Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

2017ರ ಜೂನ್​ನಲ್ಲಿ ಸಾರಾ ಅಲಿ ಖಾನ್​ ಮತ್ತು ರಿಯಾ ಚಕ್ರವರ್ತಿ ನಡುವೆ ಮೊಬೈಲ್​ ಚಾಟ್​ ನಡೆದಿತ್ತು. ಅದರಲ್ಲಿ ರಿಯಾಗೆ ಗಾಂಜಾ ತೆಗೆದುಕೊಳ್ಳಲು ಸಾರಾ ಸಲಹೆ ನೀಡಿದ್ದರು ಎಂಬುದು ಬಯಲಾಗಿದೆ.

ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ
ರಿಯಾ ಚಕ್ರವರ್ತಿ, ಸಾರಾ ಅಲಿ ಖಾನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Jun 07, 2021 | 3:34 PM

ಕಳೆದ ವರ್ಷ ನಿಧನರಾದ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದ ರಿಯಾ ಚಕ್ರವರ್ತಿ ಸದ್ಯ ಜಾಮೀನು ಪಡೆದು ಹೊರಗೆ ಬಂದು ಆರಾಮಾಗಿ ಇದ್ದಾರೆ. ಸುಶಾಂತ್​ ಸಾವಿನ ತನಿಖೆಯ ಜೊತೆಗೆ ಬಾಲಿವುಡ್​ನ ಡ್ರಗ್ಸ್​ ಮಾಫಿಯಾ​ ಕೂಡ ಬಯಲಾದ ಬಳಿಕ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ಸಂಬಂಧ ಎನ್​ಸಿಬಿ ಅಧಿಕಾರಿಗಳಿಗೆ ತಮ್ಮ ಹೇಳಿಕೆ ನೀಡಿರುವ ನಟಿ ರಿಯಾ ಚಕ್ರವರ್ತಿ ಅವರು ಸಾರಾ ಅಲಿ ಖಾನ್​ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ.

ಬಾಲಿವುಡ್​ನ ಹಲವರು ಮಾದಕ ವಸ್ತು ಸೇವನೆ ಮಾಡುತ್ತಾರೆ ಎಂಬ ಗುಮಾನಿ ಬಹಳ ದಿನಗಳ ಹಿಂದೆಯೇ ಶುರುವಾಗಿತ್ತು. ಆ ಕುರಿತು ಅನೇಕರನ್ನು ಎನ್​ಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಅದರಲ್ಲಿ ಸೈಫ್​ ಅಲಿ ಖಾನ್​ ಪುತ್ರಿ ಸಾರಾ ಅಲಿ ಖಾನ್​ ಹೆಸರು ಕೂಡ ಇತ್ತು. ಕಳೆದ ವರ್ಷ ವಿಚಾರಣೆ ಎದುರಿಸಿ ಸೈಲೆಂಟ್​ ಆಗಿದ್ದ ಅವರಿಗೆ ಈಗ ಮತ್ತೆ ಟೆನ್ಷನ್​ ಶುರು ಆಗಿದೆ. ಅದಕ್ಕೆ ಕಾರಣವೇ ರಿಯಾ ಚಕ್ರವರ್ತಿ ಹೇಳಿಕೆ.

2017ರ ಜೂನ್​ನಲ್ಲಿ ಸಾರಾ ಅಲಿ ಖಾನ್​ ಮತ್ತು ರಿಯಾ ಚಕ್ರವರ್ತಿ ನಡುವೆ ಚಾಟ್​ ನಡೆದಿತ್ತು. ಅದರಲ್ಲಿ ರಿಯಾಗೆ ಗಾಂಜಾ ತೆಗೆದುಕೊಳ್ಳಲು ಸಾರಾ ಸಲಹೆ ನೀಡಿದ್ದರು ಎಂಬುದು ಬಯಲಾಗಿದೆ. ‘ಸಾರಾ ಅಲಿ ಖಾನ್​ ಬಳಿ ಯಾವಾಗಲೂ ಗಾಂಜಾ ಸುರುಳಿ ಇರುತ್ತಿತ್ತು. ಅದನ್ನೇ ಅವರು ನನಗೂ ಕೊಡಲು ಮುಂದಾಗಿದ್ದರು’ ಎಂದು ಎನ್​ಸಿಬಿ ಅಧಿಕಾರಿಗಳ ಮುಂದೆ ರಿಯಾ ಚಕ್ರವರ್ತಿ ಹೇಳಿದ್ದಾರೆ. ಅವರ ಹೇಳಿಕೆಯ ಪ್ರತಿಯು ಮಾಧ್ಯಮವೊಂದಕ್ಕೆ ಲಭ್ಯವಾಗಿದ್ದು, ಆ ಮೂಲಕ ಈ ವಿಚಾರ ಬಯಲಾಗಿದೆ.

ಸುಶಾಂತ್​ ಸಿಂಗ್​ ರಜಪೂತ್​ ಜೊತೆ ರಿಯಾ ಚಕ್ರವರ್ತಿ ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿ ಇದ್ದರು. ಅನೇಕ ಬಾರಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದರು. ಆದರೆ ಸುಶಾಂತ್​ ನಿಧನದ ಬಳಿಕ ಅವರ ತಂದೆ ಕೆಕೆ ಸಿಂಗ್​ ಅವರು ರಿಯಾ ವಿರದ್ಧವೇ ದೂರು ನೀಡಿದರು. ಆ ಪ್ರಕರಣವನ್ನು ಹುಡುಕಿ ಹೊರಟ ಪೊಲೀಸರಿಗೆ ಬಾಲಿವುಡ್​ನ ಡ್ರಗ್ಸ್​ ಮತ್ತು ಅಕ್ರಮ ಹಣ ಸಾಗಾಣಿಕೆ ವಿಷಯಗಳು ತಿಳಿದುಬಂದವು. ಸುಶಾಂತ್​ ಸಾವಿನ ತನಿಖೆಯ ಅಂತಿಮ ವರದಿ ಇನ್ನೂ ಸಲ್ಲಿಕೆ ಆಗಿಲ್ಲ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

ಸುಶಾಂತ್ ಸಿಂಗ್ ಸಾವಿನ ಬಳಿಕವೂ ಪ್ರೀತಿ ಮೇಲಿನ ನಂಬಿಕೆ ಕಡಿಮೆಯಾಗಿಲ್ಲ; ಅಚ್ಚರಿಯ ಹೇಳಿಕೆ ನೀಡಿದ ರಿಯಾ ಚಕ್ರವರ್ತಿ

ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್