AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

ಸುಶಾಂತ್​ ಸಿಂಗ್ ಸಾವಿನ ನಂತರದಲ್ಲಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂದಿತ್ತು. ರಿಯಾ ಹಾಗೂ ಸುಶಾಂತ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರ ನಡುವಿನ ಪ್ರೀತಿ ಮುರಿದು ಬಿದ್ದಿತ್ತು

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?
ರಿಯಾ ಮತ್ತು ಸುಶಾಂತ್
ರಾಜೇಶ್ ದುಗ್ಗುಮನೆ
|

Updated on:May 31, 2021 | 10:17 PM

Share

ಯಶಸ್ವಿಯಾಗಿ 14 ಸೀಸನ್​ಗಳನ್ನು ಪೂರ್ಣಗೊಳಿಸಿರುವ ಹಿಂದಿ ಬಿಗ್​ ಬಾಸ್​ ಈಗ 15ನೇ ಸೀಸನ್​ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೊವಿಡ್​ ನಿಯಂತ್ರಣಕ್ಕೆ ಬಂದ ಮೇಲೆ ಬಿಗ್​ ಬಾಸ್​ 15ನೇ ಸೀಸನ್​ ಆರಂಭಗೊಳ್ಳಲಿದೆಯಂತೆ. ಅಚ್ಚರಿ ವಿಚಾರ ಎಂದರೆ, ಸುಶಾಂತ್​ ಸಿಂಗ್ ಪ್ರೇಯಸಿ ಆಗಿದ್ದ ರಿಯಾ ಚಕ್ರವರ್ತಿ ಬಿಗ್​ ಬಾಸ್​ ಮನೆಗೆ ಹೋಗಲಿದ್ದಾರೆ ಎನ್ನುವ ಗುಲ್ಲು ಜೋರಾಗಿದೆ.

ಸುಶಾಂತ್​ ಸಿಂಗ್ ಸಾವಿನ ನಂತರದಲ್ಲಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂದಿತ್ತು. ರಿಯಾ ಹಾಗೂ ಸುಶಾಂತ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರ ನಡುವಿನ ಪ್ರೀತಿ ಮುರಿದು ಬಿದ್ದಿತ್ತು. ಸುಶಾಂತ್​ ಸಾವಿನ ಪ್ರಕರಣದ ತನಿಖೆ ವೇಳೆ ರಿಯಾ ವಿಚಾರಣೆ ಮಾಡಲಾಗಿತ್ತು. ನಂತರ ಅವರನ್ನು ಅರೆಸ್ಟ್​ ಕೂಡ ಮಾಡಲಾಗಿತ್ತು. ಈಗ ಅವರು, ಜೈಲಿನಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ. ಬಿಗ್​ ಬಾಸ್ ತಂಡದವರು ರಿಯಾ ಅವರನ್ನು ಅಪ್ರೋಚ್​ ಮಾಡಿದ್ದಾರೆ ಎನ್ನಲಾಗಿದೆ.

ರಿಯಾ ಚಕ್ರವರ್ತಿ ವೈಯಕ್ತಿಕ ಜೀವನದ ಬಗ್ಗೆ ಜನರಿಗೆ ಆಸಕ್ತಿ ಇದೆ. ಸುಶಾಂತ್ ಸಿಂಗ್​ ಜತೆ ಅವರು ಹೇಗಿದ್ದರು ಎನ್ನುವ ಬಗ್ಗೆಯೂ ಅನೇಕರಿಗೆ ಕುತೂಹಲವಿದೆ. ಒಂದೊಮ್ಮೆ ರಿಯಾ ಬಿಗ್​ ಬಾಸ್​ ಮನೆ ಒಳಗೆ ಹೋದರೆ ಒಂದಷ್ಟು ವಿಚಾರಗಳು ಹೊರ ಬರಲಿವೆ. ಕುತೂಹಲದಿಂದ ಜನರು ಕೂಡ ಶೋ ವೀಕ್ಷಣೆ ಮಾಡುವ ಸಾಧ್ಯತೆ ಹೆಚ್ಚು. ಈ ಕಾರಣಕ್ಕೆ ರಿಯಾ ಅವರಿಗೆ ಮೊದಲ ಪ್ರಿಫರೆನ್ಸ್​ ನೀಡಲಾಗುತ್ತಿದೆ.

ಇನ್ನು, ರಿಯಾ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವ ಕುತೂಹಲ ಕೂಡ ಇದೆ. ಅವರು ಜೈಲಿಗೆ ಹೋಗಿ ಬಂದ ನಂತರದಲ್ಲಿ ಸ್ವಲ್ಪ ಕುಗ್ಗಿದಂತೆ ಕಾಣುತ್ತಿದ್ದಾರೆ. ಹೀಗಾಗಿ, ಮಾಧ್ಯಮಗಳ ಎದುರು ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಅವರು ಆಫರ್​ ರಿಜೆಕ್ಟ್​ ಮಾಡಬಹುದು ಅಥವಾ ಬಿಗ್​ ಬಾಸ್​ ಮನೆ ಒಳಗೆ ತೆರಳಿ ತಾವು ಯಾರು ಎಂಬುದನ್ನು ಸಾಬೀತು ಮಾಡಿಕೊಳ್ಳಲು ಶೋನಲ್ಲಿ ಭಾಗವಹಿಸೋಕೆ ಒಪ್ಪಿಕೊಳ್ಳಬಹುದು.

ರಿಯಾ ಮಾತ್ರವಲ್ಲದೆ, ಸಾಕಷ್ಟು ಜನರ ಹೆಸರು ಕೇಳಿ ಬರುತ್ತಿದೆ. ಇವರಲ್ಲಿ ಯಾರ್ಯಾರು ಬಿಗ್​ ಬಾಸ್​ ಮನೆ ಒಳಗೆ ಹೋಗುತ್ತಾರೆ ಎನ್ನುವ ಕುತೂಹಲ ಸದ್ಯದ್ದು. ಬಿಗ್​ ಬಾಸ್​ 14ನೇ ಸೀಸನ್​ ಈ ವರ್ಷದ ಆರಂಭದಲ್ಲಿ ಕೊನೆಯಾಗಿತ್ತು. ಹಿಂದಿ ಸೀಸನ್​ 15 ಅಕ್ಟೋಬರ್​ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಬಳಿಕವೂ ಪ್ರೀತಿ ಮೇಲಿನ ನಂಬಿಕೆ ಕಡಿಮೆಯಾಗಿಲ್ಲ; ಅಚ್ಚರಿಯ ಹೇಳಿಕೆ ನೀಡಿದ ರಿಯಾ ಚಕ್ರವರ್ತಿ

Published On - 9:43 pm, Mon, 31 May 21

Follow Us
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