AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಜತೆ ಅವರ ಅಕ್ಕ-ಭಾವನೂ ಡ್ರಗ್ಸ್​ ಸೇವಿಸಿದ್ದಾರೆ; ಪ್ರಕರಣಕ್ಕೆ ಟ್ವಿಸ್ಟ್​ ಕೊಟ್ಟ ರಿಯಾ ಚಕ್ರವರ್ತಿ

Sushant Singh Rajput: ಸುಶಾಂತ್​ ಸಿಂಗ್​ ರಜಪೂತ್​ ಅವರ ಅಕ್ಕ-ಭಾವ ಕೂಡ ಮಾದಕ ವಸ್ತು ವ್ಯಸನಿಗಳಾಗಿದ್ದರು ಎಂದು ರಿಯಾ ಚಕ್ರವರ್ತಿ ಆರೋಪಿಸಿದ್ದಾರೆ. ಇದು ಎಲ್ಲರ ಅಚ್ಚರಿಗೆ ಕಾರಣ ಆಗಿದೆ.

ಸುಶಾಂತ್ ಜತೆ ಅವರ ಅಕ್ಕ-ಭಾವನೂ ಡ್ರಗ್ಸ್​ ಸೇವಿಸಿದ್ದಾರೆ; ಪ್ರಕರಣಕ್ಕೆ ಟ್ವಿಸ್ಟ್​ ಕೊಟ್ಟ ರಿಯಾ ಚಕ್ರವರ್ತಿ
ಸುಶಾಂತ್​ ಸಿಂಗ್ ರಜಪೂತ್​, ರಿಯಾ ಚಕ್ರವರ್ತಿ
ಮದನ್​ ಕುಮಾರ್​
| Edited By: |

Updated on: Jun 07, 2021 | 4:23 PM

Share

ಬಾಲಿವುಡ್​ನ ಖ್ಯಾತ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಸಾವಿನ ತನಿಖೆ ಇನ್ನೂ ಕೊನೆ ಆಗಿಲ್ಲ. ಎನ್​ಸಿಬಿ, ಸಿಬಿಐ ಮತ್ತು ಜಾರಿ ನಿರ್ದೇಶನಾಯಲದ ಅಂತಿಮ ವರದಿ ಇನ್ನೂ ಸಲ್ಲಿಕೆ ಆಗಿಲ್ಲ. ಸದ್ಯ ತನಿಖೆ ನಡೆಯುತ್ತಿದ್ದು, ಎನ್​ಸಿಬಿ ಅಧಿಕಾರಿಗಳ ಮುಂದೆ ಸುಶಾಂತ್​ ಪ್ರೇಯಸಿ ರಿಯಾ ಚಕ್ರವರ್ತಿ ಒಪ್ಪಿಕೊಂಡ ಕೆಲವು ವಿಷಯಗಳು ಬಯಲಾಗುತ್ತಿವೆ. ಸುಶಾಂತ್​ ಸಾವಿನಲ್ಲಿ ರಿಯಾ ಕೈವಾಡ ಇದೆ ಎಂದು ಆರೋಪಿಸಿ ಸುಶಾಂತ್ ತಂದೆ ಕೆಕೆ ಸಿಂಗ್​ ದೂರು ನೀಡಿದ್ದರು. ಆದರೆ ತನಿಖೆ ವೇಳೆ ಸುಶಾಂತ್​ ಕುಟುಂಬದವರ ವಿರುದ್ಧವೇ ರಿಯಾ ಅನೇಕ ಪ್ರತ್ಯಾರೋಪಗಳನ್ನು ಮಾಡಿದ್ದಾರೆ.

ಸುಶಾಂತ್​ ಸಾವಿನ ಸುತ್ತ ಮಾದಕ ವಸ್ತು ಜಾಲದ ನಂಟು ಇರುವುದು ಬಹಳ ಬೇಗ ಗಮನಕ್ಕೆ ಬಂತು. ಸುಶಾಂತ್​ ಕೂಡ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನಲಾಗಿದೆ. ಅದಕ್ಕೆ ಮುಖ್ಯ ಕಾರಣವೇ ರಿಯಾ ಚಕ್ರವರ್ತಿ ಎಂಬ ಆರೋಪ ಇದೆ. ಆದರೆ ಎನ್​ಸಿಬಿ ಮುಂದೆ ರಿಯಾ ಬೇರೆ ಹೇಳಿಕೆ ನೀಡಿದ್ದಾರೆ. ಸುಶಾಂತ್​ ಅಕ್ಕ-ಭಾವ ಕೂಡ ಮಾದಕ ವಸ್ತು ವ್ಯಸನಿಗಳಾಗಿದ್ದರು ಎಂದು ರಿಯಾ ಆರೋಪಿಸಿದ್ದಾರೆ. ಇದು ಎಲ್ಲರ ಅಚ್ಚರಿಗೆ ಕಾರಣ ಆಗಿದೆ.

