AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಅಪಘಾತಕ್ಕೆ ಒಳಗಾದ ನಟ ಸಾಯಿ ಧರಮ್​ ತೇಜ್​ ಈಗ ಹೇಗಿದ್ದಾರೆ? ಇಲ್ಲಿದೆ ಶಾಕಿಂಗ್​ ಮಾಹಿತಿ

‘ರಿಪಬ್ಲಿಕ್​’ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಅವರು ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಅವರು ಕೋಮಾದಲ್ಲಿ ಇರುವಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ.

ಬೈಕ್​ ಅಪಘಾತಕ್ಕೆ ಒಳಗಾದ ನಟ ಸಾಯಿ ಧರಮ್​ ತೇಜ್​ ಈಗ ಹೇಗಿದ್ದಾರೆ? ಇಲ್ಲಿದೆ ಶಾಕಿಂಗ್​ ಮಾಹಿತಿ
ಬೈಕ್​ ಅಪಘಾತಕ್ಕೆ ಒಳಗಾದ ನಟ ಸಾಯಿ ಧರಮ್​ ತೇಜ್​ ಈಗ ಹೇಗಿದ್ದಾರೆ?
TV9 Web
| Edited By: |

Updated on: Sep 26, 2021 | 4:16 PM

Share

ನಟ ಸಾಯಿ ಧರಮ್​ ತೇಜ್​ ಅವರು ಬೈಕ್​ ಅಪಘಾತಕ್ಕೆ ಒಳಗಾಗಿದ್ದು ಇಡೀ ಟಾಲಿವುಡ್​ಗೆ ಆಘಾತ ಉಂಟು ಮಾಡಿತ್ತು. ಹೈದರಾಬಾದ್​ನಲ್ಲಿ ಸೆ.10ರಂದು ಸ್ಪೋರ್ಟ್ಸ್​ ಬೈಕ್​ನಲ್ಲಿ ಚಲಿಸುತ್ತಿದ್ದ ಅವರು ಅಪಘಾತಕ್ಕೆ ಒಳಗಾದ ಬಳಿಕ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಅಭಿಮಾನಿಗಳು ಅಪ್​ಡೇಟ್​ ಕೇಳುತ್ತಿದ್ದರು. ಆ ಕುರಿತು ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ. ಸಾಯಿ ಧರಮ್​ ತೇಜ್​ ಇನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾರೆ ಎಂಬುದು ಶಾಕಿಂಗ್​ ವಿಚಾರ. ಅಪಘಾತ ನಡೆದು ಇಷ್ಟು ದಿನಗಳು ಕಳೆದರೂ ಅವರಿಗೆ ಪ್ರಜ್ಞೆ ಬಂದಿಲ್ಲ!

ಸಾಯಿ ಧರಮ್​ ತೇಜ್​ ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಆ ಬಗ್ಗೆ ‘ರಿಪಬ್ಲಿಕ್​’ ಚಿತ್ರದ ಪ್ರೀ ರಿಲೀಸ್​ ಇವೆಂಟ್​ನಲ್ಲಿ ಅವರ ಮಾವ ಪವನ್​ ಕಲ್ಯಾಣ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅ.1ರಂದು ರಿಪಬ್ಲಿಕ್​ ಸಿನಿಮಾ ಬಿಡುಗಡೆ ಆಗಲಿದೆ. ಅದರ ಪ್ರಚಾರದ ಸಲುವಾಗಿ ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ಮಾಡಲಾಯಿತು. ಅದರಲ್ಲಿ ಭಾಗವಹಿಸಿದ್ದ ಪವನ್​ ಕಲ್ಯಾಣ್​ ಅವರು ಶಾಕಿಂಗ್​ ವಿಚಾರ ತೆರೆದಿಟ್ಟಿದ್ದಾರೆ.

‘ಸಾಯಿ ಧರಮ್​ ತೇಜ್​ ಇನ್ನೂ ಕಣ್ಣು ಬಿಟ್ಟಿಲ್ಲ. ಆತ ಇನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾನೆ. ಅವನಿಗೆ ಆದ ಆ್ಯಕ್ಸಿಡೆಂಟ್​ ನಿಜಕ್ಕೂ ದುರದೃಷ್ಟಕರ. ಅವನು ಅತಿ ವೇಗದಲ್ಲಿ ಬೈಕ್​ ಓಡಿಸುತ್ತಿದ್ದ ಎಂಬ ವರದಿಯನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಅದು ನಿಜವಲ್ಲ. ಸಾಯಿ ಧರಮ್​ ತೇಜ್​ ಕೇವಲ 45 ಕಿ.ಮೀ. ವೇಗದಲ್ಲಿ ಬೈಕ್​ ಓಡಿಸುತ್ತಿದ್ದ. ಸಿಸಿಟಿವಿ ದೃಶ್ಯದಲ್ಲೂ ಅದು ಗೊತ್ತಾಗುತ್ತದೆ. ಸಾಯಿ ಧರಮ್​ ತೇಜ್​ ಬಗ್ಗೆ ಮಾಧ್ಯಮಗಳು ಮಾತನಾಡಬೇಕಿಲ್ಲ. ರಾಜಕೀಯದಲ್ಲಿನ ಅಪರಾಧಗಳ ಬಗ್ಗೆ ಮಾತನಾಡಬೇಕಿದೆ’ ಎಂದು ಪವನ್​ ಕಲ್ಯಾಣ್​ ಹೇಳಿದ್ದಾರೆ.

‘ರಿಪಬ್ಲಿಕ್​’ ಸಿನಿಮಾದಲ್ಲಿ ಸಾಯಿ ಧರಮ್​ ತೇಜ್​ ಅವರು ಐಎಎಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಅವರು ಕೋಮಾದಲ್ಲಿ ಇರುವಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಸಿನಿಪ್ರಿಯರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಈಗ ಮನೆ ಮಾಡಿದೆ. ಸಾಯಿ ಧರಮ್​ ತೇಜ್​ಗೆ ಅಪಘಾತ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಚಿತ್ರದ ಪ್ರಚಾರದ ಸಲುವಾಗಿ ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿ ಕುರಿತು ಚಿಕ್ಕ ವಿಡಿಯೋ ತುಣುಕು ಬಿಡುಗಡೆ ಮಾಡಲಾಗಿತ್ತು. ಅದನ್ನು ಸಾಯಿ ಧರಮ್​ ತೇಜ್​ ಹಂಚಿಕೊಂಡು ಡಿ.ಕೆ. ರವಿಗೆ ಹ್ಯಾಟ್ಸ್​ಆಫ್​ ಹೇಳಿದ್ದರು.

ಇದನ್ನೂ ಓದಿ:

‘ಪವರ್​ ಇಲ್ಲದವರಿಗೆ ಪವರ್​ ಸ್ಟಾರ್​ ಅಂತ ಯಾಕೆ ಕರೆಯುತ್ತೀರಿ’? ಪವನ್​ ಕಲ್ಯಾಣ್​ ಟಾಂಗ್​ ಕೊಟ್ಟಿದ್ದು ಯಾರಿಗೆ?

ಸಾಯಿ ಧರಮ್​ ತೇಜ್​ ಬೈಕ್​ ಅಪಘಾತ: ಅಪಶಕುನ ನುಡಿದ ಹಿರಿಯ ನಟನ ವಿರುದ್ಧ ಭಾರಿ ಆಕ್ರೋಶ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!