AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಜತೆ ಅವರ ಅಕ್ಕ-ಭಾವನೂ ಡ್ರಗ್ಸ್​ ಸೇವಿಸಿದ್ದಾರೆ; ಪ್ರಕರಣಕ್ಕೆ ಟ್ವಿಸ್ಟ್​ ಕೊಟ್ಟ ರಿಯಾ ಚಕ್ರವರ್ತಿ

Sushant Singh Rajput: ಸುಶಾಂತ್​ ಸಿಂಗ್​ ರಜಪೂತ್​ ಅವರ ಅಕ್ಕ-ಭಾವ ಕೂಡ ಮಾದಕ ವಸ್ತು ವ್ಯಸನಿಗಳಾಗಿದ್ದರು ಎಂದು ರಿಯಾ ಚಕ್ರವರ್ತಿ ಆರೋಪಿಸಿದ್ದಾರೆ. ಇದು ಎಲ್ಲರ ಅಚ್ಚರಿಗೆ ಕಾರಣ ಆಗಿದೆ.

ಸುಶಾಂತ್ ಜತೆ ಅವರ ಅಕ್ಕ-ಭಾವನೂ ಡ್ರಗ್ಸ್​ ಸೇವಿಸಿದ್ದಾರೆ; ಪ್ರಕರಣಕ್ಕೆ ಟ್ವಿಸ್ಟ್​ ಕೊಟ್ಟ ರಿಯಾ ಚಕ್ರವರ್ತಿ
ಸುಶಾಂತ್​ ಸಿಂಗ್ ರಜಪೂತ್​, ರಿಯಾ ಚಕ್ರವರ್ತಿ
ಮದನ್​ ಕುಮಾರ್​
| Edited By: |

Updated on: Jun 07, 2021 | 4:23 PM

Share

ಬಾಲಿವುಡ್​ನ ಖ್ಯಾತ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಸಾವಿನ ತನಿಖೆ ಇನ್ನೂ ಕೊನೆ ಆಗಿಲ್ಲ. ಎನ್​ಸಿಬಿ, ಸಿಬಿಐ ಮತ್ತು ಜಾರಿ ನಿರ್ದೇಶನಾಯಲದ ಅಂತಿಮ ವರದಿ ಇನ್ನೂ ಸಲ್ಲಿಕೆ ಆಗಿಲ್ಲ. ಸದ್ಯ ತನಿಖೆ ನಡೆಯುತ್ತಿದ್ದು, ಎನ್​ಸಿಬಿ ಅಧಿಕಾರಿಗಳ ಮುಂದೆ ಸುಶಾಂತ್​ ಪ್ರೇಯಸಿ ರಿಯಾ ಚಕ್ರವರ್ತಿ ಒಪ್ಪಿಕೊಂಡ ಕೆಲವು ವಿಷಯಗಳು ಬಯಲಾಗುತ್ತಿವೆ. ಸುಶಾಂತ್​ ಸಾವಿನಲ್ಲಿ ರಿಯಾ ಕೈವಾಡ ಇದೆ ಎಂದು ಆರೋಪಿಸಿ ಸುಶಾಂತ್ ತಂದೆ ಕೆಕೆ ಸಿಂಗ್​ ದೂರು ನೀಡಿದ್ದರು. ಆದರೆ ತನಿಖೆ ವೇಳೆ ಸುಶಾಂತ್​ ಕುಟುಂಬದವರ ವಿರುದ್ಧವೇ ರಿಯಾ ಅನೇಕ ಪ್ರತ್ಯಾರೋಪಗಳನ್ನು ಮಾಡಿದ್ದಾರೆ.

ಸುಶಾಂತ್​ ಸಾವಿನ ಸುತ್ತ ಮಾದಕ ವಸ್ತು ಜಾಲದ ನಂಟು ಇರುವುದು ಬಹಳ ಬೇಗ ಗಮನಕ್ಕೆ ಬಂತು. ಸುಶಾಂತ್​ ಕೂಡ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನಲಾಗಿದೆ. ಅದಕ್ಕೆ ಮುಖ್ಯ ಕಾರಣವೇ ರಿಯಾ ಚಕ್ರವರ್ತಿ ಎಂಬ ಆರೋಪ ಇದೆ. ಆದರೆ ಎನ್​ಸಿಬಿ ಮುಂದೆ ರಿಯಾ ಬೇರೆ ಹೇಳಿಕೆ ನೀಡಿದ್ದಾರೆ. ಸುಶಾಂತ್​ ಅಕ್ಕ-ಭಾವ ಕೂಡ ಮಾದಕ ವಸ್ತು ವ್ಯಸನಿಗಳಾಗಿದ್ದರು ಎಂದು ರಿಯಾ ಆರೋಪಿಸಿದ್ದಾರೆ. ಇದು ಎಲ್ಲರ ಅಚ್ಚರಿಗೆ ಕಾರಣ ಆಗಿದೆ.

