AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಅಪಘಾತಕ್ಕೆ ಒಳಗಾದ ನಟ ಸಾಯಿ ಧರಮ್​ ತೇಜ್​ ಈಗ ಹೇಗಿದ್ದಾರೆ? ಇಲ್ಲಿದೆ ಶಾಕಿಂಗ್​ ಮಾಹಿತಿ

‘ರಿಪಬ್ಲಿಕ್​’ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಅವರು ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಅವರು ಕೋಮಾದಲ್ಲಿ ಇರುವಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ.

ಬೈಕ್​ ಅಪಘಾತಕ್ಕೆ ಒಳಗಾದ ನಟ ಸಾಯಿ ಧರಮ್​ ತೇಜ್​ ಈಗ ಹೇಗಿದ್ದಾರೆ? ಇಲ್ಲಿದೆ ಶಾಕಿಂಗ್​ ಮಾಹಿತಿ
ಬೈಕ್​ ಅಪಘಾತಕ್ಕೆ ಒಳಗಾದ ನಟ ಸಾಯಿ ಧರಮ್​ ತೇಜ್​ ಈಗ ಹೇಗಿದ್ದಾರೆ?
TV9 Web
| Edited By: |

Updated on: Sep 26, 2021 | 4:16 PM

Share

ನಟ ಸಾಯಿ ಧರಮ್​ ತೇಜ್​ ಅವರು ಬೈಕ್​ ಅಪಘಾತಕ್ಕೆ ಒಳಗಾಗಿದ್ದು ಇಡೀ ಟಾಲಿವುಡ್​ಗೆ ಆಘಾತ ಉಂಟು ಮಾಡಿತ್ತು. ಹೈದರಾಬಾದ್​ನಲ್ಲಿ ಸೆ.10ರಂದು ಸ್ಪೋರ್ಟ್ಸ್​ ಬೈಕ್​ನಲ್ಲಿ ಚಲಿಸುತ್ತಿದ್ದ ಅವರು ಅಪಘಾತಕ್ಕೆ ಒಳಗಾದ ಬಳಿಕ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಅಭಿಮಾನಿಗಳು ಅಪ್​ಡೇಟ್​ ಕೇಳುತ್ತಿದ್ದರು. ಆ ಕುರಿತು ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ. ಸಾಯಿ ಧರಮ್​ ತೇಜ್​ ಇನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾರೆ ಎಂಬುದು ಶಾಕಿಂಗ್​ ವಿಚಾರ. ಅಪಘಾತ ನಡೆದು ಇಷ್ಟು ದಿನಗಳು ಕಳೆದರೂ ಅವರಿಗೆ ಪ್ರಜ್ಞೆ ಬಂದಿಲ್ಲ!

ಸಾಯಿ ಧರಮ್​ ತೇಜ್​ ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಆ ಬಗ್ಗೆ ‘ರಿಪಬ್ಲಿಕ್​’ ಚಿತ್ರದ ಪ್ರೀ ರಿಲೀಸ್​ ಇವೆಂಟ್​ನಲ್ಲಿ ಅವರ ಮಾವ ಪವನ್​ ಕಲ್ಯಾಣ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅ.1ರಂದು ರಿಪಬ್ಲಿಕ್​ ಸಿನಿಮಾ ಬಿಡುಗಡೆ ಆಗಲಿದೆ. ಅದರ ಪ್ರಚಾರದ ಸಲುವಾಗಿ ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ಮಾಡಲಾಯಿತು. ಅದರಲ್ಲಿ ಭಾಗವಹಿಸಿದ್ದ ಪವನ್​ ಕಲ್ಯಾಣ್​ ಅವರು ಶಾಕಿಂಗ್​ ವಿಚಾರ ತೆರೆದಿಟ್ಟಿದ್ದಾರೆ.

‘ಸಾಯಿ ಧರಮ್​ ತೇಜ್​ ಇನ್ನೂ ಕಣ್ಣು ಬಿಟ್ಟಿಲ್ಲ. ಆತ ಇನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾನೆ. ಅವನಿಗೆ ಆದ ಆ್ಯಕ್ಸಿಡೆಂಟ್​ ನಿಜಕ್ಕೂ ದುರದೃಷ್ಟಕರ. ಅವನು ಅತಿ ವೇಗದಲ್ಲಿ ಬೈಕ್​ ಓಡಿಸುತ್ತಿದ್ದ ಎಂಬ ವರದಿಯನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಅದು ನಿಜವಲ್ಲ. ಸಾಯಿ ಧರಮ್​ ತೇಜ್​ ಕೇವಲ 45 ಕಿ.ಮೀ. ವೇಗದಲ್ಲಿ ಬೈಕ್​ ಓಡಿಸುತ್ತಿದ್ದ. ಸಿಸಿಟಿವಿ ದೃಶ್ಯದಲ್ಲೂ ಅದು ಗೊತ್ತಾಗುತ್ತದೆ. ಸಾಯಿ ಧರಮ್​ ತೇಜ್​ ಬಗ್ಗೆ ಮಾಧ್ಯಮಗಳು ಮಾತನಾಡಬೇಕಿಲ್ಲ. ರಾಜಕೀಯದಲ್ಲಿನ ಅಪರಾಧಗಳ ಬಗ್ಗೆ ಮಾತನಾಡಬೇಕಿದೆ’ ಎಂದು ಪವನ್​ ಕಲ್ಯಾಣ್​ ಹೇಳಿದ್ದಾರೆ.

‘ರಿಪಬ್ಲಿಕ್​’ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಅವರು ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಅವರು ಕೋಮಾದಲ್ಲಿ ಇರುವಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಸಿನಿಪ್ರಿಯರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಈಗ ಮನೆ ಮಾಡಿದೆ. ಸಾಯಿ ಧರಮ್​ ತೇಜ್​ಗೆ ಅಪಘಾತ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಚಿತ್ರದ ಪ್ರಚಾರದ ಸಲುವಾಗಿ ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿ ಕುರಿತು ಚಿಕ್ಕ ವಿಡಿಯೋ ತುಣುಕು ಬಿಡುಗಡೆ ಮಾಡಲಾಗಿತ್ತು. ಅದನ್ನು ಸಾಯಿ ಧರಮ್​ ತೇಜ್​ ಹಂಚಿಕೊಂಡು ಡಿ.ಕೆ. ರವಿಗೆ ಹ್ಯಾಟ್ಸ್​ಆಫ್​ ಹೇಳಿದ್ದರು.

ಇದನ್ನೂ ಓದಿ:

‘ಪವರ್​ ಇಲ್ಲದವರಿಗೆ ಪವರ್​ ಸ್ಟಾರ್​ ಅಂತ ಯಾಕೆ ಕರೆಯುತ್ತೀರಿ’? ಪವನ್​ ಕಲ್ಯಾಣ್​ ಟಾಂಗ್​ ಕೊಟ್ಟಿದ್ದು ಯಾರಿಗೆ?

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್