AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಕೀಳು ಮಟ್ಟಕ್ಕೆ ಬಂತು ಫ್ಯಾನ್ಸ್​ ವಾರ್​; ದಳಪತಿ ವಿಜಯ್​ ನಿಧನ ಎಂದು ಫೇಕ್​ ನ್ಯೂಸ್​ ಹಬ್ಬಿಸಿದ ಅಜಿತ್​ ಫ್ಯಾನ್ಸ್​

Thalapathy Vijay: ನಟ ದಳಪತಿ ವಿಜಯ್​ ಮೃತಪಟ್ಟರು ಎಂದು ಕೆಲವರು ಸುಳ್ಳು ಸುದ್ದಿ ಹರಡಿದ್ದಾರೆ. ಫ್ಯಾನ್ಸ್​ ವಾರ್​ ಹೆಸರಿನಲ್ಲಿ ಇಷ್ಟು ಕೀಳು ಮಟ್ಟಕ್ಕೆ ಇಳಿದ ಅಭಿಮಾನಿಗಳಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

​ಕೀಳು ಮಟ್ಟಕ್ಕೆ ಬಂತು ಫ್ಯಾನ್ಸ್​ ವಾರ್​; ದಳಪತಿ ವಿಜಯ್​ ನಿಧನ ಎಂದು ಫೇಕ್​ ನ್ಯೂಸ್​ ಹಬ್ಬಿಸಿದ ಅಜಿತ್​ ಫ್ಯಾನ್ಸ್​
ದಳಪತಿ ವಿಜಯ್
TV9 Web
| Edited By: |

Updated on: Mar 27, 2022 | 8:21 AM

Share

ಸ್ಟಾರ್​ ವಾರ್​ ಎಂಬುದು ಎಲ್ಲ ಭಾಷೆಯಲ್ಲೂ ಇದೆ. ಸ್ಟಾರ್​ ಕಲಾವಿದರ ನಡುವೆ ಒಂದಿಲ್ಲೊಂದು ಕಾರಣಕ್ಕೆ ಟಫ್​ ಸ್ಪರ್ಧೆ ಏರ್ಪಡುವುದು, ಅದರಿಂದ ದ್ವೇಷದ ವಾತಾವರಣ ನಿರ್ಮಾಣ ಆಗುವುದು, ಅವರ ಅಭಿಮಾನಿಗಳು ಆವೇಶಕ್ಕೆ ಒಳಗಾಗುವುದು ಹೊಸದೇನೂ ಅಲ್ಲ. ಆದರೆ ಎಲ್ಲದಕ್ಕೂ ಒಂದು ಮಿತಿ ಇರಬೇಕು. ಕೆಲವೊಮ್ಮೆ ಫ್ಯಾನ್ಸ್​ ವಾರ್​ ಎಂಬುದು ತೀರಾ ಕೆಟ್ಟ ಮಟ್ಟಕ್ಕೆ ಇಳಿದುಬಿಡುತ್ತದೆ. ಸ್ಟಾರ್​ ನಟರು ಸೌಹಾರ್ದಯುತವಾಗಿ ಇದ್ದರೂ ಕೂಡ ಅವರ ಫ್ಯಾನ್ಸ್​ ಅತಿರೇಕ ಮಾಡೋದು ನಿಲ್ಲಿಸಲ್ಲ. ಈಗ ನಟ ಅಜಿತ್​ ಕುಮಾರ್ (Ajith Kumar) ಅವರ ಅಭಿಮಾನಿಗಳು ಅದೇ ಹಂತವನ್ನು ತಲುಪಿದ್ದಾರೆ ಎಂಬ ಆರೋಪ ಎದುರಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ #RIPJosephVijay ಎಂಬ ಹ್ಯಾಷ್​ ಟ್ಯಾಗ್​ ಸಖತ್​ ಟ್ರೆಂಡ್​ ಆಗಿದೆ. ಹೌದು, ಈ ರೀತಿಯಾಗಿ ದಳಪತಿ ವಿಜಯ್​ (Thalapathy Vijay) ಅವರಿಗೆ ಅಜಿತ್​ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಅಗೌರವ ತೋರಿಸುತ್ತಿದ್ದಾರೆ. ವಿಜಯ್​ ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ವಿಕೃತಿ ಮರೆಯಲಾಗುತ್ತಿದೆ. ಈ ವಿಷಯ ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತಿದೆ. ವಿಜಯ್​ ನಟನೆಯ ‘ಬೀಸ್ಟ್​’ ಸಿನಿಮಾ (Beast Movie) ಬಿಡುಗಡೆಗೆ ಸಿದ್ಧವಾಗಿರುವ ಹೊಸ್ತಿಲಲ್ಲೇ ಇಂಥ ಕಿರಿಕ್​ ಆರಂಭ ಆಗಿದೆ.

