AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

ಸುಶಾಂತ್​ ಸಿಂಗ್ ಸಾವಿನ ನಂತರದಲ್ಲಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂದಿತ್ತು. ರಿಯಾ ಹಾಗೂ ಸುಶಾಂತ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರ ನಡುವಿನ ಪ್ರೀತಿ ಮುರಿದು ಬಿದ್ದಿತ್ತು

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?
ರಿಯಾ ಮತ್ತು ಸುಶಾಂತ್
Follow us
ರಾಜೇಶ್ ದುಗ್ಗುಮನೆ
|

Updated on:May 31, 2021 | 10:17 PM

ಯಶಸ್ವಿಯಾಗಿ 14 ಸೀಸನ್​ಗಳನ್ನು ಪೂರ್ಣಗೊಳಿಸಿರುವ ಹಿಂದಿ ಬಿಗ್​ ಬಾಸ್​ ಈಗ 15ನೇ ಸೀಸನ್​ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೊವಿಡ್​ ನಿಯಂತ್ರಣಕ್ಕೆ ಬಂದ ಮೇಲೆ ಬಿಗ್​ ಬಾಸ್​ 15ನೇ ಸೀಸನ್​ ಆರಂಭಗೊಳ್ಳಲಿದೆಯಂತೆ. ಅಚ್ಚರಿ ವಿಚಾರ ಎಂದರೆ, ಸುಶಾಂತ್​ ಸಿಂಗ್ ಪ್ರೇಯಸಿ ಆಗಿದ್ದ ರಿಯಾ ಚಕ್ರವರ್ತಿ ಬಿಗ್​ ಬಾಸ್​ ಮನೆಗೆ ಹೋಗಲಿದ್ದಾರೆ ಎನ್ನುವ ಗುಲ್ಲು ಜೋರಾಗಿದೆ.

ಸುಶಾಂತ್​ ಸಿಂಗ್ ಸಾವಿನ ನಂತರದಲ್ಲಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂದಿತ್ತು. ರಿಯಾ ಹಾಗೂ ಸುಶಾಂತ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರ ನಡುವಿನ ಪ್ರೀತಿ ಮುರಿದು ಬಿದ್ದಿತ್ತು. ಸುಶಾಂತ್​ ಸಾವಿನ ಪ್ರಕರಣದ ತನಿಖೆ ವೇಳೆ ರಿಯಾ ವಿಚಾರಣೆ ಮಾಡಲಾಗಿತ್ತು. ನಂತರ ಅವರನ್ನು ಅರೆಸ್ಟ್​ ಕೂಡ ಮಾಡಲಾಗಿತ್ತು. ಈಗ ಅವರು, ಜೈಲಿನಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ. ಬಿಗ್​ ಬಾಸ್ ತಂಡದವರು ರಿಯಾ ಅವರನ್ನು ಅಪ್ರೋಚ್​ ಮಾಡಿದ್ದಾರೆ ಎನ್ನಲಾಗಿದೆ.

ರಿಯಾ ಚಕ್ರವರ್ತಿ ವೈಯಕ್ತಿಕ ಜೀವನದ ಬಗ್ಗೆ ಜನರಿಗೆ ಆಸಕ್ತಿ ಇದೆ. ಸುಶಾಂತ್ ಸಿಂಗ್​ ಜತೆ ಅವರು ಹೇಗಿದ್ದರು ಎನ್ನುವ ಬಗ್ಗೆಯೂ ಅನೇಕರಿಗೆ ಕುತೂಹಲವಿದೆ. ಒಂದೊಮ್ಮೆ ರಿಯಾ ಬಿಗ್​ ಬಾಸ್​ ಮನೆ ಒಳಗೆ ಹೋದರೆ ಒಂದಷ್ಟು ವಿಚಾರಗಳು ಹೊರ ಬರಲಿವೆ. ಕುತೂಹಲದಿಂದ ಜನರು ಕೂಡ ಶೋ ವೀಕ್ಷಣೆ ಮಾಡುವ ಸಾಧ್ಯತೆ ಹೆಚ್ಚು. ಈ ಕಾರಣಕ್ಕೆ ರಿಯಾ ಅವರಿಗೆ ಮೊದಲ ಪ್ರಿಫರೆನ್ಸ್​ ನೀಡಲಾಗುತ್ತಿದೆ.

ಇನ್ನು, ರಿಯಾ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವ ಕುತೂಹಲ ಕೂಡ ಇದೆ. ಅವರು ಜೈಲಿಗೆ ಹೋಗಿ ಬಂದ ನಂತರದಲ್ಲಿ ಸ್ವಲ್ಪ ಕುಗ್ಗಿದಂತೆ ಕಾಣುತ್ತಿದ್ದಾರೆ. ಹೀಗಾಗಿ, ಮಾಧ್ಯಮಗಳ ಎದುರು ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಅವರು ಆಫರ್​ ರಿಜೆಕ್ಟ್​ ಮಾಡಬಹುದು ಅಥವಾ ಬಿಗ್​ ಬಾಸ್​ ಮನೆ ಒಳಗೆ ತೆರಳಿ ತಾವು ಯಾರು ಎಂಬುದನ್ನು ಸಾಬೀತು ಮಾಡಿಕೊಳ್ಳಲು ಶೋನಲ್ಲಿ ಭಾಗವಹಿಸೋಕೆ ಒಪ್ಪಿಕೊಳ್ಳಬಹುದು.

ರಿಯಾ ಮಾತ್ರವಲ್ಲದೆ, ಸಾಕಷ್ಟು ಜನರ ಹೆಸರು ಕೇಳಿ ಬರುತ್ತಿದೆ. ಇವರಲ್ಲಿ ಯಾರ್ಯಾರು ಬಿಗ್​ ಬಾಸ್​ ಮನೆ ಒಳಗೆ ಹೋಗುತ್ತಾರೆ ಎನ್ನುವ ಕುತೂಹಲ ಸದ್ಯದ್ದು. ಬಿಗ್​ ಬಾಸ್​ 14ನೇ ಸೀಸನ್​ ಈ ವರ್ಷದ ಆರಂಭದಲ್ಲಿ ಕೊನೆಯಾಗಿತ್ತು. ಹಿಂದಿ ಸೀಸನ್​ 15 ಅಕ್ಟೋಬರ್​ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಬಳಿಕವೂ ಪ್ರೀತಿ ಮೇಲಿನ ನಂಬಿಕೆ ಕಡಿಮೆಯಾಗಿಲ್ಲ; ಅಚ್ಚರಿಯ ಹೇಳಿಕೆ ನೀಡಿದ ರಿಯಾ ಚಕ್ರವರ್ತಿ

Published On - 9:43 pm, Mon, 31 May 21

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