AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು 

ರಾಮ್ ಗೋಪಾಲ್ ವರ್ಮಾ 'ಟಾಕ್ಸಿಕ್' ಚಿತ್ರದ ಬಗ್ಗೆ ನೆಗೆಟಿವ್ ಹೇಳಿಕೆ ನೀಡಿ 'ಧುರಂಧರ್ 2' ಅನ್ನು ಹೊಗಳಿ ವಿವಾದ ಸೃಷ್ಟಿಸಿದ್ದಾರೆ. ಈ ಹೇಳಿಕೆಗಳ ನಂತರ ಆರ್​​ಜಿವಿ ಸ್ಪಷ್ಟನೆ ನೀಡಿದರೂ, ಅವರ ದ್ವಂದ್ವ ನಿಲುವು ಮತ್ತು 'ಟಾಕ್ಸಿಕ್' ವಿರೋಧಿ ವರ್ತನೆ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿದೆ.

‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು 
ಆರ್​​ಜಿವಿ-ಯಶ್
ರಾಜೇಶ್ ದುಗ್ಗುಮನೆ
|

Updated on:Feb 23, 2026 | 7:03 AM

Share
ರಾಮ್​ ಗೋಪಾಲ್ ವರ್ಮ (RGV) ಒಂದು ಕಾಲದಲ್ಲಿ ಒಳ್ಳೊಳ್ಳೆಯ ಸಿನಿಮಾ ನೀಡಿದವರು. ಆದರೆ, ಈಗ ಅವರ ಬಳಿ ಅದು ಸಾಧ್ಯವಾಗುತ್ತಿಲ್ಲ. ಅವರ ಬತ್ತಳಿಕೆಯಿಂದ ಚೆನ್ನಾಗಿರೋ ಸಿನಿಮಾ ಬರದೆ ಯಾವುದೋ ಕಾಲವೇ ಆಗಿ ಹೋಗಿದೆ. ಆದರೆ, ಇದಕ್ಕೆಲ್ಲ ಅವರು ತಲೆಕೆಡಿಸಿಕೊಂಡಿಲ್ಲ. ಸಿನಿಮಾ ಮಾಡದೆ ಇದ್ದರೂ ಸದಾ ಪ್ರಚಾರದಲ್ಲಿ ಇರೋದು ಹೇಗೆ ಎಂಬುದನ್ನು ಅವರು ಕಂಡು ಹಿಡಿದುಕೊಂಡಿದ್ದಾರೆ. ಈಗ ಅದೇ ರೀತಿ ಮಾಡಲು ಹೋಗಿ ಟ್ರೋಲ್ ಆಗಿದ್ದಾರೆ. ಆ ಬಳಿಕ ಅದಕ್ಕೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ.
ಮಾರ್ಚ್ 19ರಂದು ‘ಟಾಕ್ಸಿಕ್’ ಹಾಗೂ ‘ಧುರಂದರ್ 2’ ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿವೆ. ಈ ಚಿತ್ರಗಳ ಬಗ್ಗೆ ನಿರೀಕ್ಷೆ ಇದೆ. ಈ ಸಿನಿಮಾ ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಸಹಜವಾಗಿ ಒಂದು ಸಿನಿಮಾಗೆ ನಷ್ಟ ಆಗುತ್ತದೆ ಎಂಬ ನಂಬಿಕೆ ಅನೇಕರದ್ದು. ಆರ್​​ಜಿವಿ ಕೂಡ ಇದೇ ರೀತಿಯ ಅಭಿಪ್ರಾಯ ಹೊಂದಿದ್ದಾರೆ. ಆದರೆ, ಪ್ರಮುಖವಾಗಿ ಅವರಿಗೆ ‘ಟಾಕ್ಸಿಕ್’ ಬಗ್ಗೆ ದ್ವೇಷ ಇದ್ದಂತೆ ಇದೆ. ಅವರು ಮೊದಲಿನಿಂದಲೂ ಸಿನಿಮಾ ಬಗ್ಗೆ ನೆಗೆಟಿವ್ ವಿಷಯ ಸ್ಪ್ರೆಡ್ ಮಾಡುವ ಕೆಲಸ ಮಾಡುತ್ತಿದ್ದಾರೆ.