‘ಸುಶಾಂತ್​ ಒಬ್ಬ ಡ್ರಗ್​ ಅಡಿಕ್ಟ್​ ಎಂಬುದು ಅವರ ಕುಟುಂಬದವರಿಗೂ ಗೊತ್ತಿತ್ತು. ಅವರ ಅಕ್ಕ ಪ್ರಿಯಾಂಕಾ ಮತ್ತು ಭಾವ ಸಿದ್ಧಾರ್ಥ್​ ಸುಶಾಂತ್ ಜೊತೆ ಸೇರಿಕೊಂಡು ಡ್ರಗ್ಸ್​ ಸೇವಿಸಿದ್ದಾರೆ. 2020ರ ಜೂ.8ರಂದು ಕೆಲವು ಮಾತ್ರೆಗಳನ್ನು ತೆಗೆದುಕೊಳ್ಳಲು ಸುಶಾಂತ್​ಗೆ ಅವರ ಅಕ್ಕ ಪ್ರಿಯಾಂಕಾ ವಾಟ್ಸ್​ಆ್ಯಪ್​ ಮೆಸೇಜ್​ ಮೂಲಕ ತಿಳಿಸಿದ್ದರು. ಸುಶಾಂತ್​ಗೆ ಡಾ. ತರುಣ್​ ಎಂಬ ಹೃದ್ರೋಗ ತಜ್ಞರಿಂದ ಕೆಲವು ಮಾತ್ರೆಗಳನ್ನು ಕೊಡಿಸಿದ್ದರು. ಮನೋರೋಗ ತಜ್ಞರು ಸೂಚಿಸದ ಹೊರತು ಈ ಮಾತ್ರೆಗಳನ್ನು ಯಾರೂ ಕೊಡುವಂತಿಲ್ಲ’ ಎಂದು ತಮ್ಮ ಹೇಳಿಕೆಯಲ್ಲಿ ರಿಯಾ ತಿಳಿಸಿದ್ದಾರೆ.

ಬಾಲಿವುಡ್​ ನಟಿ ಸಾರಾ ಅಲಿ ಖಾನ್​ ಬಗ್ಗೆಯೂ ಅವರು ಶಾಕಿಂಗ್​ ಹೇಳಿಕೆ ನೀಡಿದ್ದಾರೆ. ‘ಸಾರಾ ಅಲಿ ಖಾನ್​ ಬಳಿ ಯಾವಾಗಲೂ ಗಾಂಜಾ ಸುರುಳಿ ಇರುತ್ತಿತ್ತು. ಅದನ್ನೇ ಅವರು ನನಗೂ ಕೊಡಲು ಮುಂದಾಗಿದ್ದರು’ ಎಂದು ಎನ್​ಸಿಬಿ ಅಧಿಕಾರಿಗಳ ಮುಂದೆ ರಿಯಾ ಚಕ್ರವರ್ತಿ ಹೇಳಿದ್ದಾರೆ. ಅವರ ಹೇಳಿಕೆಯ ಪ್ರತಿಯು ಮಾಧ್ಯಮವೊಂದಕ್ಕೆ ಲಭ್ಯವಾಗಿದ್ದು, ಆ ಮೂಲಕ ಈ ವಿಚಾರಗಳು ಬಯಲಾಗಿವೆ.

ಇದನ್ನೂ ಓದಿ:

ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

ಸುಶಾಂತ್​ ಸಾವಿನಲ್ಲಿ ದುಡ್ಡು ಮಾಡಿಕೊಳ್ಳುತ್ತಿರುವ ನೀಚರು; 3 ಮುಖ್ಯ ವಿಷಯ ತೆರೆದಿಟ್ಟ ಸಹೋದರಿ

Follow Us
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!