಇದರಿಂದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅನುಕೂಲ ಆಗಲಿದೆ.

ಇದನ್ನೂ ಓದಿ: ಸದ್ದಿಲ್ಲದೆ ಘೋಷಣೆ ಆಯ್ತು ಅಲ್ಲು ಅರ್ಜುನ್ ಹೊಸ ಸಿನಿಮಾ; ಪ್ಯಾನ್ ಇಂಡಿಯಾ ಚಿತ್ರಕ್ಕೆ ಹಣ ಹೂಡಿದ ಹಿಂದಿ ನಿರ್ಮಾಪಕ

ಇದನ್ನೂ ಓದಿ
Image
‘ಸೈಮಾ’ ಅವಾರ್ಡ್ಸ್​ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ
Image
Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​

‘ಪುಷ್ಪ 2’ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಸಕಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ‘ಕೆಜಿಎಫ್​ 2’ ಚಿತ್ರಕ್ಕಿಂತಲೂ ದೊಡ್ಡ ಹಿಟ್​ ಆಗಬೇಕು ಎಂಬ ಗುರಿ ಇಟ್ಟುಕೊಂಡು ‘ಪುಷ್ಪ 2’ ತಂಡದವರು ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಸ್ಕ್ರಿಪ್ಟ್​ನಲ್ಲಿಯೂ ಸಾಕಷ್ಟು ಬದಲಾವಣೆ ಮಾಡಿಕೊಳ್ಳಲಾಗಿದೆ.

ಅಲ್ಲು ಅರ್ಜುನ್​ ಹುಟ್ಟುಹಬ್ಬಕ್ಕೆ ಟೀಸರ್​?

ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್​ 8ರಂದು ‘ಪುಷ್ಪ 2’ ಚಿತ್ರದ ಟೀಸರ್​ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಗಾಸಿಪ್​ ಬಲವಾಗಿ ಹಬ್ಬಿದೆ. ಏಪ್ರಿಲ್​ 8ರಂದು ಅಲ್ಲು ಅರ್ಜುನ್​ ಜನ್ಮದಿನ. ಆ ವಿಶೇಷ ದಿನದಂದು ಖಂಡಿತವಾಗಿಯೂ ನಿರ್ದೇಶಕ ಸುಕುಮಾರ್​ ಅವರು ಅಭಿಮಾನಿಗಳಿಗೆ ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ. ಹಾಗಾಗಿ ಆ ದಿನಾಂಕದ ಮೇಲೆ ಕಣ್ಣಿಡಲಾಗಿದೆ.

ಇದನ್ನೂ ಓದಿ: ‘Allu Arjun: ‘ಪುಷ್ಪ 2’ ಚಿತ್ರದ ಎಲ್ಲ ಹಕ್ಕುಗಳಿಗೆ 1050 ಕೋಟಿ ರೂ. ಕೇಳ್ತಿದ್ದಾರಾ ಅಲ್ಲು ಅರ್ಜುನ್​?

ದೊಡ್ಡ ಕ್ಯಾನ್ವಾಸ್​ನಲ್ಲಿ ‘ಪುಷ್ಪ 2’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಜೊತೆಗೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