ಕಾಲಿವುಡ್​ನಲ್ಲಿ ದಳಪತಿ ವಿಜಯ್​ ಮತ್ತು ಅಜಿತ್​ ಕುಮಾರ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಇಬ್ಬರೂ ಕೂಡ ತಮ್ಮದೇ ಫ್ಯಾನ್​ ಬೇಸ್​ ಹೊಂದಿದ್ದಾರೆ. ಆದರೆ ಅವರ ಅಭಿಮಾನಿಗಳನ್ನು ಕಂಡರೆ ಇವರ ಅಭಿಮಾನಿಗಳಿಗೆ ಆಗುವುದಿಲ್ಲ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ಅದಕ್ಕೆ ಟ್ವಿಟರ್​ನಲ್ಲಿ ಶುರುವಾಗಿರುವ #RIPJosephVijay ಹ್ಯಾಶ್​ ಟ್ಯಾಗ್​ ಟ್ರೆಂಡ್​ ಸಾಕ್ಷಿ.

ವಿಜಯ್​ ಅವರು ನಿಧನರಾದರು ಎಂದು ಬಣ್ಣಬಣ್ಣದ ಕಥೆ ಕಟ್ಟಿ, ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಚೆನ್ನೈ ಸೂಪರ್​ ಕಿಂಗ್ಸ್​​ ತಂಡದ ನಾಯಕತ್ವದಿಂದ ಧೋನಿ ಹಿಂದೆ ಸರಿದಿದ್ದಕ್ಕೆ ದಳಪತಿ ವಿಜಯ್​ ಆತ್ಮಹತ್ಯೆ ಮಾಡಿಕೊಂಡರು ಎಂದು ಫೇಕ್​ ನ್ಯೂಸ್​ ಹರಡಿಸಲಾಗಿದೆ. ಅಪಘಾತದಲ್ಲಿ ವಿಜಯ್​ ಮೃತಪಟ್ಟರು ಎಂದು ಕೂಡ ಕೆಲವರು ಸುಳ್ಳು ಸುದ್ದಿ ಹರಡಿದ್ದಾರೆ. ಫ್ಯಾನ್ಸ್​ ವಾರ್​ ಹೆಸರಿನಲ್ಲಿ ಇಷ್ಟು ಕೀಳು ಮಟ್ಟಕ್ಕೆ ಇಳಿದ ಅಭಿಮಾನಿಗಳಿಗೆ ಕೆಲವು ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

1996ರಿಂದಲೂ ಅಜಿತ್​ ಮತ್ತು ವಿಜಯ್​ ಫ್ಯಾನ್ಸ್​ ನಡುವೆ ಈ ರೀತಿಯ ವೈರತ್ವ ನಡೆದುಕೊಂಡುಬಂದಿದೆ. ಈ ಸ್ಟಾರ್​ ನಟರ ಅನೇಕ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಪೈಪೋಟಿಗೆ ಇಳಿದ ಉದಾಹರಣೆಗಳಿವೆ. ಅದೇನೇ ಇರಲಿ, ಒಬ್ಬ ನಟ ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸುವ ಮಟ್ಟಕ್ಕೆ ಫ್ಯಾನ್ಸ್​ ವಾರ್​ ತಲುಪಬಾರದು ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನು, ಅಜಿತ್​ ಅವರ ಕೆಲವು ಅಭಿಮಾನಿಗಳು #RIPJosephVijay ಎಂಬ ಹ್ಯಾಶ್​ ಟ್ಯಾಗ್ ಬಳಕೆಯನ್ನು ವಿರೋಧಿಸಿದ್ದಾರೆ. ‘ಈ ರೀತಿ ಮಾಡುವುದು ಸರಿಯಲ್ಲ. ನಿಜವಾದ ಅಜಿತ್​ ಅಭಿಮಾನಿಗಳು ಇದಕ್ಕೆ ಬೆಂಬಲ ನೀಡುವುದಿಲ್ಲ. ಅಜಿತ್​ ಅವರಿಗೂ ಇದೆಲ್ಲ ಇಷ್ಟ ಆಗುವುದಿಲ್ಲ’ ಎಂದು ಕೆಲವರು ಟ್ವೀಟ್​ ಮಾಡಿದ್ದಾರೆ.

ವಿಜಯ್​ ನಟನೆಯ ‘ಬೀಸ್ಟ್​’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಏ.13ರಂದು ಈ ಚಿತ್ರ ವಿಶ್ವಾದ್ಯಂತ ತೆರೆ ಕಾಣುತ್ತಿದೆ. ಕನ್ನಡ ಸೇರಿ ಅನೇಕ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. ಏ.14ರಂದು ಕನ್ನಡದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಕೂಡ ದೊಡ್ಡ ಮಟ್ಟದಲ್ಲಿ ತೆರೆಕಾಣುತ್ತಿದೆ. ಹಾಗಾಗಿ ಈ ಎರಡು ಸಿನಿಮಾಗಳ ನಡುವೆ ಬಿಗ್​ ಕ್ಲ್ಯಾಶ್​ ಏರ್ಪಡಲಿದೆ. ಚಿತ್ರಮಂದಿರಗಳ ಹಂಚಿಕೆ ಮತ್ತು ಗಲ್ಲಾಪೆಟ್ಟಿಗೆ ಕಲೆಕ್ಷನ್​ನಲ್ಲಿ ಭರ್ಜರಿ ಪೈಪೋಟಿ ಇರಲಿದೆ.

ಇದನ್ನೂ ಓದಿ:

ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ದಳಪತಿ ವಿಜಯ್​ ಮನೆಗೆ ಬಾಂಬ್​ ಇಟ್ಟಿದ್ದೇವೆಂದು ಬೆದರಿಕೆ; ಮುಂದೇನಾಯ್ತು?

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್