‘ಟಾಕ್ಸಿಕ್’ ಹಾಗೂ ‘ಧುರಂಧರ್ 2’ ರಿಲೀಸ್ ಆಗುತ್ತಿದೆ. ‘ಧುರಂದರ್’ ಕಲೆಕ್ಷನ್ ಎದುರು ‘ಕೆಜಿಎಫ್ 2’ ಕಲೆಕ್ಷನ್ ತುಂಬಾನೇ ಸಣ್ಣದಾಗಿ ಕಾಣಿಸುತ್ತದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ‘ಧುರಂಧರ್ 2’ ಎದುರು ‘ಟಾಕ್ಸಿಕ್’ ಬಂದರೆ ಯಾವ ರೀತಿಯಲ್ಲಿ ಇರಬಹುದು ಎಂದು ಊಹಿಸಿ ಎಂಬುದು ಅವರ ಮಾತಿನ ಅರ್ಥ.

‘ಈಗ ರಿಲೀಸ್ ಆಗುತ್ತಿರುವ ಸಿನಿಮಾಗಳ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಧುರಂಧರ್ ಪ್ರೇಕ್ಷಕರ ಬುದ್ಧಿಮತ್ತೆಯನ್ನು ಗೌರವಿಸುತ್ತದೆ ಮತ್ತು ಟಾಕ್ಸಿಕ್ ಜನರ ಮೂರ್ಖತನವನ್ನು ಊಹಿಸುತ್ತದೆ. ಕೆಜಿಎಫ್ 2 ಒಂದು ಸ್ಥಳೀಯ ಚಿತ್ರವಾಗಿದ್ದು, ಅದು ಜನಸಾಮಾನ್ಯರಲ್ಲಿನ ಮೂರ್ಖತನವನ್ನು ಟಾರ್ಗೆಟ್ ಮಾಡಿತ್ತು. ಧುರಂಧರ್ ಜನಸಾಮಾನ್ಯರಲ್ಲಿ ಬುದ್ಧಿವಂತಿಕೆಯನ್ನು ಟಾರ್ಗೆಟ್ ಮಾಡಿತ್ತು’ ಎಂದಿದ್ದಾರೆ. ಈ ಮೊದಲು ಆರ್​​ಜಿವಿ ‘ಕೆಜಿಎಫ್ 2’ ಚಿತ್ರವನ್ನು ಹೊಗಳಿ ಮಾಡಿದ ಟ್ವೀಟ್​ನ ತೋರಿಸಿ ಅವರಿಗೆ ಪಾಠ ಹೇಳಿಕೊಡಲಾಗಿದೆ.

ಈಗ ಈ ವಿಷಯದಲ್ಲಿ ಆರ್​​ಜಿವಿಯನ್ನು ಟ್ರೋಲ್ ಮಾಡಲಾಗಿದೆ. ಆ ಬಳಿಕ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಅರ್ಥವಾಗದ ಎಲ್ಲಾ ಡಂಬೋಗಳಿಗೆ, ನಾನು ಸ್ಪಷ್ಟಪಡಿಸಲು ಬಯಸುವುದು ಏನೆಂದರೆ, ‘2 ಬಿಡುಗಡೆಗಳ ಸಂದರ್ಭದಲ್ಲಿ, ನಾನು ಸಿನಿಮಾದ ಶೈಲಿಗಳ ಬಗ್ಗೆ ಮಾತನಾಡುತ್ತಿದ್ದೇನೆಯೇ ಹೊರತು ನಿರ್ದಿಷ್ಟವಾಗಿ ಒಂದು ಚಿತ್ರದ ಬಗ್ಗೆ ಅಲ್ಲ’ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Mon, 23 February 26

Follow Us
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?