‘ಸುಶಾಂತ್​ ಒಬ್ಬ ಡ್ರಗ್​ ಅಡಿಕ್ಟ್​ ಎಂಬುದು ಅವರ ಕುಟುಂಬದವರಿಗೂ ಗೊತ್ತಿತ್ತು. ಅವರ ಅಕ್ಕ ಪ್ರಿಯಾಂಕಾ ಮತ್ತು ಭಾವ ಸಿದ್ಧಾರ್ಥ್​ ಸುಶಾಂತ್ ಜೊತೆ ಸೇರಿಕೊಂಡು ಡ್ರಗ್ಸ್​ ಸೇವಿಸಿದ್ದಾರೆ. 2020ರ ಜೂ.8ರಂದು ಕೆಲವು ಮಾತ್ರೆಗಳನ್ನು ತೆಗೆದುಕೊಳ್ಳಲು ಸುಶಾಂತ್​ಗೆ ಅವರ ಅಕ್ಕ ಪ್ರಿಯಾಂಕಾ ವಾಟ್ಸ್​ಆ್ಯಪ್​ ಮೆಸೇಜ್​ ಮೂಲಕ ತಿಳಿಸಿದ್ದರು. ಸುಶಾಂತ್​ಗೆ ಡಾ. ತರುಣ್​ ಎಂಬ ಹೃದ್ರೋಗ ತಜ್ಞರಿಂದ ಕೆಲವು ಮಾತ್ರೆಗಳನ್ನು ಕೊಡಿಸಿದ್ದರು. ಮನೋರೋಗ ತಜ್ಞರು ಸೂಚಿಸದ ಹೊರತು ಈ ಮಾತ್ರೆಗಳನ್ನು ಯಾರೂ ಕೊಡುವಂತಿಲ್ಲ’ ಎಂದು ತಮ್ಮ ಹೇಳಿಕೆಯಲ್ಲಿ ರಿಯಾ ತಿಳಿಸಿದ್ದಾರೆ.

ಬಾಲಿವುಡ್​ ನಟಿ ಸಾರಾ ಅಲಿ ಖಾನ್​ ಬಗ್ಗೆಯೂ ಅವರು ಶಾಕಿಂಗ್​ ಹೇಳಿಕೆ ನೀಡಿದ್ದಾರೆ. ‘ಸಾರಾ ಅಲಿ ಖಾನ್​ ಬಳಿ ಯಾವಾಗಲೂ ಗಾಂಜಾ ಸುರುಳಿ ಇರುತ್ತಿತ್ತು. ಅದನ್ನೇ ಅವರು ನನಗೂ ಕೊಡಲು ಮುಂದಾಗಿದ್ದರು’ ಎಂದು ಎನ್​ಸಿಬಿ ಅಧಿಕಾರಿಗಳ ಮುಂದೆ ರಿಯಾ ಚಕ್ರವರ್ತಿ ಹೇಳಿದ್ದಾರೆ. ಅವರ ಹೇಳಿಕೆಯ ಪ್ರತಿಯು ಮಾಧ್ಯಮವೊಂದಕ್ಕೆ ಲಭ್ಯವಾಗಿದ್ದು, ಆ ಮೂಲಕ ಈ ವಿಚಾರಗಳು ಬಯಲಾಗಿವೆ.

ಇದನ್ನೂ ಓದಿ:

ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

ಸುಶಾಂತ್​ ಸಾವಿನಲ್ಲಿ ದುಡ್ಡು ಮಾಡಿಕೊಳ್ಳುತ್ತಿರುವ ನೀಚರು; 3 ಮುಖ್ಯ ವಿಷಯ ತೆರೆದಿಟ್ಟ ಸಹೋದರಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್